ಚಾಮುಂಡೇಶ್ವರಿ ಕ್ಷೇತ್ರ : ಇಂದು ಜಿ.ಟಿ.ದೇವೇಗೌಡ ನಾಮಪತ್ರ ಸಲ್ಲಿಕೆ

ಭಾರಿ ಕದನ ಕುತೂಹಲ ಮೂಡಿಸಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

Last Updated : Apr 20, 2018, 10:58 AM IST
ಚಾಮುಂಡೇಶ್ವರಿ ಕ್ಷೇತ್ರ : ಇಂದು ಜಿ.ಟಿ.ದೇವೇಗೌಡ ನಾಮಪತ್ರ ಸಲ್ಲಿಕೆ title=

ಮೈಸೂರು : ಭಾರಿ ಕದನ ಕುತೂಹಲ ಮೂಡಿಸಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಜಿಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರು ಇಂದು ಮಧ್ಯಾಹ್ನ 2 ರಿಂದ 3 ಗಂಟೆಯ ನಡುವೆ ನಾಮಪತ್ರ ಸಲ್ಲಿಸಲಿದ್ದಾರೆ. ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ತಾಲೂಕು ಕಚೇರಿಯವರೆಗೆ ಮೆರವಣಿಗೆ ನಡೆಸಿ ನಂತರ ನಾಮಪತ್ರ ಸಲ್ಲಿಸಲಿದ್ದಾರೆ. 

ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಇಂದೇ ನಾಮಪತ್ರ ಸಲ್ಲಿಸುತ್ತಿದ್ದು, ತಾಲ್ಲೂಕು ಕಚೇರಿಯಲ್ಲಿ ಇಬ್ಬರೂ ಸ್ಪರ್ಧಿಗಳು ಎದುರಾಗುವ ಸಾಧ್ಯತೆ ಇದೆ. ಎರಡು ಪಕ್ಷಗಳ ಘಟಾನುಘಟಿಗಳು ಇಂದೇ ನಾಮಪತ್ರ ಸಲ್ಲಿಸುತ್ತಿದ್ದು, ಅಸಂಖ್ಯಾತ ಬೆಂಬಲಿಗರು ಈ ಸಂದರ್ಭದಲ್ಲಿ ಹಾಜರಿರುವುದರಿಂದ, ತಾಲೂಕು ಕಚೇರಿ ಸುತ್ತಮುತ್ತ ಬಿಗಿ ಪೋಲಿಸ್ ಭದ್ರತೆ ಏರ್ಪಡಿಸಲಾಗಿದೆ. 

Trending News