ಮಧುಮೇಹಿಗಳು ಎಳನೀರಿಗೆ ಈ ಹಣ್ಣಿನ ರಸ ಬೆರೆಸಿ ಕುಡಿಯಿರಿ! ಬೇಸಿಗೆಯಲ್ಲಿ ಬ್ಲಡ್ ಶುಗರ್ ಕಂಟ್ರೋಲ್ ಮಾಡಲು ಇದಕ್ಕಿಂತ ಬೆಸ್ಟ್ ಬೇರೆಯಿಲ್ಲ

Benefits of Coconut Water with Lemon: ಎಳನೀರನ್ನು ಆರೋಗ್ಯಕ್ಕೆ ತುಂಬಾ ಆರೋಗ್ಯಕರವೆಂದು ಪರಿಗಣಿಸಲಾಗಿದೆ. ನಿತ್ಯವೂ ಎಳನೀರು ಕುಡಿಯುವುದರಿಂದ ದೇಹವು ಸಾಕಷ್ಟು ಪ್ರೋಟೀನ್ಗಳು ಮತ್ತು ವಿಟಮಿನ್ಗಳನ್ನು ಪಡೆಯುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /9

ಎಳನೀರಿನಲ್ಲಿರುವ ಸಕ್ಕರೆಯ ಪ್ರಮಾಣವು ತುಂಬಾ ಕಡಿಮೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ. ಅಷ್ಟೇ ಅಲ್ಲದೆ, ಇದರಲ್ಲಿರುವ ಕ್ಯಾಲೋರಿಗಳು ಸಹ ಶೂನ್ಯಕ್ಕೆ ಸಮಾನ. ಇದು ತೂಕವನ್ನು ತ್ವರಿತವಾಗಿ ಕಡಿಮೆ ಮಾಡುತ್ತದೆ.

2 /9

ಎಂದಾದರೂ ತೆಂಗಿನ ನೀರಿಗೆ ನಿಂಬೆರಸ ಬೆರೆಸಿ ಕುಡಿದಿದ್ದೀರಾ? ಇಲ್ಲದಿದ್ದರೆ ಖಂಡಿತ ಒಮ್ಮೆ ಪ್ರಯತ್ನಿಸಿ ನೋಡಿ. ತೆಂಗಿನ ನೀರು ಮತ್ತು ನಿಂಬೆ ರಸವು ಜೀರ್ಣಕ್ರಿಯೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದು, ಆಲ್ಝೈಮರ್ ಮತ್ತು ಇತರ ಅನೇಕ ಸಮಸ್ಯೆಗಳಿಗೆ ರಾಮಬಾಣವಾಗಿದೆ.

3 /9

ನಿಂಬೆ ವಿಟಮಿನ್ ಸಿ ಸೇರಿದಂತೆ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದನ್ನು ಸೇವಿಸುವ ಮೂಲಕ ದೇಹವನ್ನು ಸ್ವತಂತ್ರ ರಾಡಿಕಲ್ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸಬಹುದು. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ನಿಮಗೆ ಸಹಾಯ ಮಾಡುತ್ತದೆ.

4 /9

ಎಳನೀರು ಟೇಸ್ಟಿ ಮತ್ತು ಎಲೆಕ್ಟ್ರೋಲೈಟ್-ಸಮೃದ್ಧ ನೈಸರ್ಗಿಕ ಪಾನೀಯ. ಇದು ನಿಮ್ಮ ಹೃದಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ನಿಯಮಿತವಾಗಿ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಇದು ಮೂತ್ರಪಿಂಡದ ಆರೋಗ್ಯವನ್ನು ಸುಧಾರಿಸುವ ಜೊತೆಗೆ ಹೃದಯದ ಆರೋಗ್ಯಕ್ಕೂ ಉತ್ತಮ.

5 /9

ಎಳನೀರಿಗೆ ನಿಂಬೆ ರಸ ಬೆರೆಸಿ ಕುಡಿದರೆ ತೂಕವು ಶೀಘ್ರವಾಗಿ ಕಡಿಮೆಯಾಗುತ್ತದೆ. ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು, ಅಧಿಕ ರಕ್ತದೊತ್ತಡ ರೋಗಿಗಳಿಗೆ ಕೂಡ ಬಹಳಷ್ಟು ಪ್ರಯೋಜನಕಾರಿ.

6 /9

ಎಳನೀರು ಮತ್ತು ನಿಂಬೆ ರಸವು ಮೂತ್ರಪಿಂಡಗಳನ್ನು ಆರೋಗ್ಯಕರವಾಗಿಡಲು ತುಂಬಾ ಪ್ರಯೋಜನಕಾರಿ. ಹೃದಯವೂ ಸಹ ಆರೋಗ್ಯವಾಗಿರುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಬಲಪಡಿಸಬಹುದು.

7 /9

ನಿಂಬೆ ಹಣ್ಣಿನ ರಸ, ಎಳನೀರು, ಜೇನುತುಪ್ಪ, ಶುಂಠಿ ಮತ್ತು ಉಪ್ಪನ್ನು ಒಟ್ಟಿಗೆ ಒಂದು ಪಾತ್ರೆಯಲ್ಲಿ ಹಾಕಿ ಮಿಶ್ರಣ ಮಾಡಿ. ನಂತರ ಇದನ್ನು ಕುಡಿಯಬಹುದು. ಇದನ್ನು ವಾರಕ್ಕೆ ಎರಡು ಬಾರಿ ಸೇವಿಸುವುದರಿಂದ ಆರೋಗ್ಯಯುತವಾಗಿರಬಹುದು.

8 /9

ನಿಂಬೆ ರಸ ಮತ್ತು ತೆಂಗಿನ ನೀರನ್ನು ಒಟ್ಟಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಪ್ರಯೋಜನಗಳನ್ನು ನೀಡುತ್ತದೆ. ಆದರೆ, ಯಾವುದೇ ರೀತಿಯ ದೈಹಿಕ ಸಮಸ್ಯೆಗಳನ್ನು ಹೊಂದಿದ್ದರೆ ಅಥವಾ ಅಲರ್ಜಿಯನ್ನು ಹೊಂದಿದ್ದರೆ, ತಜ್ಞರನ್ನು ಸಂಪರ್ಕಿಸಿದ ನಂತರವೇ ಈ ಪಾನೀಯವನ್ನು ಸೇವಿಸಿ.

9 /9

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)