ಭರತ್‌ ಗೌಡ ಎಸ್‌ವಿ ಮುಡಿಗೆ ಜೀ ನ್ಯೂಸ್‌ "ಯುವರತ್ನ" ಪ್ರಶಸ್ತಿಯ ಗರಿ..!


Zee Kannada News Yuvaratna Awards : ಸಾಮಾಜಿಕ, ರಾಜಕೀಯ, ಶಿಕ್ಷಣ, ವೈದ್ಯಕೀಯ, ಕ್ರೀಡಾ, ಖಾಸಗಿ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮತ್ತು ಯುವಜನಕ್ಕೆ ಸ್ಪೂರ್ತಿಯಾಗುವ ನಿಟ್ಟಿನಲ್ಲಿ ಸಾಧಕರನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಜೀ ಕನ್ನಡ ನ್ಯೂಸ್‌ ಮಾಡುತ್ತಿದೆ. ಅದರಂತೆ 2023-24 ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಒಟ್ಟು 35 ಜನ ಯುವ ಸಾಧಕರನ್ನು ಗುರುತಿಸಿ, ಅವರಿಗೆ ಸನ್ಮಾನ ಮಾಡಿ ಗೌರವಿಸಿ "ಯುವರತ್ನ ಪ್ರಶಸ್ತಿ" ಪ್ರದಾನ ಮಾಡಲಾಯಿತು. 
 

1 /5

ತಳಮಟ್ಟದಿಂದ ಬೆಳೆದು ಸಾಮಾಜಿಕ, ರಾಜಕೀಯ, ಶಿಕ್ಷಣ, ವೈದ್ಯಕೀಯ, ಕ್ರೀಕಾ, ಕೈಗಾರಿಕಾ, ಖಾಸಗೀ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು, ಎಲೆಮರೆ ಕಾಯಿಯಂತೆ ಇರುವ ಉದ್ಯಮಿಗಳನ್ನು ಗುರ್ತಿಸುವ ಕಾರ್ಯಕ್ರಮವೇ ʼಯುವರತ್ನʼ.         

2 /5

ಈ ಪೈಕಿ ರಾಜಕೀಯ ಸಂಘಟಕರು ಭರತ್‌ ಗೌಡ ಎಸ್‌ವಿ ಅವರ ಅದ್ಭುತ ಸಾಧನೆಯನ್ನು ಗುರುತಿಸಿ ಜೀ ಕನ್ನಡ ನ್ಯೂಸ್‌ ಯುವರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಭರತ್‌ ಗೌಡ ಅವರು, ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮಾರ್ಗದರ್ಶನಲ್ಲಿ ಪ್ರಬಲ ಯುವರಾಜಕಾರಣಿಯಾಗಿ ಸಮಾಜ ಸೇವೆಯಲ್ಲಿ ತಡಗಿಸಿಕೊಂಡಿರುವ ನಿಸ್ವಾರ್ಥಿ.  

3 /5

ಶಾಲಾ ಮಕ್ಕಳು , ರೈತರು, ಬಡವರ ಕಷ್ಟಕ್ಕೆ ಸದಾ ಮಿಡಿಯುವ ಹೃದಯ. ಕೋವಿಡ್‌ ಸಂದರ್ಭದಲ್ಲಿ ಪ್ರಾಣವನ್ನು ಲೆಕ್ಕಿಸದೆ ಬಡವರ ಸಹಾಯಕ್ಕೆ ನಿಂತವರು. 30 ಬಡಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಹೊಣೆ ಹೊತ್ತಿದ್ದಾರೆ. ದಾನಿಗಳ ಮೂಲಕ ಬಡಮಕ್ಕಳಿಗೆ ಉಚಿತ ಪುಸ್ತಕ, ಬಟ್ಟೆ, ತಲುಪಿಸುವ ಕೆಲಸ ಮಾಡುತ್ತಿದ್ದಾರೆ.  

4 /5

ರಾಷ್ಟ್ರ ನಿರ್ಮಾಣ ಮತ್ತು ರಾಷ್ಟ್ರೀಯತೆಯ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬಂದಿರುವ ಎಸ್.‌ವಿ.ಭರತ್‌ ಗೌಡ ಸಾಮಾಜಿಕ ಕಳಕಳಿ ಹೊಂದಿರುವ ಸಮಾನ ಮನಸ್ಕರ ಸರ್ಜಾಪುರ ಸಿಟಿಜನ್‌ ಫೋರಂ ಸ್ಥಾಪಿಸಿ ಆ ಮೂಲಕ ಸಮಾಜ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ.   

5 /5

ಇಂತಹ ಅದ್ಭುತ ವ್ಯಕ್ತಿತ್ವ ಮತ್ತು ಸಾಧನೆಯನ್ನು ಮಾಡಿದ ಎಸ್.‌ವಿ.ಭರತ್‌ ಗೌಡರವರಿಗೆ ʼಯುವರತ್ನ ಪ್ರಶಸ್ತಿʼ ನೀಡಲು ಝೀ ಕನ್ನಡ ನ್ಯೂಸ್‌ ಹೆಮ್ಮೆ ಪಡುತ್ತದೆ.