ಭತ್ತಕ್ಕೆ 2300 ರೂ. ಬೆಂಬಲ ಬೆಲೆ; ಅನ್ನದಾತರಿಗೆ ದೀಪಾವಳಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಅನ್ನದಾತರಿಗೆ ದೀಪಾವಳಿ ಹಬ್ಬಕ್ಕೆ ಬೆಂಬಲ ಬೆಲೆಯ ಗಿಫ್ಟ್ ನೀಡಿದೆ. ಭತ್ತದ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಭತ್ತ ಬೆಳೆಗಾರರ ಬದುಕಿಗೆ ಬೆಳಕು ಬೀರಿದೆ.ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಇಂದು ಸುದ್ದಿಗೋಷ್ಠಿಯಲ್ಲಿ  ಕೇಂದ್ರ ಸರ್ಕಾರ ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ ನೀಡಿದರು.

Written by - Prashobh Devanahalli | Edited by - Manjunath N | Last Updated : Oct 27, 2024, 08:38 PM IST
  • -2013-14ರಲ್ಲಿ 1300 ರೂ. ಇತ್ತು; 2024-25ಕ್ಕೇ 2300 ರೂಪಾಯಿಗೆ ಹೆಚ್ಚಳ
  • -ಒಂದು ದಶಕದಲ್ಲಿ ಬರೋಬ್ಬರಿ 1000 ರೂ. ಅಧಿಕ ಬೆಂಬಲ ಬೆಲೆ ನಿಗದಿ
  • ಪ್ರಸ್ತುತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ, 124 ಲಕ್ಷ ಟನ್ ಅಕ್ಕಿ ಸಂಗ್ರಕ್ಕೆ ಯೋಜನೆ
ಭತ್ತಕ್ಕೆ 2300 ರೂ. ಬೆಂಬಲ ಬೆಲೆ; ಅನ್ನದಾತರಿಗೆ ದೀಪಾವಳಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ title=

ನವದೆಹಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ದೀಪಾವಳಿ ಹಬ್ಬಕ್ಕೆ ಬೆಂಬಲ ಬೆಲೆಯ ಗಿಫ್ಟ್ ನೀಡಿದೆ. ಭತ್ತದ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಭತ್ತ ಬೆಳೆಗಾರರ ಬದುಕಿಗೆ ಬೆಳಕು ಬೀರಿದೆ.ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಇಂದು ಸುದ್ದಿಗೋಷ್ಠಿಯಲ್ಲಿ  ಕೇಂದ್ರ ಸರ್ಕಾರ ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ ನೀಡಿದರು.

2300 ರೂ.ಗೆ ಬೆಂಬಲ ಬೆಲೆ ಹೆಚ್ಚಳ: 2013-14 ರಲ್ಲಿ ಪ್ರತಿ ಕ್ವಿಂಟಲ್ ಭತ್ತಕ್ಕೆ ₹1310 ಇದ್ದು, ಈಗದನ್ನು 2300 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

185 ಲಕ್ಷ ಟನ್ ಭತ್ತ, 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಯೋಜನೆ: ಇನ್ನು, ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮವು ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ ಮತ್ತು 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಯೋಜನೆ  ಸಹ ಹಾಕಿಕೊಂಡಿದೆ ಎಂದರು.

14 ಲಕ್ಷ ಮೆಟ್ರಿಕ್ ಟನ್ ಸಂಗ್ರಹಕ್ಕೆ ಸ್ಥಳವಿದೆ: ಭತ್ತದ ಬೆಳೆಗಾರರ ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಮುಂಗಾರು ಹಂಗಾಮು ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಪ್ರಸ್ತುತ 14 LMT ಭತ್ತ ಸಂಗ್ರಹಕ್ಕೆ ಸ್ಥಳಾವಕಾಶವಿದೆ. ಪಂಜಾಬಿನಲ್ಲಿ ಸಂಗ್ರಹಿಸಿರುವ ಅಕ್ಕಿಯನ್ನು ತ್ವರಿತವಾಗಿ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿಸಿದರು.

-2700 ಮಂಡಿಗಳಲ್ಲಿ ಸಂಗ್ರಹ: ಅಕ್ಟೋಬರ್  1ರಿಂದ  2700 ಮಂಡಿಗಳಲ್ಲಿ ಭತ್ತ ಸಂಗ್ರಹಣೆ ಪ್ರಾರಂಭಿಸಿದ್ದು, ಇಂದಿಗೆ ಒಟ್ಟು 50 LMT ಭತ್ತವನ್ನು ಸಂಗ್ರಹಿಸಲಾಗಿದೆ ಎಂದರು.

ನಾಮನಿರ್ದೇಶನದ ಆಧಾರದ ಮೇಲೆ CWC/SWC ಗೋದಾಮುಗಳನ್ನು ಬಾಡಿಗೆಗೆ ತೆಗೆದುಕೊಂಡು ಶೇಖರಣೆಗೆ ವ್ಯವಸ್ಥೆ ಮಾಡಲಾಗಿದೆ. ಗೋಧಿ ದಾಸ್ತಾನು ತ್ವರಿತ ಸ್ಥಳಾಂತರ ಜೊತೆಗೆ PEG ಯೋಜನೆಯಡಿ 31 LMT ಶೇಖರಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: ಬೇಸರದಿಂದಲೇ ಐಶ್ವರ್ಯಾ ರೈ ಜೊತೆಗಿನ ಡಿವೋರ್ಸ್‌ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಬಚ್ಚನ್.! ಕೊನೆಗೂ ಬೇರ್ಪಟ್ಟೇ ಬಿಟ್ರಾ ಬಾಲಿವುಡ್‌ ಕಪಲ್?

 ಆನ್ ಲೈನ್ ಪೋರ್ಟಲ್: ಅಕ್ಕಿ ಗಿರಣಿದಾರರಿಗೆ ದೂರು ಪರಿಹಾರಕ್ಕಾಗಿ ಆನ್‌ಲೈನ್ ಪೋರ್ಟಲ್ ಅನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದೂ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ಪ್ರಮುಖಾಂಶಗಳು:
- ಅಕ್ಟೋಬರ್ 24 ಕ್ಕೆ 34.75 LMT ನ ಅಖಿಲ ಭಾರತ ಚಾಲನಾ ಯೋಜನೆಯಿಂದ ಪಂಜಾಬ್‌ಗೆ ಸುಮಾರು 40% (13.76 LMT) ಪಾಲನ್ನು ಹಂಚಲಾಗಿದೆ.

- ಚಾಲನಾ ಯೋಜನೆ ಮತ್ತು ಶೇಖರಣಾ ಸಾಮರ್ಥ್ಯ ರಚನೆ/ನೇಮಕವನ್ನು ವಾರಕ್ಕೊಮ್ಮೆ ಮೇಲ್ವಿಚಾರಣೆ ಮಾಡಲು ಉನ್ನತ ಮಟ್ಟದ ಸಮಿತಿಯನ್ನು ಸ್ಥಾಪಿಸಲಾಗಿದೆ.

- ಭತ್ತದ ಪ್ರಸ್ತುತ ಔಟ್ ಟರ್ನ್ ಅನುಪಾತ (OTR) ಮತ್ತು ಡ್ರೈಯೇಜ್ ಘಟನೆಗಳನ್ನು ಪರಿಶೀಲಿಸುವ ಅಧ್ಯಯನವನ್ನು ನಡೆಸಲು ಐಐಟಿ ಖರಗ್‌ಪುರವನ್ನು ನಿಯೋಜಿಸಲಾಗಿದೆ.

- 15 ದಿನಗಳ ಕಾಯುವ ಅವಧಿಯನ್ನು ಮೀರಿ ಗೊತ್ತುಪಡಿಸಿದ ಡಿಪೋಗಳಲ್ಲಿ ಖಾಲಿ ಜಾಗದ ಲಭ್ಯತೆಯಿಲ್ಲದ ಸಂದರ್ಭದಲ್ಲಿ ಹೆಚ್ಚುವರಿ ಸಾರಿಗೆ ಶುಲ್ಕಗಳನ್ನು ಅನುಮತಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News