Pramod Muthalik : 'ಛೋಟಾ ಪಾಕಿಸ್ತಾನ್ ಎಂದು ಕೂಗಿದವರನ್ನ ಎನ್ ಕೌಂಟರ್ ಮಾಡಿ'

ಛೋಟಾ ಪಾಕಿಸ್ತಾನ ಘೋಷಣೆ ಹಿಂದೆ ಮೌಲ್ವಿಯ ಕೈವಾಡ ಇದೆ.  ಮೌಲ್ವಿಯ ಪ್ರಚೋದನಾಕಾರಿ ಭಾಷಣದಿಂದಲೇ ಘೋಷಣೆ ಮಾಡಿದ್ದಾರೆ.

Written by - Zee Kannada News Desk | Last Updated : May 7, 2022, 04:03 PM IST
  • ಕವಲಂದೆ ಗ್ರಾಮದಲ್ಲಿ ಛೋಟಾ ಪಾಕಿಸ್ತಾನ್ ಘೋಷಣೆ
  • ಆರೋಪಿಗಳನ್ನ ಎನ್ ಕೌಂಟರ್ ಮಾಡಿ ಬಿಸಾಕಿ
  • ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹ
Pramod Muthalik : 'ಛೋಟಾ ಪಾಕಿಸ್ತಾನ್ ಎಂದು ಕೂಗಿದವರನ್ನ ಎನ್ ಕೌಂಟರ್ ಮಾಡಿ' title=

ಮೈಸೂರು : ಕವಲಂದೆ ಗ್ರಾಮದಲ್ಲಿ ಛೋಟಾ ಪಾಕಿಸ್ತಾನ್ ಎಂದು ಘೋಷಣೆ ಕೂಗಿದ ಆರೋಪಿಗಳನ್ನ ಎನ್ ಕೌಂಟರ್ ಮಾಡಿ ಬಿಸಾಕಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.

ಇಂದು ನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಪ್ರಮೋದ್ ಮುತಾಲಿಕ್, ಛೋಟಾ ಪಾಕಿಸ್ತಾನ ಘೋಷಣೆ ಹಿಂದೆ ಮೌಲ್ವಿಯ ಕೈವಾಡ ಇದೆ.  ಮೌಲ್ವಿಯ ಪ್ರಚೋದನಾಕಾರಿ ಭಾಷಣದಿಂದಲೇ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಘೋಷಣೆ ಕೂಗಿದವರನ್ನ ಎನ್ ಕೌಂಟರ್ ಮಾಡಿ ಬಿಸಾಕಿ ಎಂದು ಹೇಳಿದರು. ಇನ್ನು ಸುಪ್ರಭಾತ ಅಭಿಯಾನ ಯಾವುದೇ ಕಾರಣಕ್ಕೂ ನಿಲ್ಲಲ್ಲ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದರು.

ಇದನ್ನೂ ಓದಿ : Basanagouda Patil Yatnal : 'ಡಿಕೆ ಶಿವಕುಮಾರ್ ಗೆ ನನ್ನ ಬಗ್ಗೆ ಭಯ ಶುರುವಾಗಿದೆ'

ರಂಜಾನ್ ಹಬ್ಬದ ವೇಳೆ ಸಾಮೂಹಿಕ ಪ್ರಾರ್ಥನೆ ನಂತರ ಮೈಸೂರು ಜಿಲ್ಲೆ ನಂಜನಗೂಡು ಸಮೀಪದ ಕವಲಂದೆ ಗ್ರಾಮದಲ್ಲಿ ಛೋಟಾ ಪಾಕಿಸ್ತಾನ್ ಎಂದು ಘೋಷಣೆ ಕೂಗಿದ್ಧ ವಿಡಿಯೋವೊಂದು ವೈರಲ್ ಆಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿ ನಿನ್ನೆ ಇಬ್ಬರನ್ನ ಬಂಧಿಸಲಾಗಿತ್ತು.

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News