ನಾನೇ ಅಭ್ಯರ್ಥಿ ಎಂದು ತಿಳಿದು ಭರತ್ ನನ್ನು ಗೆಲ್ಲಿಸಿ: ಬಸವರಾಜ ಬೊಮ್ಮಾಯಿ

  ಈ  ಚುನಾವಣೆಯಲ್ಲಿ ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದು ಭರತ ಬೊಮ್ಮಾಯಿಯನ್ನು ಬೆಂಬಲಿಸಿ ಗೆಲ್ಲಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಮನವಿ ಮಾಡಿದರು.

Written by - Prashobh Devanahalli | Edited by - Manjunath N | Last Updated : Oct 27, 2024, 10:30 PM IST
  • ನಾನು ಈ ಬಾರಿ ಚುನಾವಣೆಯಲ್ಲಿ ನನ್ನ ಮಗನನ್ನು ನಿಲ್ಲಿಸಬಾರದು ಎಂದು ತೀರ್ಮಾನಿಸಿದ್ದೆ.
  • ಹೈಕಮಾಂಡ್ ನಿವು ಇರಲೇಬೇಕು. ನಿಮ ಮಗನಿಗೆ ಟಿಕೆಟ್ ಕೊಡುತ್ತೇವೆ.ನೀವು ಅಲ್ಲಿ ಕೆಲಸ ಮಾಡಿ ಎಂದು ಹೇಳಿದ್ದಾರೆ‌.
  • ನಾನು ಈ ತಾಲೂಕನ್ನು ಎಂದು ಬಿಟ್ಟು ಹೋಗುವುದಿಲ್ಲ. ನಿಮ್ಮ ಪ್ರೀತಿಗೆ ಎಂದೂ ಬೆಲೆ ಕಟ್ಟಲಾಗುವುದಿಲ್ಲ.
 ನಾನೇ ಅಭ್ಯರ್ಥಿ ಎಂದು ತಿಳಿದು ಭರತ್ ನನ್ನು ಗೆಲ್ಲಿಸಿ: ಬಸವರಾಜ ಬೊಮ್ಮಾಯಿ title=

ಹಾವೇರಿ( ಶಿಗ್ಗಾವಿ):  ಈ  ಚುನಾವಣೆಯಲ್ಲಿ ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದು ಭರತ ಬೊಮ್ಮಾಯಿಯನ್ನು ಬೆಂಬಲಿಸಿ ಗೆಲ್ಲಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಮನವಿ ಮಾಡಿದರು.

ಅವರು ಭಾನುವಾರ ತಾಲೂಕಿನ ಹೊಸೂರು, ದುಂಡಸಿ, ಜಕನಕಟ್ಟಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ಭರತ್ ಬೊಮ್ಮಾಯಿ ಪರ ಮತ ಯಾಚನೆ ಮಾಡಿದರು. ಕಳೆದ ಹದಿನೈದು ವರ್ಷದಲ್ಲಿ ಈ ತಾಲೂಕಿನ ಅಭಿವೃದ್ಧಿಯ ಚಿತ್ರಣ ಹೇಗೆ ಬದಲಾಗಿದೆ ಎನ್ನುವುದನ್ನು ತಾವೆಲ್ಲ ನೊಡಿದ್ದೀರಿ. ಅಭಿವೃದ್ಧಿ ನಿಂತ ನೀರಲ್ಲ ಅದು ನಿರಂತರವಾಗಿ ಮುಂದುವರೆಯಬೇಕು ಹೀಗಾಗಿ ನಾವು ಚುನಾವಣೆಯನ್ನು ಎದುರಿಸುತ್ತಿದ್ದೇವೆ ಎಂದರು.

ಇದನ್ನೂ ಓದಿ: ಬೇಸರದಿಂದಲೇ ಐಶ್ವರ್ಯಾ ರೈ ಜೊತೆಗಿನ ಡಿವೋರ್ಸ್‌ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಬಚ್ಚನ್.! ಕೊನೆಗೂ ಬೇರ್ಪಟ್ಟೇ ಬಿಟ್ರಾ ಬಾಲಿವುಡ್‌ ಕಪಲ್?

ನಾನು ಈ ಬಾರಿ ಚುನಾವಣೆಯಲ್ಲಿ ನನ್ನ ಮಗನನ್ನು ನಿಲ್ಲಿಸಬಾರದು ಎಂದು ತೀರ್ಮಾನಿಸಿದ್ದೆ. ಹೈಕಮಾಂಡ್ ನೀವು ಇರಲೇಬೇಕು. ನಿಮ್ಮ ಮಗನಿಗೆ ಟಿಕೆಟ್ ಕೊಡುತ್ತೇವೆ. ನೀವು ಅಲ್ಲಿ ಕೆಲಸ ಮಾಡಿ ಎಂದು ಹೇಳಿದ್ದಾರೆ‌. ನಾನು ಈ ತಾಲೂಕನ್ನು ಎಂದು ಬಿಟ್ಟು ಹೋಗುವುದಿಲ್ಲ. ನಿಮ್ಮ ಪ್ರೀತಿಗೆ ಎಂದೂ ಬೆಲೆ ಕಟ್ಟಲಾಗುವುದಿಲ್ಲ. ಈ ಕ್ಷೇತ್ರದ ಅಭಿವೃದ್ಧಿ ಇನ್ನೂ ಆಗಬೇಕಿದೆ. ಭರತ್ ಬೊಮ್ಮಾಯಿ ಅಭಿವೃದ್ದಿ ಕಾರ್ಯ ಮುಂದುವರೆಸುತ್ತಾನೆ. ಭರತ್ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ ಪ್ರವಾಹ ಬಂದಾಗ ಕೇಂದ್ರ ಸರ್ಕಾರ ನೀಡಿದ್ದಕ್ಕಿಂತ ಎರಡು ಪಟ್ಟು ಬೆಳೆ ಪರಿಹಾರ ನೀಡಿದ್ದೇವೆ. ರಾಜ್ಯದಲ್ಲಿ ಸುಮಾರು ಏಳು ಸಾವಿರ ಕೋಟಿ ರೂ. ಪರಿಹಾರ ನೀಡಿದ್ದೇವೆ. ಶಿಗ್ಗಾವಿ ಕ್ಷೇತ್ರದ ರೈತರಿಗೂ ಬಂದಿದೆ. ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ನಮ್ಮ ನಾಯಕರಾದ ಯಡಿಯೂರಪ್ಪ ಅವರ ನಿರ್ಧಾರದಂತೆ ಪ್ರತಿ ಮನೆಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಿದ್ದೇವೆ. ಶಿಗ್ಗಾವಿ ಕ್ಷೇತ್ರದಲ್ಲಿ ಸುಮಾರು 18 ಸಾವಿರ ಮನೆಗಳ ನಿರ್ಮಾಣ ಮಾಡಿದ್ದೇವೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News