ರೈತರ ಆದಾಯವನ್ನು ದ್ವಿಗುಣಗೊಳಿಸುವ ಸರ್ಕಾರದ ಯೋಜನೆ ಬಗ್ಗೆ ಇಲ್ಲಿದೆ ಮಾಹಿತಿ

ದೇಶದ ಜಿಡಿಪಿಯಲ್ಲಿ ಶೇಕಡಾ 14 ರಷ್ಟು ಕೃಷಿ ಕೊಡುಗೆ ನೀಡುತ್ತದೆ.

Written by - Yashaswini V | Last Updated : Feb 20, 2020, 06:54 AM IST
ರೈತರ ಆದಾಯವನ್ನು ದ್ವಿಗುಣಗೊಳಿಸುವ ಸರ್ಕಾರದ ಯೋಜನೆ ಬಗ್ಗೆ ಇಲ್ಲಿದೆ ಮಾಹಿತಿ title=

ನವದೆಹಲಿ: ದೇಶದ ಜಿಡಿಪಿಯಲ್ಲಿ ಶೇಕಡಾ 14 ರಷ್ಟು ಕೃಷಿ ಕೊಡುಗೆ ನೀಡುತ್ತದೆ ಮತ್ತು ದೇಶದ ಅರ್ಧದಷ್ಟು ಜನಸಂಖ್ಯೆಯು ಕೃಷಿಯನ್ನು ಅವಲಂಬಿಸಿದೆ. ಹೆಚ್ಚುತ್ತಿರುವ ನಗರೀಕರಣ ಮತ್ತು ಕೃಷಿಯಲ್ಲಿ ರಾಸಾಯನಿಕಗಳ ಬಳಕೆಯಿಂದಾಗಿ, ಜಮೀನಿನ ಮಣ್ಣಿನ ಫಲವತ್ತತೆ ನಿರಂತರವಾಗಿ ಕಡಿಮೆಯಾಗುತ್ತಿದೆ, ಇದು ಕೃಷಿ ಉತ್ಪಾದನೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

* ಮಣ್ಣಿನ ಆರೋಗ್ಯ ಕಾರ್ಡ್ ಯೋಜನೆ:


ಕೇಂದ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಗ್ರಾಮಗಳ ಸ್ಥಿತಿಯನ್ನು ಸುಧಾರಿಸಲು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಉದ್ದೇಶಕ್ಕಾಗಿ ಮಣ್ಣಿನ ಆರೋಗ್ಯ ಕಾರ್ಡ್ ಯೋಜನೆಯನ್ನು ಪ್ರಾರಂಭಿಸಲಾಯಿತು. ಜಮೀನಿನ ಮಣ್ಣಿನಲ್ಲಿರುವ ಪೋಷಕಾಂಶಗಳ ಕೊರತೆಯನ್ನು ತೆಗೆದುಹಾಕುವ ಮೂಲಕ ಉತ್ಪಾದನೆಯನ್ನು ಹೆಚ್ಚಿಸುವುದು ಮತ್ತು ಕೃಷಿಯಲ್ಲಿ ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.

* ಪ್ರಧಾನಿ ಈ ಯೋಜನೆಯನ್ನು ಪ್ರಾರಂಭಿಸಿದರು:


ಮಣ್ಣಿನ ಆರೋಗ್ಯ ಕಾರ್ಡ್ ದಿನವನ್ನು ಫೆಬ್ರವರಿ 19 ರಂದು ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಮಣ್ಣಿನ ಆರೋಗ್ಯ ಕಾರ್ಡ್ ಯೋಜನೆಯನ್ನು ಫೆಬ್ರವರಿ 19, 2015 ರಂದು ರಾಜಸ್ಥಾನದ ಸೂರತ್‌ಗಢದಲ್ಲಿ ಪ್ರಾರಂಭಿಸಿದರು. ಈ ಯೋಜನೆಯ ಉದ್ದೇಶವು ಪ್ರತಿ ಎರಡು ವರ್ಷಗಳಿಗೊಮ್ಮೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್‌ಗಳನ್ನು ವಿತರಿಸುವುದರಿಂದ ಮಣ್ಣಿನಲ್ಲಿನ ಪೋಷಕಾಂಶಗಳ ಕೊರತೆಯನ್ನು ನೀಗಿಸಲು ಕ್ರಮಗಳನ್ನು ತೆಗೆದುಕೊಳ್ಳಬಹುದು.

* ದೊಡ್ಡ ಯೋಜನೆ:


ರೈತರಿಗೆ ಅನುಕೂಲವಾಗುವ ದೇಶದ ಅತಿದೊಡ್ಡ ಯೋಜನೆ ಇದಾಗಿದೆ. ಮೊದಲ ಅವಧಿಯಲ್ಲಿ, 2015 ರಿಂದ 2017 ರ ಅವಧಿಯಲ್ಲಿ 10.74 ಕೋಟಿ ರೈತರಿಗೆ ಮಣ್ಣಿನ ಕಾರ್ಡ್‌ಗಳನ್ನು ನೀಡಲಾಯಿತು. ಎರಡನೇ ಅವಧಿಯಲ್ಲಿ, 2019 ರ ವೇಳೆಗೆ ಸುಮಾರು 12 ಕೋಟಿ ರೈತರಿಗೆ ಈ ಕಾರ್ಡ್ ನೀಡಲಾಗಿದೆ.

* 11.74 ಕೋಟಿ ಕಾರ್ಡ್‌ಗಳು:


ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಾತನಾಡಿ, ಎರಡನೇ ಹಂತದಲ್ಲಿ 11.74 ಕೋಟಿ ಮಣ್ಣಿನ ಆರೋಗ್ಯ ಕಾರ್ಡ್ ವಿತರಿಸಲಾಗಿದೆ. ನಮ್ಮ ರೈತರು ಇದರ ಲಾಭ ಪಡೆದಿದ್ದಾರೆ. ಈ ದಿಕ್ಕಿನಲ್ಲಿ ಹೆಚ್ಚಿನ ಕೆಲಸಗಳನ್ನು ಮಾಡಬೇಕಾಗಿದೆ ಎಂದು ಹೇಳಿದರು.

* ಮಾದರಿ ಗ್ರಾಮಗಳ ರಚನೆ:
ದೇಶದ ವಿವಿಧ ರಾಜ್ಯಗಳಲ್ಲಿ ಮಾದರಿ ಗ್ರಾಮಗಳನ್ನು ನಿರ್ಮಿಸಲಾಗಿದೆ ಎಂದು ನರೇಂದ್ರ ಸಿಂಗ್ ತೋಮರ್ ಹೇಳಿದರು. ಈ ಗ್ರಾಮಗಳಲ್ಲಿ ಪ್ರತಿಯೊಂದು ಕ್ಷೇತ್ರದ ಮಣ್ಣಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇಲ್ಲಿಯವರೆಗೆ, ಮಾದರಿ ಗ್ರಾಮ ಅಭಿವೃದ್ಧಿ ಕಾರ್ಯಕ್ರಮದಡಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 6,954 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ 26.83 ಲಕ್ಷ ಮಣ್ಣಿನ ಮಾದರಿಗಳನ್ನು ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿದೆ. ಈ ಪೈಕಿ 21 ಲಕ್ಷ ಮಾದರಿಗಳನ್ನು ಜೋಡಿಸಲಾಗಿದೆ.

* 3.33 ಕೋಟಿ ಮಾದರಿಗಳನ್ನು ಪರಿಶೀಲಿಸಲಾಗಿದೆ:
ಈ ಹಿಂದೆ ಪ್ರತಿವರ್ಷ 1.78 ಕೋಟಿ ಮಾದರಿಗಳನ್ನು ಪರೀಕ್ಷಿಸಲಾಗುತ್ತಿತ್ತು, ಈಗ ಈ ಸಂಖ್ಯೆ 3.33 ಕೋಟಿಗೆ ಏರಿದೆ ಎಂದು ಕೃಷಿ ಸಚಿವರು ಹೇಳಿದರು. ಇದಕ್ಕಾಗಿ ದೇಶದಲ್ಲಿ ಮಣ್ಣಿನ ಪರೀಕ್ಷಾ ಪ್ರಯೋಗಾಲಯಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ದೇಶದಲ್ಲಿ 7949 ಸಣ್ಣ ಮತ್ತು ದೊಡ್ಡ ಪ್ರಯೋಗಾಲಯಗಳಿವೆ. ಇದು ರೈತರು ಮತ್ತು ಕೃಷಿಯ ದೃಷ್ಟಿಯಿಂದ ಅಸಮರ್ಪಕವಾಗಿದೆ ಎಂದು ಹೇಳಬಹುದು. ದೇಶಾದ್ಯಂತ 10,845 ಸ್ವಯಂ ಪರೀಕ್ಷಾ ಪ್ರಯೋಗಾಲಯಗಳನ್ನು ನಿರ್ಮಿಸಲಿದೆ. ಇದರಿಂದ ರೈತರು ತಮ್ಮ ಕೃಷಿಯ ಆರೋಗ್ಯಕ್ಕೆ ಅನುಗುಣವಾಗಿ ಗೊಬ್ಬರವನ್ನು ಸೇರಿಸಬಹುದು ಎಂದವರು ತಿಳಿಸಿದರು.

* 1122 ಕೋಟಿ ಬಜೆಟ್:
2009 ರಿಂದ 2014 ರ ನಡುವೆ ಮಣ್ಣಿನ ಆರೋಗ್ಯ ಕಾರ್ಡ್ ಯೋಜನೆಯಲ್ಲಿ 93.92 ಕೋಟಿ ರೂ.ಗಳ ಬಜೆಟ್ ಇದೆ ಎಂದು ಕೃಷಿ ಸಚಿವರು ಹೇಳಿದರು. ಆದರೆ 2014 ರಿಂದ 20 ರವರೆಗೆ 1122 ಕೋಟಿ ರೂ. ನೀಡಲಾಗಿದೆ ಎಂದವರು ತಿಳಿಸಿದರು.

Trending News