Dr. M.G. ರಂಗಧಾಮಯ್ಯ ಅವರಿಗೆ ಜೀ ನ್ಯೂಸ್‌ ʼಯುವರತ್ನ ಪ್ರಶಸ್ತಿʼ ಗೌರವ..!

Zee Kannada News Yuvaratna Awards : ಸಾಮಾಜಿಕ, ರಾಜಕೀಯ, ಶಿಕ್ಷಣ, ವೈದ್ಯಕೀಯ, ಕ್ರೀಡಾ, ಖಾಸಗಿ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮತ್ತು ಯುವಜನಕ್ಕೆ ಸ್ಪೂರ್ತಿಯಾಗುವ ನಿಟ್ಟಿನಲ್ಲಿ ಸಾಧಕರನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಜೀ ಕನ್ನಡ ನ್ಯೂಸ್‌ ಮಾಡುತ್ತಿದೆ. ಅದರಂತೆ 2023-24 ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಒಟ್ಟು 35 ಜನ ಯುವ ಸಾಧಕರನ್ನು ಗುರುತಿಸಿ, ಅವರಿಗೆ ಸನ್ಮಾನ ಮಾಡಿ ಗೌರವಿಸಿ "ಯುವರತ್ನ ಪ್ರಶಸ್ತಿ" ಪ್ರದಾನ ಮಾಡಲಾಯಿತು. 

1 /4

ಸರ್ಕಾರಿ ವೃತ್ತಿಯನ್ನೇ ತ್ಯಜಿಸಿ ನಿರಂತರ ಜನಸೇವೆಯ ಮೂಲಕ ತಮ್ಮ ಸೇವೆ ಮುಂದುವರೆಸಿದ್ದಾರೆ. ಹಾಗಾಗಿ ರಂಗಧಾಮಯ್ಯ ಅವರಿಗೆ ಯುವರತ್ನ ಪ್ರಶಸ್ತಿ ನೀಡಲು ಝೀ ಕನ್ನಡ ನ್ಯೂಸ್‌ ಹೆಮ್ಮೆ ಪಡುತ್ತದೆ.  

2 /4

ನಿತ್ಯ ಮನೆಗೆ ಬರುವ ನೂರಾರು ಜನರ ಕಷ್ಟ ಆಲಿಸಿ ಕೈಲಾದ ಸಹಾಯಹಸ್ತ ಚಾಚುವ ರಂಗಧಾಮಯ್ಯ ಅವರು ರಾಜಕೀಯದ ಮೂಲಕ ಜನಸೇವೆ ಸಾಧ್ಯ ಎಂಬ ನಂಬಿಕೆ ಹೊಂದಿದ್ದಾರೆ.   

3 /4

ಈ ಪೈಕಿ ಗರುಡಾದ್ರಿ ಡೆವಲಪರ್ಸ್‌ ರೂವಾರಿ ರಂಗ ಧಾಮಯ್ಯ ‌ಅವರ ಅದ್ಭುತ ಸಾಧನೆಯನ್ನು ಗುರುತಿಸಿ ಜೀ ಕನ್ನಡ ನ್ಯೂಸ್‌ ಯುವರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಭಗವಂತನ ಮೇಲೆ ಅಪಾರ ನಂಬಿಕೆ ಹೊಂದಿರುವ ರಂಗಧಾಮಯ್ಯ ಅವರು ಜನರ ಕಷ್ಟಕ್ಕೆ ಹೆಗಲಾಗೋದು ನನ್ನ ಕಾಯಕ ಎನ್ನುತ್ತಾರೆ.  

4 /4

ತಳಮಟ್ಟದಿಂದ ಬೆಳೆದು ಸಾಮಾಜಿಕ, ರಾಜಕೀಯ, ಶಿಕ್ಷಣ, ವೈದ್ಯಕೀಯ, ಕ್ರೀಕಾ, ಕೈಗಾರಿಕಾ, ಖಾಸಗೀ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು, ಎಲೆಮರೆ ಕಾಯಿಯಂತೆ ಇರುವ ಉದ್ಯಮಿಗಳನ್ನು ಗುರ್ತಿಸುವ ಕಾರ್ಯಕ್ರಮವೇ ʼಯುವರತ್ನʼ.