Mercury Rise 2024: 16 ದಿನಗಳ ಬಳಿಕ ಬುದ್ಧಿದಾತ ಬುದ್ಧನ ಉದಯ, ಈ ರಾಶಿಗಳ ಜನರ ಮೇಲೆ ಭಾರಿ ಕನಕವೃಷ್ಟಿ, ನೌಕರಿಯಲ್ಲಿ ಉನ್ನತಿಯ ಯೋಗ!

Mercury Rise 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮಾರ್ಚ್ ತಿಂಗಳ ಮಧ್ಯ ಭಾಗದಲ್ಲಿ ಬುಧನ ಉದಯ ನೆರವೇರಲಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭ ಸಿಗಲಿದೆ. (Spiritual News In Kannada)
 

Mercury Rise 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಫೆಬ್ರುವರಿ ಆರಂಭದಲ್ಲಿ ಅಂದರೆ 8 ಫೆಬ್ರುವರಿ 2024 ರಂದು ಮಕರ ರಾಶಿಯಲ್ಲಿ ಅಸ್ತನಾಗಿದ್ದು, ಪ್ರಸ್ತುತ ಆತ ಅಸ್ತ ಭಾವದಲ್ಲಿಯೇ ಇದ್ದಾನೆ. ಇದೆ ಭಾವದಲ್ಲಿ ಆತ ಮಾರ್ಚ್ 7, 2024 ರಂದು ಬೆಳಗ್ಗೆ 9 ಗಂಟೆ 21 ನಿಮಿಷಕ್ಕೆ ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಇದರ ಜೊತೆಗೆ ಮಾರ್ಚ್ 15, 2024 ರಂದು ಮೀನ ರಾಶಿಯಲ್ಲಿ ಉದಯಿಸಲಿದ್ದಾನೆ. ಬುಧನ ಈ ಉದಯದಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಅಪಾರ ಧನಸಂಪತ್ತು ಹರಿದುಬರಲಿದೆ. ದೀರ್ಘ ಕಾಲದಿಂದ ನಡೆದುಕೊಂಡು ಬಂದ ಸಮಸ್ಯೆಗಳು ಅಂತ್ಯವಾಗಲಿವೆ. ಸಮಾಜದಲ್ಲಿ ಸ್ಥಾನಮಾನ ಹೆಚ್ಚಾಗಿ ಧನ-ಧಾನ್ಯ ವೃದ್ಧಿಯಾಗಲಿದೆ. ಬುಧನ ಈ ಉದಯದಿಂದ ಯಾವ ರಾಶಿಗಳ ಜನರಿಗೆ ಲಾಭ ಸಿಗಲಿದೆ ತಿಳಿದುಕೊಳ್ಳೋಣ ಬನ್ನಿ, (Spiritual News In Kannada)

 

ಇದನ್ನೂ ಓದಿ-Venus Transit 2024: ಶೀಘ್ರದಲ್ಲಿ ಕರ್ಮಫಲದಾತನ ರಾಶಿಗೆ ವೈಭವದಾತ ಶುಕ್ರನ ಪ್ರವೇಶ, ಈ ಜನರಿಗೆ ಅಷ್ಟೈಶ್ವರ್ಯ ಪ್ರಾಪ್ತಿ ಯೋಗ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

Mercury Rise 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮಾರ್ಚ್ ತಿಂಗಳ ಮಧ್ಯ ಭಾಗದಲ್ಲಿ ಬುಧನ ಉದಯ ನೆರವೇರಲಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭ ಸಿಗಲಿದೆ. (Spiritual News In Kannada)  

2 /8

ಕನ್ಯಾ ರಾಶಿ: ನಿಮ್ಮ ಜಾತಕದ ಸಪ್ತಮ ಭಾವದಲ್ಲಿ ಬುಧ ಉದಯಿಸುತ್ತಿದ್ದಾನೆ. ನಿಮ್ಮ ರಾಶಿಗೆ ಆತ ಅಧಿಪತಿ ಕೂಡ ಹೌದು, ಹೀಗಾಗಿ ವಿವಾಹಿತರ ವೈವಾಹಿಕ ಜೀವನ ಉತ್ತಮವಾಗಿರಲಿದೆ. ವ್ಯಾಪಾರ ಉತ್ತಮವಾಗಿ ನಡೆಯಲಿದೆ ಮತ್ತು ಆರ್ಥಿಕ ರೂಪದಲ್ಲಿ ನೀವು ಸದೃಢರಾಗುವಿರಿ. ವೃತ್ತಿ ಜೀವನದಲ್ಲಿ ಉನ್ನತಿಯ ಸುವರ್ಣಾವಕಾಶಗಳು ಒದಗಿ ಬರಲಿವೆ. ಅವಿವಾಹಿತರಿಗೆ ವಿವಾಹ ಪ್ರಸ್ತಾವನೆ ಸಿಗುವ ಸಾಧ್ಯತೆ ಇದೆ.   

3 /8

ಕುಂಭ ರಾಶಿ: ಬುಧ ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಸ್ಥಾನದಲ್ಲಿ ಉದಯಿಸುತ್ತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ಆರೋಗ್ಯ ಹಾಗೂ ಕೆಲಸಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಲಿದ್ದು, ಧನ ವೃದ್ಧಿಗೆ ನಿಮಗೆ ಹಲವು ಅವಕಾಶಗಳು ಒದಗಿ ಬರಲಿವೆ. ಒಟ್ಟಾರೆಯಾಗಿ ನಿಮ್ಮ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ. ಮಾತಿನ ಶೈಲಿಯಲ್ಲಿ ನಿಮಗೆ ಹೊಳಪು ಕಾಣಲು ಸಿಗಲಿದೆ. ಅದರಿಂದ ಜನರು ನಿಮ್ಮಿಂದ ಪ್ರಭಾವಿತರಾಗಲಿದ್ದಾರೆ. ಹೊಸ ವಾಹನ, ಜಾಮೀನು ಖರೀದಿಸುವ ಯೋಗವಿದೆ.   

4 /8

ಮಕರ ರಾಶಿ: ಬುಧ ನಿಮ್ಮ ಗೋಚರ ಜಾತಕದ ತೃತೀಯ ಸ್ಥಾನದಲ್ಲಿ ಉದಯಿಸುತ್ತಿದ್ದಾನೆ. ಇದರಿಂದ ನಿಮ್ಮ ಸಾಹಸ-ಪರಾಕ್ರಮ ಹೆಚ್ಚಾಗಲಿದೆ. ವಿದೇಶದ ಜೊತೆಗೆ ವ್ಯಾಪಾರ ಸಂಬಂಧ ಹೊಂದಿದವರಿಗೆ ವಿದೇಶಕ್ಕೆ ಹೋಗುವ ಅವಕಾಶ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸುಧಾರಣೆಗೆ ನೀವು ಸಾಕಷ್ಟು ಕಷ್ಟ ಪಡುವಿರಿ. ಬುಧ ನಿಮ್ಮ ಜಾತಕದ ಆರನೇ ಹಾಗೂ ಒಂಭತ್ತನೆ ಮನೆಗೆ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ ನೀವು ಅಂದುಕೊಂಡ ಎಲ್ಲಾ ಯೋಜನೆಗಳು ಪೂರ್ಣಗೊಳ್ಳಲಿವೆ.   

5 /8

ವೃಷಭ ರಾಶಿ: ನಿಮ್ಮ ಗೋಚರ ಜಾತಕದ ಏಕಾದಶ ಭಾವದಲ್ಲಿ ಬುಧನ ಈ ಉದಯ ನೆರವೇರಲಿದೆ. ಹೀಗಿರುವಾಗ ಈ ಜಾತಕದ ಜನರಿಗೆ ಅಪಾರ ಧನಲಾಭ ಸಿಗಲಿದೆ. ಆದಾಯ ಹೆಚ್ಚಾಗಲಿದೆ. ಅಪಾರ ಹಣ ಕೂಡಿಹಾಕುವಲ್ಲಿ ಯಶಸ್ವಿಯಾಗುವಿರಿ. ವ್ಯಾಪಾರ ಆರಂಭಿಸಲು ಯೋಚಿಸುತ್ತಿದ್ದರೆ, ಈ ಅವಧಿಯಲ್ಲಿ ನಿಮಗೆ ಉತ್ತಮ ಅವಕಾಶಗಳು ಒದಗಿ ಬರಲಿವೆ. ಸಮಾಜದಲ್ಲಿ ಸ್ಥಾನಮಾನ ಹೆಚ್ಚಾಗಲಿದೆ. ಇದಲ್ಲದೆ ಹೊಸ ಜನರ ಜೊತೆಗೆ ನೀವು ಮೈತ್ರಿಯನ್ನು ಮಾಡಿಕೊಳ್ಳುವಿರಿ, ಆಮದು ರಫ್ತು ವ್ಯಾಪಾರದಲ್ಲಿ ಲಾಭ ನಿಮ್ಮದಾಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ವ್ಯಾಪಾರ ಆರಂಭಿಸುವುದು ನಿಮಗೆ ಅಧಿಕ ಲಾಭವನ್ನು ತಂದುಕೊಡಲಿದೆ.   

6 /8

ಮಿಥುನ ರಾಶಿ: ನಿಮ್ಮ ಗೋಚರ ಜಾತಕದ ದಶಮ ಭಾವದಲ್ಲಿ ಬುಧ ಉದಯಿಸಲಿದ್ದಾನೆ. ಈ ರಾಶಿಯ ಜಾತಕದವರಿಗೆ ಆಕಷ್ಮಿಕ ಧನಲಾಭ ಉಂಟಾಗಲಿದೆ. ಕಾರ್ಯಕ್ಷೇತ್ರದಲ್ಲಿ ನೀವು ಪಡುವ ಪರಿಶ್ರಮದಿಂದ ನಿಮಗೆ ಪದೋನ್ನತಿ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಕುಟುಂಬ ದಲ್ಲಿ ವಾತಾವರಣ ಉತ್ತಮವಾಗಿರಲಿದೆ. ಸಮಾಜದಲ್ಲಿ ಸ್ಥಾನಮಾನ ಹೆಚ್ಚಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಒದಗಿ ಬರಲಿದೆ. ಹೊಸ ವಾಹನ, ಮನೆ, ಸಂಪತ್ತು ಖರೀದಿಸುವ ನಿಮ್ಮ ಕನಸು ನನಸಾಗುವ ಸಾಧ್ಯತೆ ಇದೆ.   

7 /8

ಕರ್ಕ ರಾಶಿ: ಬುಧ ನಿಮ್ಮ ಜಾತಕಕ್ಕೆ ಅಧಿಪತಿ ಮತ್ತು ಆತ ನವಮ ಭಾವದಲ್ಲಿ ಉದಯಿಸುತ್ತಿದ್ದಾನೆ. ಹೀಗಿರುವಾಗ ಈ ರಾಶಿಯ ಜನರ ಜಾತಕದವರಿಗೆ ಅಧ್ಯಾತ್ಮದತ್ತ ಒಲವು ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ನಿಮ್ಮ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸುವ ಅವಕಾಶ ನಿಮಗೆ ಸಿಗಲಿದೆ. ತಂದೆ-ಗುರುವಿನ ಬೆಂಬಲದಿಂದ ಎಲ್ಲಾ ಕಾರ್ಯಗಳಲ್ಲಿ ನಿಮಗೆ ಕಾರ್ಯ ಸಿದ್ಧ ಪ್ರಾಪ್ತಿಯಾಗಲಿದೆ. ದೀರ್ಘಾವಧಿಯಿಂದ ನಿಂತುಹೋದ ಕೆಲಸಗಳಲ್ಲಿ ಯಶಸ್ಸು ಸಿಗುವುದರ ಜೊತೆಗೆ ಆಪಾರ ಧನಲಾಭ ನಿಮ್ಮದಾಗಲಿದೆ. ವಿದ್ಯಾರ್ಥಿಗಳ ಕುರಿತು ಹೇಳುವುದಾದರೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಿಮಗೆ ಲಾಭ ಸಿಗಲಿದೆ. ವಿದೇಶದಲ್ಲಿ ವ್ಯಾಸಂಗ ಮಾಡುವ ಅವಕಾಶ ಒದಗಿ ಬರಲಿದೆ. ವ್ಯಾಪಾರದ ಕುರಿತು ಹೇಳುವುದಾದರೆ, ಅಪಾರ ಯಶಸ್ಸಿನ ಜೊತೆಗೆ ಧನಲಾಭ ಸಿಗಲಿದೆ.  

8 /8

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)