/kannada/photo-gallery/try-this-simple-trick-to-remove-cockroaches-in-every-corner-of-the-house-within-few-minutes-249320 ಮನೆಯ ಮೂಲೆ ಮೂಲೆಯಲ್ಲಿ ಅವಿತಿರುವ ಜಿರಳೆಗಳನ್ನು 5 ನಿಮಿಷದಲ್ಲಿ ಹೊರಹಹಾಕಲು ಸಿಂಪಲ್ ಟ್ರಿಕ್ ಮನೆಯ ಮೂಲೆ ಮೂಲೆಯಲ್ಲಿ ಅವಿತಿರುವ ಜಿರಳೆಗಳನ್ನು 5 ನಿಮಿಷದಲ್ಲಿ ಹೊರಹಹಾಕಲು ಸಿಂಪಲ್ ಟ್ರಿಕ್ 249320

ಸರಕಾರಿ ಪ್ರೌಢಶಾಲೆಗಳಲ್ಲಿ 10 ನೇ ತರಗತಿಯಲ್ಲಿ ಅನುತ್ತೀರ್ಣ ಆಗಿರುವ ವಿದ್ಯಾರ್ಥಿಗಳು ಮರು ದಾಖಲಾತಿ ಪಡೆಯಲು ಅವಕಾಶ

ಮರು ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಕಾಳಜಿಯನ್ನು ನೀಡಿ, ಅವರಲ್ಲಿ ಧನಾತ್ಮಕ ಮನೋಭಾವನೆ ಉಂಟುಮಾಡಲು ವಿವಿಧ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು.

Written by - Manjunath N | Last Updated : Oct 5, 2024, 11:54 PM IST
  • ಇತರೆ ವಿದ್ಯಾರ್ಥಿಗಳಂತೆ ಶಾಲೆಯಲ್ಲಿ ಪೂರ್ಣಾವಧಿ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು.
  • ಮತ್ತು ಎಲ್ಲಾ ವಿಷಯದ ತರಗತಿಗೆ ಪೂರ್ಣಾವಧಿ ಹಾಜರಾಗಬೇಕು.
  • ಈ ರೀತಿ ಪೂರ್ಣಾವಧಿ ಅಧ್ಯಯನ ಮಾಡಿ ಹಿಂದಿನ ವರ್ಷ ಅನುತ್ತೀರ್ಣರಾದ ವಿಷಯಗಳಲ್ಲಿ ಆ ವರ್ಷದ ಪರೀಕ್ಷೆ ಬರೆಯಬೇಕು.
 ಸರಕಾರಿ ಪ್ರೌಢಶಾಲೆಗಳಲ್ಲಿ 10 ನೇ ತರಗತಿಯಲ್ಲಿ ಅನುತ್ತೀರ್ಣ ಆಗಿರುವ ವಿದ್ಯಾರ್ಥಿಗಳು ಮರು ದಾಖಲಾತಿ ಪಡೆಯಲು ಅವಕಾಶ title=
ಸಾಂಧರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 10 ನೇ ತರಗತಿ ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ 10 ನೇ ತರಗತಿ ಪುನರಾವರ್ತಿಸುವ ಕುರಿತು ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತಂದು ಶಿಕ್ಷಣವನ್ನು ಮುಂದುವರೆಸುವಂತೆ ಹಾಗೂ ಶಾಲೆ ಬಿಡದಂತೆ ಕ್ರಮವಹಿಸುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ದಿನಾ ಬೆಳಿಗ್ಗೆ ಈ ಒಣಹಣ್ಣಿನ ರಸ ಕುಡಿಯೋದಕ್ಕೆ ಇಷ್ಟೊಂದು ಫಿಟ್ ಆಗಿದ್ದಾರಂತೆ ವಿರಾಟ್ ಕೊಹ್ಲಿ! ಸಣ್ಣ ಆಗೋಕೆ ಪರದಾಡೋರಿಗೆ ಸ್ವತಃ ಅವರೇ ಹೇಳಿದ ಟಿಪ್ಸ್ ಇದು

ರೆಗ್ಯುಲರ್ ಶಾಲಾ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಆಯಾ ವರ್ಷದಲ್ಲಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಇವುಗಳನ್ನು ಬರೆದು ಅಂತಿಮವಾಗಿ ಅನುತ್ತೀರ್ಣರಾದಲ್ಲಿ ಪುನಃ ಮುಂದಿನ ಒಂದು ಶೈಕ್ಷಣಿಕ ವರ್ಷದಲ್ಲಿ ಶಾಲಾ ಅಭ್ಯರ್ಥಿಯಾಗಿ ಸರ್ಕಾರಿ ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಛಿಸಿದಲ್ಲಿ ಮರು ದಾಖಲಾತಿಗೆ ಅವಕಾಶ ನೀಡಲಾಗುತ್ತದೆ.

ಅನುತ್ತೀರ್ಣರಾದ ವಿದ್ಯಾರ್ಥಿಗಳು ಶಾಲೆಗಳಲ್ಲಿ ಮರು ದಾಖಲಾತಿ ಪಡೆದಲ್ಲಿ ಇತರೆ ವಿದ್ಯಾರ್ಥಿಗಳಂತೆ ಶಾಲೆಯಲ್ಲಿ ಪೂರ್ಣಾವಧಿ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಮತ್ತು ಎಲ್ಲಾ ವಿಷಯದ ತರಗತಿಗೆ ಪೂರ್ಣಾವಧಿ ಹಾಜರಾಗಬೇಕು. ಈ ರೀತಿ ಪೂರ್ಣಾವಧಿ ಅಧ್ಯಯನ ಮಾಡಿ ಹಿಂದಿನ ವರ್ಷ ಅನುತ್ತೀರ್ಣರಾದ ವಿಷಯಗಳಲ್ಲಿ ಆ ವರ್ಷದ ಪರೀಕ್ಷೆ ಬರೆಯಬೇಕು.

ಇದನ್ನೂ ಓದಿ: ದಿನಾ ಬೆಳಿಗ್ಗೆ ಈ ಒಣಹಣ್ಣಿನ ರಸ ಕುಡಿಯೋದಕ್ಕೆ ಇಷ್ಟೊಂದು ಫಿಟ್ ಆಗಿದ್ದಾರಂತೆ ವಿರಾಟ್ ಕೊಹ್ಲಿ! ಸಣ್ಣ ಆಗೋಕೆ ಪರದಾಡೋರಿಗೆ ಸ್ವತಃ ಅವರೇ ಹೇಳಿದ ಟಿಪ್ಸ್ ಇದು

ಸರ್ಕಾರಿ ಪ್ರೌಢಶಾಲೆಗಳಲ್ಲಿ 10 ನೇ ತರಗತಿಗೆ ಮರು ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಸರ್ಕಾರದಿಂದ ನೀಡುವ ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್. ಅಕ್ಷರ ದಾಸೋಹ, ಇತರೆ ಸೌಲಭ್ಯಗಳನ್ನು ನೀಡಲಾಗುವುದು.

ಮರು ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಕಾಳಜಿಯನ್ನು ನೀಡಿ, ಅವರಲ್ಲಿ ಧನಾತ್ಮಕ ಮನೋಭಾವನೆ ಉಂಟುಮಾಡಲು ವಿವಿಧ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು.

ಮರು ದಾಖಲಾತಿ ಪಡೆದ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಪ್ರೊತ್ಸಾಹಿಸಿ, ಶಾಲಾ ಸಿಬ್ಬಂದಿ ವರ್ಗದವರು ಉತ್ತಮ ಸಾಧನೆ ಮಾಡುವಂತೆ ಮಕ್ಕಳಿಗೆ ಮನವರಿಕೆ ಮಾಡಿ ಕೊಡುವರು. ವಿದ್ಯಾರ್ಥಿಗಳಿಗೆ ಆಯಾ ವಿಷಯಗಳಲ್ಲಿ ಹಮ್ಮಿಕೊಳ್ಳುವ ವಿಶೇಷ ತರಗತಿಗಳಲ್ಲಿ ಸೇರಿಸಿ ಕಲಿಕೆಯಲ್ಲಿ ಸುಧಾರಣೆಯಾಗುವಂತೆ ಗಮನಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.