ಮಳೆ ಆರ್ಭಟ... ಭೋರ್ಗರೆದು ಹರಿಯುತ್ತಿದೆ ಹೊಗೆನಕಲ್ ಜಲಪಾತ

ವಾಯುಭಾರ ಕುಸಿತ ಹಾಗೂ ಪೂರ್ವ ಮುಂಗಾರು ಚುರುಕುಗೊಂಡಿರುವುದು,  ಕಾವೇರಿ ನದಿ ಪಾತ್ರದಲ್ಲಿ ಹೊರ ಹರಿವಿನಿಂದಾಗಿ  ಹನೂರು ತಾಲೂಕಿನ ಹೊಗೆನೆಕಲ್ ಜಲಾಪಾತ ಭೋರ್ಗರೆದು ಹರಿಯುತ್ತಿದೆ.

Written by - Chetana Devarmani | Last Updated : May 21, 2022, 05:24 PM IST
  • ಕಾವೇರಿ ನದಿ ಪಾತ್ರದಲ್ಲಿ ಹೊರ ಹರಿವು ಹೆಚ್ಚಳ
  • ಭೋರ್ಗರೆದು ಹರಿಯುತ್ತಿರುವ ಹೊಗೆನೆಕಲ್ ಜಲಾಪಾತ
  • ನೋಡುಗರಿಗೆ ರುದ್ರ ರಮಣೀಯ ದೃಶ್ಯ
ಮಳೆ ಆರ್ಭಟ... ಭೋರ್ಗರೆದು ಹರಿಯುತ್ತಿದೆ ಹೊಗೆನಕಲ್ ಜಲಪಾತ  title=
ಹೊಗೆನೆಕಲ್ ಜಲಾಪಾತ

ಚಾಮರಾಜನಗರ: ವಾಯುಭಾರ ಕುಸಿತ ಹಾಗೂ ಪೂರ್ವ ಮುಂಗಾರು ಚುರುಕುಗೊಂಡಿರುವುದು, ಕಾವೇರಿ ನದಿ ಪಾತ್ರದಲ್ಲಿ ಹೊರ ಹರಿವಿನಿಂದಾಗಿ  ಹನೂರು ತಾಲೂಕಿನ ಹೊಗೆನೆಕಲ್ ಜಲಾಪಾತ ಭೋರ್ಗರೆದು ಹರಿಯುತ್ತಿದೆ.

ಇದನ್ನೂ ಓದಿ: ವಿಚಿತ್ರ ಆಕಾರದ ಮೊಟ್ಟೆ ಇಡುತ್ತಿರುವ ಕೋಳಿ!

30 ಸಾವಿರ ಕ್ಯೂಸೆಕ್ ನೀರಿನ ಹರಿವಿರುವುದರಿಂದ ಭಾರೀ ವೇಗದಲ್ಲಿ ನೀರು ಹರಿವಿದ್ದು ನೋಡುಗರಿಗೆ ರುದ್ರ ರಮಣೀಯ ದೃಶ್ಯ ಕಟ್ಟಿಕೊಡುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಮಿಳುನಾಡು ಭಾಗ ಹಾಗೂ ನಮ್ಮ ರಾಜ್ಯದ ಕಡೆ ತೆಪ್ಪ ಸವಾರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. 

ಇನ್ನು, ಜಮ್ಮಕಪಟ್ಟಿ, ಆಲಂಬಾಂಡಿ ಮಾರಿಕೋಟೈ, ಗೋಫಿನಾಥಂ, ಆತೂರು, ಕೋಟೊಯೂರು ಗ್ರಾಮಗಳ‌ ಜನರು ನದಿ ದಡಕ್ಕೆ ಹೋಗದಂತೆ ಹಾಗೂ  ಮಹಿಳೆಯರು, ಮಕ್ಕಳು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚನೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: 'ಜ್ಞಾನವಾಪಿ ಮಸೀದಿ ಅಲ್ಲ, ಅದು ದೇವಸ್ಥಾನ'

ಕಳೆದ ಎರಡು ವರ್ಷಗಳ  ಹಿಂದೆ ಸುರಿದ ಭಾರೀ ಮಳೆಗೆ ಹೊಗೆನಕಲ್ ಜಲಪಾತವೇ ಮುಳುಗಡೆಯಾಗಿತ್ತು ಅದೇ ಪರಿಸ್ಥಿತಿ ಈ ವರ್ಷವೂ ಮುಂದುವರೆಯಬಹುದು ಎಂದು ಸ್ಥಳೀಯರು ಆತಂಕ ಹೊರಹಾಕಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News