ಮಂತ್ರಾಲಯದ ರಾಯರ ಹುಂಡಿಗೆ ಹರಿದು ಬಂತು ಕೋಟ್ಯಂತರ ರೂ. ಕಾಣಿಕೆ!

300ಕ್ಕೂ ಹೆಚ್ಚು ಸ್ವಯಂ ಸೇವಕರಿಂದ ರಾಯರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಬಂಗಾರ, ಬಳ್ಳಿ ಮತ್ತು ವಿದೇಶಿ ನ್ಯಾಣಗಳು ಪತ್ತೆಯಾಗಿವೆ.

ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಜೂನ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 2, 52,33,205 ರೂ. ಸಂಗ್ರಹವಾಗಿದೆ. ಇನ್ನೂ ಸಂಗ್ರಹವಾದ ಕಾಣಿಕೆಯಲ್ಲಿ 5,61,355 ರೂ. ನಾಣ್ಯಗಳು ಹಾಗೂ 2,46,71,850 ರೂ. ನೋಟುಗಳಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

1 /5

ಮಂತ್ರಾಲಯ ಮಠದ ರಾಯರ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ರಾಯರ ದರ್ಶನಕ್ಕೆ ಆಗಮಿಸಿದ್ದ ಭಕ್ತರು ಕಾಣಿಕೆ ರೂಪದಲ್ಲಿ ಕೋಟ್ಯಂತರ ರೂ. ಸಮರ್ಪಿಸಿದ್ದಾರೆ. ಜೂನ್ ತಿಂಗಳಲ್ಲಿ ಸಂಗ್ರಹಣೆಗೊಂಡ ಹುಂಡಿ ಎಣಿಕೆ ಕಾರ್ಯದಲ್ಲಿ ಕೋಟ್ಯಂತರ ರೂ. ಕಾಣಿಕೆ ಹರಿದುಬಂದಿದೆ.

2 /5

ಸುಮಾರು 300ಕ್ಕೂ ಹೆಚ್ಚು ಸ್ವಯಂ ಸೇವಕರು ಸೇರಿಕೊಂಡು ರಾಯರ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಸಿದ್ದಾರೆ. ರಾಯರ ಹುಂಡಿಯಲ್ಲಿ ಬಂಗಾರ, ಬಳ್ಳಿ ಮತ್ತು ವಿದೇಶಿ ನ್ಯಾಣಗಳು ಪತ್ತೆಯಾಗಿವೆ.

3 /5

ಮಂತ್ರಾಲಯದ ರಾಯರ ಹುಂಡಿಯಲ್ಲಿ ಒಂದೇ ತಿಂಗಳಲ್ಲಿ 2,52,33,205 ರೂ. ಕಾಣಿಕೆ ಸಂಗ್ರಹವಾಗಿದೆ. ಈ ಪೈಕಿ ಸುಮಾರು 5,61, 355 ರೂ‌. ನ್ಯಾಣಗಳು ರಾಯರ ಹುಂಡಿಯಲ್ಲಿ ಜಮಾ ಆಗಿವೆ.

4 /5

ಇನ್ನು ರಾಯರ ಹುಂಡಿಗೆ ಭಕ್ತರು ನಗದು ಜೊತೆಗೆ ಕಾಣಿಕೆ ರೂಪದಲ್ಲಿ ಚಿನ್ನ-ಬೆಳ್ಳಿಯನ್ನು ಸಮರ್ಪಿಸಿದ್ದಾರೆ.  164 ಗ್ರಾಂನಷ್ಟು ಬಂಗಾರ ಮತ್ತು ‌1098 ಗ್ರಾಂನಷ್ಟು ಬೆಳ್ಳಿ ಸಂಗ್ರಹವಾಗಿದೆ ಎಂದು ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮೀಜಿಗಳ ಮಠ ಮಾಹಿತಿ ನೀಡಿದೆ.

5 /5

ಮಂತ್ರಾಲಯದ ರಾಯರ ಮಠಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಾಗಿದ. ಹೀಗೆ ಭೇಟಿ ನೀಡುವ ಭಕ್ತರು ರಾಯರ ಹುಂಡಿಗೆ ಲಕ್ಷಾಂತರ ರೂ. ಕಾಣಿಕೆ ಸಮರ್ಪಿಸಿದ್ದಾರೆ.