COVID-19: ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಮಾಹಿತಿ ಸಂಗ್ರಹಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಿಹಾರ, ಅಸ್ಸಾಂ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಕರೋನಾವೈರಸ್ ಮತ್ತು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು.  

Last Updated : Jul 20, 2020, 10:00 AM IST
COVID-19: ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಮಾಹಿತಿ ಸಂಗ್ರಹಿಸಿದ ಪ್ರಧಾನಿ ಮೋದಿ title=

ನವದೆಹಲಿ: ಬಿಹಾರ, ಅಸ್ಸಾಂ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು. ಈ ಸಮಯದಲ್ಲಿ ಅವರು ರಾಜ್ಯಗಳಲ್ಲಿನ   ಕೊರೋನಾವೈರಸ್ (Coronavirus)   ಪರಿಸ್ಥಿತಿ ಮತ್ತು ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ಸಹಾಯ ನೀಡುವುದಾಗಿ ಭರವಸೆ ನೀಡಿದರು.

ಉತ್ತರಾಖಂಡ:
ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರೊಂದಿಗೆ ಮಾತನಾಡಿ ಉತ್ತರಾಖಂಡದಲ್ಲಿ ಕೋವಿಡ್ -19 ನಿಂದ ಬಳಲುತ್ತಿರುವ ಸೈನಿಕರ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಕರೋನಾವೈರಸ್ ಸೋಂಕಿತ ಸೈನಿಕರು ಬೇಗ ಗುಣಮುಖರಾಗುವಂತೆ ಪ್ರಧಾನಿ ಮೋದಿ ಹಾರೈಸಿದರು.

ಮಾನ್ಸೂನ್, ಚಳಿಗಾಲದಲ್ಲಿ ಕರೋನಾ ಹೆಚ್ಚಾಗುವ ಸಾಧ್ಯತೆ: IIT, ಏಮ್ಸ್ ಸಂಶೋಧನೆ

ತಮಿಳುನಾಡಿನಲ್ಲಿ ವೇಗವಾಗಿ ಹರಡುತ್ತಿರುವ ಕರೋನಾ:
1.65 ಲಕ್ಷ  ಕೋವಿಡ್ -19 (Covid-19)  ಪ್ರಕರಣಗಳು ದಾಖಲಾಗಿರುವ ತಮಿಳುನಾಡಿನಲ್ಲಿ ಸೋಂಕನ್ನು ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದ ಅಂಶಗಳ ಕುರಿತು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ  ಕರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಸಂಗ್ರಹಿಸಿದರು. 

ಪ್ರವಾಹಕ್ಕೆ ತತ್ತರಿಸಿದ ಅಸ್ಸಾಂಗೆ ಕೇಂದ್ರ ಸರ್ಕಾರದ ಸಹಾಯ ಹಸ್ತ
ಕರೋನಾವೈರಸ್ ಸೋಂಕು ಅಸ್ಸಾಂ (Assam)ನಲ್ಲಿಯೂ ವೇಗವಾಗಿ ಹೆಚ್ಚುತ್ತಿದೆ. ಅಸ್ಸಾಂನಲ್ಲಿನ ಪ್ರವಾಹದಿಂದಾಗಿ ಪರಿಸ್ಥಿತಿ ನಿಯಂತ್ರಿಸಲಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರೊಂದಿಗೆ ಪ್ರಧಾನಿ ಮೋದಿ ಅವರು ಪ್ರವಾಹ ಮತ್ತು ಕೋವಿಡ್ -19 ಪರಿಸ್ಥಿತಿ ಕುರಿತು ಚರ್ಚಿಸಿದರು. ಅನಿಲ ಬಾವಿಯಲ್ಲಿನ ಬೆಂಕಿಯನ್ನು ನಂದಿಸಲು ಆಯಿಲ್ ಇಂಡಿಯಾ ನಡೆಸುತ್ತಿರುವ ಪ್ರಯತ್ನಗಳ ಬಗ್ಗೆಯೂ ಮಾಹಿತಿ ಪಡೆದರು. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ದೂರವಾಣಿ ಸಂಭಾಷಣೆಯ ಮೂಲಕ ಅಸ್ಸಾಂನಲ್ಲಿನ ಪ್ರವಾಹ, ಕೋವಿಡ್ -19 ಗೆ ಸಂಬಂಧಿಸಿದ ಪರಿಸ್ಥಿತಿ ಮತ್ತು ಬಾಗ್ಜನ್ ತೈಲ ಬಾವಿಯಲ್ಲಿ ಅಗ್ನಿ ಅನಾಹುತಕ್ಕೆ ಸಂಬಂಧಿಸಿದ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದರು ಎಂದು ಸೋನೊವಾಲ್ ಟ್ವೀಟ್ ಮಾಡುವ ಮೂಲಕ  ತಿಳಿಸಿದ್ದಾರೆ.

ದೇಶದಲ್ಲಿ ಒಂದೆಡೆ ಕರೋನಾವೈರಸ್ ಹಾವಳಿ ಮುಂದುವರೆದಿದ್ದರೆ ಇನ್ನೊಂದೆಡೆ ಮಳೆ, ಪ್ರವಾಹ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಿರಂತರ ಮಳೆಯಿಂದಾಗಿ ಜನ ಜೀವನ ಅಸ್ಥವ್ಯಸ್ಥವಾಗಿದೆ. ಹಲವು ದಿನಗಳಿಂದ ಮಳೆಯಿಂದಾಗಿ ಬಿಹಾರ ಪ್ರವಾಹದ ಹಿಡಿತದಲ್ಲಿದೆ. ಇಲ್ಲಿ ಮಳೆಯ ಜೊತೆಗೆ ಗುಡುಗು ಮಿನ್ಚಿನಿಂದಾಗಿ ಭಾನುವಾರ 10 ಜನರು ಸಾವನ್ನಪ್ಪಿದ್ದಾರೆ.

Trending News