/kannada/photo-gallery/englands-legendary-test-batsman-joe-root-will-break-sachin-tendulkar-4-world-records-249475 ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌!  ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌! 249475

ತಿಪ್ಪೇಸ್ವಾಮಿ ಬೆಂಬಲಿಗರಿಂದ 'ಗೋ ಬ್ಯಾಕ್ ಶ್ರೀರಾಮುಲು' ಘೋಷಣೆ

ಮೊಳಕಾಲ್ಮೂರು ಕ್ಷೇತ್ರದಲ್ಲಿ ಪ್ರಚಾರಕ್ಕೆ ಮುಂದಾಗಿದ್ದ ಶ್ರೀರಾಮುಲುಗೆ ಶಾಸಕ ತಿಪ್ಪೇಸ್ವಾಮಿ ಬೆಂಬಲಿಗರಿಂದ ತೀವ್ರ ವಿರೋಧ.  

Last Updated : Apr 13, 2018, 04:21 PM IST
ತಿಪ್ಪೇಸ್ವಾಮಿ ಬೆಂಬಲಿಗರಿಂದ 'ಗೋ ಬ್ಯಾಕ್ ಶ್ರೀರಾಮುಲು' ಘೋಷಣೆ title=

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀರಾಮುಲು ಪ್ರಚಾರಕ್ಕೆ ಮುಂದಾಗಿದ್ದ ವೇಳೆ ಶಾಸಕ ತಿಪ್ಪೇಸ್ವಾಮಿ ಬೆಂಬಲಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಬಳ್ಳಾರಿ ಕಳ್ಳ ಬಂದ, 'ಗೋ ಬ್ಯಾಕ್ ಶ್ರೀರಾಮುಲು' ಎಂದು ಘೋಷಣೆ ಕೂಗುತ್ತಾ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. 

ಹಾಲಿ ಶಾಸಕ ತಿಪ್ಪೇಸ್ವಾಮಿಗೆ ಮೊಳಕಲ್ಮೂರಿನ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಬೆಂಬಲಿಗರು, ಚಳ್ಳಕೆರೆಯ ನಾಯಕನ ಹಟ್ಟಿ ದೇಗುಲದ ಬಳಿ ಶ್ರೀರಾಮುಲು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿರುವುದಲ್ಲದೆ, ಶ್ರೀರಾಮುಲು ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಎಚ್ಚರಿಕೆ ನೀಡಿದ್ದಾರೆ. 

ತಿಪ್ಪೇಸ್ವಾಮಿ ಬೆಂಬಲಗಿರು ಶ್ರೀರಾಮುಲು ಅವರ ಬೆಂಬಲಕ್ಕೆ ನಿಂತ ಬಿಜೆಪಿ ತಾಲೂಕು ಕಾರ್ಯದರ್ಶಿ ವೆಂಕಟ ಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ತಿಪ್ಪೇಸ್ವಾಮಿ ಬೆಂಬಲಿಗರು ಮತ್ತು ವೆಂಕಸ್ವಾಮಿ ಬೆಂಬಲಿತ ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ನಂತರ ಪೊಲೀಸರು  ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಇನ್ನು ಪೊರಕೆ, ಚಪ್ಪಲಿ ಹಿಡಿದು ಬೀದಿಗಿಳಿದ ಮಹಿಳೆಯರು ತಿಪ್ಪೇಸ್ವಾಮಿ ಅವರಿಗೆ ಬೆಂಬಲ ಸೂಚಿಸಿದ್ದಾರೆ.