ಬೆಂಗಳೂರು : ಹಂಗಾಮಿ ಸಭಾಪತಿಯಾಗಿ ರಘುನಾತ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಘುನಾಥ್ ಮಲ್ಕಾಪುರೆ ಅವರನ್ನು ಹಂಗಾಮಿ ಸಭಾಪತಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಭಾಪತಿ ಸ್ಥಾನ ತೆರವಾಗಿತ್ತು. ಸಭಾಪತಿ ಕಚೇರಿಯಲ್ಲಿ ರಘುನಾಥ್ ಮಲ್ಕಾಪುರೆ ಆಗಮಿಸಿದ್ದಾರೆ.
ಇದನ್ನೂ ಓದಿ: ರಾಜ್ಯಸಭೆ ಚುನಾವಣೆ : " ರಾಜ್ಯದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ನಡೆಸುವುದಾದರೆ ಸ್ವಾಗತ "
ವಿಧಾನ ಪರಿಷತ್ತಿನ ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಅವರಿಗೆ ಬಸವರಾಜ ಹೊರಟ್ಟಿ ಅವರು ಫೋನ್ ಮಾಡಿ ಶುಭಾಶಯ ತಿಳಿಸಿದ್ದಾರೆ.
ಹಂಗಾಮಿ ಸಭಾಪತಿ ನೇಮಕವಾದ ಪ್ರಮಾಣ ವಚನ ಮೊದಲಾದ ಪ್ರಕ್ರಿಯೆ ಗಳು ಇರುವುದಿಲ್ಲ. ಕೇವಲ ಸಭಾಪತಿ ಹುದ್ದೆಯ ಕಾರ್ಯನಿರ್ವಹಣೆ ಹೊಣೆಗಾರಿಕೆ ಮಾತ್ರ ಇರಲಿದೆ. ಹಂಗಾಮಿ ಸಭಾಪತಿ ನೇಮಕ ಬಳಿಕವಷ್ಟೇ ಬಸವರಾಜ ಹೊರಟ್ಟಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರೆ ಅಂಗೀಕಾರ ಪ್ರಕ್ರಿಯೆ ನಡೆಯಲಿದೆ. ಅಲ್ಲಿಯವರೆಗೂ ಅವರ ಉದ್ದೇಶಿತ ಬಿಜೆಪಿ ಸೇರ್ಪಡೆ ವಿಳಂಬವಾಗಲಿದೆ.
ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ರಘುನಾತ್ ಮಲ್ಕಾಪುರೆ, ಗೌರವಾನ್ವಿತ ರಾಜ್ಯಪಾಲರು ಇಂದು ವಿಧಾನಪರಿಷತ್ ಸಭಾಪತಿಯಾಗಿ ನನ್ನ ಆಯ್ಕೆ ಮಾಡಿದ್ದಾರೆ. ನಿನ್ನೆ ಬಸವರಾಜ್ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ರು. ರಾಜ್ಯ ಸರ್ಕಾರದ ಆದೇಶದಂತೆ ನಾನು ನೇಮಕ ಆಗಿದ್ದೇನೆ. ಎಲ್ಲಾ ಪಕ್ಷದ ಸದಸ್ಯರ ಸಹಮತದಿಂದ ನನಗೆ ಬೆಂಬಲ ನೀಡುವಂತೆ ಸಹಕಾರ ಕೋರುತ್ತೇನೆ. ರಾಜ್ಯಪಾಲರು ಮುಂದಿನ ಸಭಾಪತಿ ಆಯ್ಕೆವರೆಗೂ, ನನ್ನನ್ನ ಸಭಾಪತಿಯಾಗಿ ಆಯ್ಕೆ ಮಾಡಿದ್ದಾರೆ. ಈಗ ತಾನೆ ಹಿಂದಿನ ಸಭಾಪತಿಯಾಗಿದ್ದ ಹೊರಟ್ಟಿ ಅವರು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾನೂನಿನ ಪ್ರಕಾರ ರಾಜೀನಾಮೆ ಅಂಗೀರಿಸಿ ಕಳಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಹಂಗಾಮಿ ಸಭಾಪತಿಯಾಗಿ ರಘುನಾತ್ ಮಲ್ಕಾಪುರೆ ನೇಮಕ!
ಹಂಗಾಮಿ ಸಭಾಪತಿಯಾಗಿ ರಘುನಾತ್ ರಾವ್ ಮಲ್ಕಾಪುರೆ ನೇಮಕ
ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ
ಹಂಗಾಮಿ ಸಭಾಪತಿ ನೇಮಕವಾದ ಪ್ರಮಾಣ ವಚನ ಮೊದಲಾದ ಪ್ರಕ್ರಿಯೆ ಗಳು ಇರುವುದಿಲ್ಲ