/kannada/photo-gallery/shukra-gochar-laxmi-narayana-yoga-bless-this-zodiac-signs-with-huge-wealth-and-success-221344 Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು 221344

ನವದೆಹಲಿ : ಶ್ರೀಲಂಕಾ ದೇಶವು ಪ್ರಸ್ತುತ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದೀಗ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಹಾಗೂ ಶ್ರೇಷ್ಠ ಆಟಗಾರ ಸನತ್ ಜಯಸೂರ್ಯ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿಹೊಗಳಿದ್ದಾರೆ. ಜಯಸೂರ್ಯ ಒಂದು ಕಾಲದ ಶ್ರೇಷ್ಠ ಆಟಗಾರರಲ್ಲಿ ಒಬ್ಬರು.

ಪಿಎಂ ಮೋದಿಯನ್ನು ಹೊಗಳಿದ ಜಯಸೂರ್ಯ 

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ(Sanath Jayasuriya), ಶ್ರೀಲಂಕಾಕ್ಕೆ ಸಹಾಯ ಮಾಡಿದ್ದಕ್ಕೆ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ. ನೀವು ನಮ್ಮ ಅದ್ಭುತ ನೆರೆಹೊರೆಯವರಾಗಿದ್ದೀರಿ. ನಮ್ಮ ದೇಶದ ಅಣ್ಣಂದಿರಂತೆ ಸಹಾಯ ಮಾಡುತ್ತಿದ್ದೀರಾ. ನಮ್ಮ  ಬದುಕು ತುಂಬಾ ಕಷ್ಟಕರವಾಗಿದೆ. ಶೀಘ್ರದಲ್ಲೇ ಚಿತ್ರಣ ಬದಲಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಭಾರತ ಮತ್ತು ಇತರ ದೇಶಗಳ ಸಹಾಯದಿಂದ ನಾವು ಈ ಪರಿಸ್ಥಿತಿಯಿಂದ ಹೊರಬರಲು ಪ್ರಯತ್ನಿಸುತ್ತಿದ್ದೇವೆ ಎಡನು ಹೇಳಿದ್ದಾರೆ.

ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾ 

ಶ್ರೀಲಂಕಾದಲ್ಲಿನ ಪರಿಸ್ಥಿತಿ ದುರದೃಷ್ಟಕರ ಎಂದು ಬಣ್ಣಿಸಿದ ಸನತ್ ಜಯಸೂರ್ಯ, ಜನ ಈ ರೀತಿ ಬದುಕಲು ಸಾಧ್ಯವಿಲ್ಲ ಅದಕ್ಕೆ ಪ್ರತಿಭಟನೆಗೆ ಮುಂದಾಗಿದ್ದಾರೆ. ಗ್ಯಾಸ್(Gas) ಮತ್ತು ಇಂಧನದ ಕೊರತೆ, 10-12 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಬಂದ್. ಇದು ನಮ್ಮ ದೇಶಕ್ಕೆ ಕಷ್ಟದ ಸಮಯ ಎದುರಾಗಿದೆ. ನಾನು ಜನರನ್ನು ಹಿಂಸಾತ್ಮಕವಾಗಿ ಅಲ್ಲ ಶಾಂತಿಯುತವಾಗಿ ಪ್ರತಿಭಟಿಸುವಂತೆ ಕೇಳಲು ಬಯಸುತ್ತೇನೆ ಎಂದು ಹೇಳಿದರು.

ಭಾರತ ಸರ್ಕಾರ ನೆರವು 

ವಿದ್ಯುತ್ ಕಡಿತವನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ವಿದ್ಯುತ್ ಬಿಕ್ಕಟ್ಟನ್ನು ನಿವಾರಿಸಲು ಸಹಾಯ ಮಾಡಲು ಭಾರತ ಸರ್ಕಾರ(Government of India)ವು ಶ್ರೀಲಂಕಾಕ್ಕೆ ಇದುವರೆಗೆ 270,000 ಮೆಟ್ರಿಕ್ ಟನ್‌ಗಳಷ್ಟು ಇಂಧನವನ್ನು ಪೂರೈಸಿದೆ. ಡಾಲರ್ ಎದುರು ಶ್ರೀಲಂಕಾದ ರೂಪಾಯಿ ತೀವ್ರವಾಗಿ ಕುಸಿಯುತ್ತಿದ್ದು, ವಿದೇಶಿ ಸಾಲವೂ ಹೆಚ್ಚುತ್ತಿದೆ. ಶ್ರೀಲಂಕಾ ಸರ್ಕಾರದ ಆದಾಯದಲ್ಲಿ ತೀವ್ರ ಕುಸಿತ ಕಂಡುಬಂದಿದೆ, ಇದರಿಂದಾಗಿ ಅದು ಆರ್ಥಿಕ ಬಿಕ್ಕಟ್ಟಿನೊಂದಿಗೆ ಹೋರಾಡುತ್ತಿದೆ. ಶ್ರೀಲಂಕಾ ಸರ್ಕಾರದ ವಿರುದ್ಧ ಜನ ಪ್ರತಿಭಟನೆ ಆರಂಭಿಸಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಜಯಸೂರ್ಯ ಹೇಳಿದ್ದಾರೆ. ಜನರೊಂದಿಗೆ ಸರಿಯಾಗಿ ಮಾತನಾಡದಿದ್ದರೆ ಅನಾಹುತವಾಗುತ್ತದೆ. ಸದ್ಯಕ್ಕೆ ಅದರ ಜವಾಬ್ದಾರಿ ಈಗಿನ ಸರ್ಕಾರದ ಮೇಲಿದೆ ಎಂದು ಹೇಳಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
former sri lanka cricketer sanath jayasuriya economic crisis thanks to indian pm narendra modi
News Source: 
Home Title: 

ಪಿಎಂ ಮೋದಿಯನ್ನು ಹಾಡಿಹೊಗಳಿದ ಶ್ರೀಲಂಕಾದ ಮಾಜಿ ಕ್ರಿಕೆಟರ್ 

Sri Lankan Economic Crisis : ಪಿಎಂ ಮೋದಿಯನ್ನು ಹಾಡಿಹೊಗಳಿದ ಶ್ರೀಲಂಕಾದ ಮಾಜಿ ಕ್ರಿಕೆಟರ್ 
Yes
Is Blog?: 
No
Tags: 
Facebook Instant Article: 
Yes
Highlights: 

ಪ್ರಧಾನಿ ಮೋದಿಯನ್ನು ಹೊಗಳಿದ ಜಯಸೂರ್ಯ 

ಶ್ರೀಲಂಕಾಗೆ ಭಾರತ ಸರ್ಕಾರದ ನೆರವು

ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾ

Mobile Title: 
ಪಿಎಂ ಮೋದಿಯನ್ನು ಹಾಡಿಹೊಗಳಿದ ಶ್ರೀಲಂಕಾದ ಮಾಜಿ ಕ್ರಿಕೆಟರ್ 
Channabasava A Kashinakunti
Publish Later: 
No
Publish At: 
Thursday, April 7, 2022 - 13:37
Created By: 
Chennabasava A Kashinakunti
Updated By: 
Chennabasava A Kashinakunti
Published By: 
Chennabasava A Kashinakunti
Request Count: 
2
Is Breaking News: 
No