/kannada/photo-gallery/shukra-gochar-laxmi-narayana-yoga-bless-this-zodiac-signs-with-huge-wealth-and-success-221344 Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು 221344

ನವದೆಹಲಿ: ವಿವಾದಿತ ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ಧ ಕೇರಳ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರುವ ಮೂಲಕ ಕಾನೂನು ಸಮರ ಆರಂಭಿಸಿದೆ. ತಿದ್ದುಪಡಿ ಮಾಡಿದ ಕಾನೂನು ಭಾರತೀಯ ಸಂವಿಧಾನವು ನೀಡಿರುವ ಸಮಾನತೆಯ ಹಕ್ಕಿನ ನಿಬಂಧನೆಗಳಿಗೆ ವಿರುದ್ಧವಾಗಿದೆ ಎಂದು ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ಮಂಗಳವಾರ (ಜನವರಿ 14) ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act) ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ. ಅರ್ಜಿಯನ್ನು 131 ನೇ ವಿಧಿ ಅಡಿಯಲ್ಲಿ ಸಲ್ಲಿಸಲಾಗಿದ್ದು, ಈ ಕಾನೂನನ್ನು ಅಸಂವಿಧಾನಿಕವೆಂದು ಘೋಷಿಸಲು ಕೋರಿದೆ.

ಸಿಎಎ ಸಂವಿಧಾನದ 14, 21 ಮತ್ತು 25 ನೇ ವಿಧಿ ಮತ್ತು ಭಾರತದಲ್ಲಿ ಜಾತ್ಯತೀತತೆಯ ಮೂಲ ರಚನೆಯ ಉಲ್ಲಂಘನೆ ಎಂದು ಘೋಷಿಸಬೇಕು ಎಂದು ಕೇರಳ ಸರ್ಕಾರ ತನ್ನ ಅರ್ಜಿಯಲ್ಲಿ ಮನವಿ ಮಾಡಿದೆ.

131 ನೇ ವಿಧಿಯು ಸುಪ್ರೀಂ ಕೋರ್ಟ್ 14 ನೇ ಪರಿಚ್ಛೇದದ ಅಡಿಯಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳ ರಕ್ಷಕ ಎಂದು ಹೇಳುತ್ತದೆ, ಅದು ಯಾವುದೇ ರೀತಿಯ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದ್ದರೆ, ಸಂವಿಧಾನದ 32 ನೇ ಪರಿಚ್ಛೇದದ ಅಡಿಯಲ್ಲಿ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಹೋಗಬಹುದು (ಇದು ಮೂಲಭೂತ ಹಕ್ಕು ಕೂಡ). ಆರ್ಟಿಕಲ್ 14 ಎಲ್ಲರಿಗೂ ಸಮಾನತೆಯ ಹಕ್ಕಿನ ಭರವಸೆ ನೀಡಿದರೆ, ಆರ್ಟಿಕಲ್ 21 'ಕಾನೂನಿನಿಂದ ಸ್ಥಾಪಿಸಲಾದ ಕಾರ್ಯವಿಧಾನದ ಪ್ರಕಾರ ಹೊರತುಪಡಿಸಿ ಯಾವುದೇ ವ್ಯಕ್ತಿಯು ತನ್ನ ಜೀವನ ಅಥವಾ ವೈಯಕ್ತಿಕ ಸ್ವಾತಂತ್ರ್ಯದಿಂದ ವಂಚಿತನಾಗುವುದಿಲ್ಲ' ಎಂದು ಹೇಳುತ್ತದೆ. ಆರ್ಟಿಕಲ್ 25 'ಎಲ್ಲ ವ್ಯಕ್ತಿಗಳು ಸಮಾನವಾಗಿ ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಅರ್ಹರು' ಎಂದು ಹೇಳುತ್ತದೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಭಾರತೀಯ ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿದೆ. ಅಲ್ಲದೆ, ಸರ್ವರಿಗೂ ಸಮಾನತೆ ಎಂಬ ತತ್ವಕ್ಕೆ ತದ್ವಿರುದ್ಧವಾಗಿದೆ. ಈ ಎಲ್ಲಾ ಕಾರಣಗಳನ್ನು ಪರಿಗಣಿಸಿ ಈ ವಿವಾದಿತ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಸುಪ್ರೀಂಕೋರ್ಟ್‍ ಸಲ್ಲಿಸಿರುವ ಅರ್ಜಿಯಲ್ಲಿ ಕೇರಳ ಸರ್ಕಾರ ತಿಳಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹಲವು ರಾಜ್ಯಗಳು ಆಕ್ಷೇಪಣೆ ವ್ಯಕ್ತಪಡಿಸಿವೆ. ಆದರೆ ವಿಧಾನಸಭೆಯಲ್ಲಿ ಮೊದಲಿಗೆ ಸಿಎಎ ವಿರುದ್ಧ ನಿರ್ಣಯ ಮಂಡಿಸಿದ್ದ ಕೇರಳ ಇದೀಗ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮೊಟ್ಟಮೊದಲ ರಾಜ್ಯ ಸರ್ಕಾರವಾಗಿದೆ.

ಈ ತಿಂಗಳ ಆರಂಭದಲ್ಲಿ ಕೇರಳ ವಿಧಾನಸಭೆಯು ಪೌರತ್ವ ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನಿರ್ಣಯವನ್ನು ಅಂಗೀಕರಿಸಿತು. ಆಡಳಿತಾರೂಢ ಎಲ್‌ಡಿಎಫ್‌ಗೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಮೈತ್ರಿ ಯುಡಿಎಫ್ ಬೆಂಬಲ ನೀಡಿತು. ವಿವಾದಾತ್ಮಕ ಕಾನೂನಿನ ವಿರುದ್ಧ ಇದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆಯನ್ನು ರಕ್ಷಿಸಲು ಏಕತೆಗಾಗಿ ಹೋರಾಡುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಬಿಜೆಪಿಯೇತರ 11 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.

ಈ ವಿಷಯದ ಬಗ್ಗೆ ಈ ಹಿಂದೆ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ ಇತರರಲ್ಲಿ ಕೇರಳದ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ನ ಎರಡನೇ ಅತಿದೊಡ್ಡ ಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮತ್ತು ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಸೇರಿದ್ದಾರೆ.

Section: 
English Title: 
Kerala move Supreme Court against Citizenship Amendment Act
News Source: 
Home Title: 

CAA ವಿರುದ್ಧ ಸುಪ್ರೀಂ ಮೊರೆ ಹೋದ ಕೇರಳ

CAA ವಿರುದ್ಧ ಸುಪ್ರೀಂ ಮೊರೆ ಹೋದ ಕೇರಳ
Author No use : 
Yashaswini V
Yes
Is Blog?: 
No
Tags: 
Facebook Instant Article: 
Yes
Mobile Title: 
CAA ವಿರುದ್ಧ ಸುಪ್ರೀಂ ಮೊರೆ ಹೋದ ಕೇರಳ
Publish Later: 
No
Publish At: 
Tuesday, January 14, 2020 - 12:18
Created By: 
Yashaswini V
Updated By: 
Yashaswini V
Published By: 
Yashaswini V