ಚಿತ್ರರಂಗಕ್ಕೆ ಮಾಲಾಶ್ರೀ ಮಗಳು ಪಾದಾರ್ಪಣೆ; ದರ್ಶನ್ ಜೊತೆಗೆ ರಾಧನಾ ರಾಮ್ ನಟನೆ

ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ನಾಯಕಿಯಾಗಿ ‘ಕನಸಿನ ರಾಣಿ’ ಮಾಲಾಶ್ರೀ ಪುತ್ರಿ ರಾಧನಾ ರಾಮ್ ನಾಯಕಿಯಾಗಿ ನಟಿಸಲಿದ್ದಾರೆ.

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೊಸ ಚಿತ್ರದ ಮುಹೂರ್ತ ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಅದ್ದೂರಿಯಾಗಿ ನಡೆದಿದೆ. ಸದ್ಯ ‘ಕ್ರಾಂತಿ’ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಬ್ಯುಸಿಯಾಗಿರುವ ಡಿ ಬಾಸ್ ಖ್ಯಾತಿಯ ದರ್ಶನ್ ಸದ್ದಿಲ್ಲದೆ ತಮ್ಮ 56ನೇ ಸಿನಿಮಾಗೆ ತಯಾರಿ ನಡೆಸಿದ್ದಾರೆ. ವಿಶೇಷವೆಂದರೆ ಈ ಚಿತ್ರದಲ್ಲಿ ದರ್ಶನ್‍ಗೆ ನಾಯಕಿಯಾಗಿ ‘ಕನಸಿನ ರಾಣಿ’ ಮಾಲಾಶ್ರೀ ಪುತ್ರಿ ರಾಧನಾ ರಾಮ್ ನಾಯಕಿಯಾಗಿ ನಟಿಸಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಚಾಲೆಂಜಿಂಗ್ ಸ್ಟಾರ್, ಡಿ ಬಾಸ್ ಖ್ಯಾತಿಯ ನಟ ದರ್ಶನ್ ಸದ್ಯ ‘ಕ್ರಾಂತಿ’ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆಯೇ ಅವರ ಹೊಸ ಚಿತ್ರದ ಮುಹೂರ್ತ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಅದ್ದೂರಿಯಾಗಿ ನೆರವೇರಿತು.

2 /5

ರಾಕ್‍ಲೈನ್ ವೆಂಕಟೇಶ್ ನಿರ್ಮಾಣದ ಈ ಹೊಸ ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಲಿದ್ದಾರೆ. ಆರ್ಟ್ ಆಫ್ ಲಿವಿಂಗ್‍ನ ರವಿಶಂಕರ ಗುರೂಜಿಯವರು ಚಿತ್ರದ ಮುಹೂರ್ತಕ್ಕೆ ಚಾಲನೆ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.  

3 /5

ಕನ್ನಡ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿ 90ರ ದಶಕದಲ್ಲಿ ಆಳಿದ ಕನಸಿನ ರಾಣಿ ಮಾಲಾಶ್ರೀಯವರ ಮಗಳು ರಾಧನಾ ರಾಮ್ ಈ ಚಿತ್ರದ ಮೂಲಕ ನಾಯಕಿಯಾಗಿ ಸ್ಯಾಂಡಲ್‍ವುಡ್ ಪ್ರವೇಶಿಸುತ್ತಿದ್ದಾರೆ.  

4 /5

ಈ ಬಗ್ಗೆ ಟ್ವೀಟ್ ಮಾಡಿರುವ  ನಟಿ ಮಾಲಾಶ್ರೀ, ‘ನನ್ನ ಮುದ್ದಿನ ಮಗಳು ಇಂದು ನನಗೆ ಅಪಾರ ಪ್ರೀತಿ ಹಾಗೂ ಬದುಕು ನೀಡಿದ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾಳೆ... ನನಗೆ ನೀಡಿದ ಪ್ರೀತಿ ಮತ್ತು ಆಶೀರ್ವಾದ ಅವಳ ಮೇಲೂ ಇರಲಿ ಎಂದು ಆಶಿಸುತ್ತೇನೆ’ ಎಂದು ಮನವಿ ಮಾಡಿಕೊಂಡಿದ್ದಾರೆ.   

5 /5

ಚಿತ್ರದ ಮುಹೂರ್ತ ಸಮಾರಂಭದಲ್ಲಿ ಮಾತನಾಡಿದ ನಟ ದರ್ಶನ್, ‘ರಾಬರ್ಟ್ ಚಿತ್ರತಂಡ ಮತ್ತೆ ಒಂದಾಗುತ್ತಿದೆ. ತಾತ್ಕಾಲಿಕವಾಗಿ ಚಿತ್ರಕ್ಕೆ D56 ಎಂದು ಹೆಸರು ಇಟ್ಟಿದ್ದೇವೆ. ಚಿತ್ರದ ಶೀರ್ಷಿಕೆ ಸೇರಿದಂತೆ ಮತ್ತಷ್ಟು ಅಪ್‍ಡೇಟ್‍ಗಳನ್ನು ಶೀಘ್ರದಲ್ಲಿಯೇ ನೀಡಲಿದ್ದೇವೆ’ ಎಂದು ಹೇಳಿದರು.