ಹತ್ರಾಸ್ ಸಾಮೂಹಿಕ ಅತ್ಯಾಚಾರ: ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಾಂಗ್ರೆಸ್

ಹತ್ರಾಸ್ ಸಾಮೂಹಿಕ ಅತ್ಯಾಚಾರ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಿಳಾ ಬಿಜೆಪಿ ನಾಯಕರ ಮೌನವನ್ನು ಕಾಂಗ್ರೆಸ್ ಮಂಗಳವಾರ ಪ್ರಶ್ನಿಸಿದೆ. ಸಾಮೂಹಿಕ ಅತ್ಯಾಚಾರದಿಂದಾಗಿ 19 ವರ್ಷದ ಮಹಿಳೆ ಸಾವನ್ನಪ್ಪಿದ್ದಾಳೆ.

Last Updated : Sep 29, 2020, 08:58 PM IST
ಹತ್ರಾಸ್ ಸಾಮೂಹಿಕ ಅತ್ಯಾಚಾರ: ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಾಂಗ್ರೆಸ್  title=
Photo Courtsey : PTI

ನವದೆಹಲಿ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಿಳಾ ಬಿಜೆಪಿ ನಾಯಕರ ಮೌನವನ್ನು ಕಾಂಗ್ರೆಸ್ ಮಂಗಳವಾರ ಪ್ರಶ್ನಿಸಿದೆ. ಸಾಮೂಹಿಕ ಅತ್ಯಾಚಾರದಿಂದಾಗಿ 19 ವರ್ಷದ ಮಹಿಳೆ ಸಾವನ್ನಪ್ಪಿದ್ದಾಳೆ.

ಇದೇ ವೇಳೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಪಕ್ಷವು  ಅವರ ಆಡಳಿತದಲ್ಲಿ ಉತ್ತರ ಪ್ರದೇಶವು ದೇಶದ 'ಅಪರಾಧ ರಾಜಧಾನಿಯಾಗಿ' ಮಾರ್ಪಟ್ಟಿದೆ ಎಂದು ಹೇಳಿದರು.ಕಾಂಗ್ರೆಸ್ ಮಾಜಿ ನಾಯಕ ರಾಹುಲ್ ಗಾಂಧಿ ಇಂದು ಉತ್ತರ ಪ್ರದೇಶದ ನಿರ್ದಿಷ್ಟ ಜಂಗಲ್ ರಾಜ್ ಇನ್ನೊಬ್ಬ ಯುವತಿಯನ್ನು ಹತ್ಯೆಗೈದಿದೆ ಎಂದು ಹೇಳಿದ್ದಾರೆ.

ಎರಡು ವಾರದ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಉ.ಪ್ರದೇಶದ ಮಹಿಳೆ ಸಾವು

"ಇದು ನಕಲಿ ಸುದ್ದಿ ಎಂದು ಸರ್ಕಾರ ಹೇಳಿದೆ ಮತ್ತು ಬಲಿಪಶುವನ್ನು ಸಾಯುವಂತೆ ಮಾಡಿದೆ. ಈ ದುರದೃಷ್ಟಕರ ಘಟನೆಯೂ ನಕಲಿಯಾಗಿರಲಿಲ್ಲ, ಬಲಿಪಶುವಿನ ಸಾವು ಮತ್ತು ಸರ್ಕಾರದ ಕ್ರೂರತೆಯೂ ಅಲ್ಲ" ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾಡಿ, ಹತ್ರಾಸ್‌ನಲ್ಲಿ ರಾಕ್ಷಸ ವರ್ತನೆಗೆ ಬಲಿಯಾದ ಕೆಳಜಾತಿಗೆ ಸೇರಿದ ಬಾಲಕಿಯೊಬ್ಬಳು ಆಸ್ಪತ್ರೆಗಳಲ್ಲಿ ಜೀವನ ಮತ್ತು ಸಾವಿನ ನಡುವೆ ಎರಡು ವಾರಗಳ ಕಾಲ ಹೋರಾಡಿದ ನಂತರ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ನಿಧನರಾದರು. "ಯುಪಿಯಲ್ಲಿ ಕಾನೂನು ಸುವ್ಯವಸ್ಥೆ ಬಹಳ ಹದಗೆಟ್ಟಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲ. ಅಪರಾಧಿಗಳು ಬಹಿರಂಗವಾಗಿ ಅಪರಾಧಗಳನ್ನು ಮಾಡುತ್ತಿದ್ದಾರೆ" ಎಂದು ಅವರು ಹೇಳಿದರು.

ಹಿಂದಿನ ದಿನ ವಿಜಯ್ ಚೌಕ್‌ನಲ್ಲಿ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವಂತೆ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಗಾಗಿ ಮಂದಿರ್ ಮಾರ್ಗ ಪೊಲೀಸ್ ಠಾಣೆಯಲ್ಲಿ ಅದರ ನಾಯಕರಾದ ಪಿ ಎಲ್ ಪುನಿಯಾ, ಉದಿತ್ ರಾಜ್ ಮತ್ತು ಇತರ ನಾಯಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

ಬಿಎಸ್ಪಿ ಮುಖ್ಯಸ್ಥೆ  ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಈ ಘಟನೆಯ ಕುರಿತು ಮಾತನಾಡುತ್ತಾ ಅಪರಾಧಿಗಳಿಗೆ ಕಠಿಣ ಮತ್ತು ವೇಗವಾಗಿ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.
 

Trending News