ಬೇಸಿಗೆಯಲ್ಲಿ ಈ ಜ್ಯೂಸ್ ಕುಡಿಯಿರಿ, ಅಪ್ಪಿ ತಪ್ಪಿಯೂ ಏರುವುದಿಲ್ಲ ಬ್ಲಡ್ ಶುಗರ್!

 ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಬೇಸಿಗೆಯಲ್ಲಿ ಈ ಪಾನೀಯಗಳನ್ನು ಸೇವಿಸಬಹುದು. 
 

Summer drinks for diabetes patients: ಮಧುಮೇಹವು ಒಂದು ರೀತಿಯ ಮೆಟಾಬಾಲಿಕ್ ಸಿಂಡ್ರೋಮ್ ಆಗಿದೆ.ಇದು ದೀರ್ಘಕಾಲದ ಕಾಯಿಲೆಯಾಗಿದ್ದು  ಜೀವನದುದ್ದಕ್ಕೂ ಕಾಡುತ್ತದೆ.ಮಧುಮೇಹ ರೋಗಿಗಳು ತಮ್ಮ ಜೀವನದುದ್ದಕ್ಕೂ ರಕ್ತದ ಸಕ್ಕರೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸಬೇಕಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಮಧುಮೇಹವು ಎರಡು ಸಂದರ್ಭಗಳಲ್ಲಿ ಸಂಭವಿಸುತ್ತದೆ. ಮೊದಲನೆಯದು ನಿಮ್ಮ ಮೇದೋಜ್ಜೀರಕ ಗ್ರಂಥಿಯು ಸಾಕಷ್ಟು ಇನ್ಸುಲಿನ್ ಅನ್ನು ಉತ್ಪಾದಿಸಲು ಸಾಧ್ಯವಾಗದಿದ್ದಾಗ.ಎರಡನೆಯದ್ದು, ದೇಹದಲ್ಲಿ ಸಾಕಷ್ಟು ಪ್ರಮಾಣದ ಇನ್ಸುಲಿನ್  ಉತ್ಪಾದಿಸಿದ ನಂತರವೂ ದೇಹವು ಅದನ್ನು ಬಳಸಲು ಸಾಧ್ಯವಾಗದೇ ಇದ್ದಾಗ. ಈ ಎರಡೂ ಸಂದರ್ಭಗಳಲ್ಲಿಯೂ ಮಧುಮೇಹದ ಅಪಾಯ ಹೆಚ್ಚಾಗುತ್ತದೆ.  

2 /6

ಬೇಸಿಗೆಯಲ್ಲಿ,ಜನರು ಶಾಖ ಮತ್ತು ತೇವಾಂಶದಿಂದ ಪರಿಹಾರ ಪಡೆಯಲು ಐಸ್ ಕ್ರೀಮ್,ತಂಪು ಶರಬತ್ ಮತ್ತು ತಂಪು ಪಾನೀಯಗಳನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ, ಮಧುಮೇಹಿಗಳು ಈ ವಸ್ತುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುವ ಅಪಾಯವಿರುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಬೇಸಿಗೆಯಲ್ಲಿ ಈ ಪಾನೀಯಗಳನ್ನು ಸೇವಿಸಬಹುದು.   

3 /6

ಮೆಂತ್ಯೆ ಬೀಜಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಡಿ.ಬೆಳಿಗ್ಗೆ ಈ ನೀರಿಗೆ ಸ್ವಲ್ಪ ನಿಂಬೆ ರಸ ಸೇರಿಸಿ ಕುಡಿಯಿರಿ.ಮಧುಮೇಹ ನಿಯಂತ್ರಣದಲ್ಲಿ ಮೆಂತ್ಯೆ ನೀರು ಸಹಕಾರಿ. ಇದು ಕರುಳಿನಲ್ಲಿ ಸಕ್ಕರೆಯನ್ನು ಹೀರಿಕೊಳ್ಳುವ ವೇಗವನ್ನು ಕಡಿಮೆ ಮಾಡುತ್ತದೆ.  

4 /6

ಅಮೃತ ಬಳ್ಳಿ ಅನೇಕ ಪ್ರಯೋಜನಗಳನ್ನು ಆಯುರ್ವೇದದಲ್ಲಿ ಹೇಳಲಾಗಿದೆ. ಇದರ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಅಮೃತ ಬಳ್ಳಿ ಶರಬತ್ ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡುವುದಲ್ಲದೆ ದೇಹಕ್ಕೆ ಉಲ್ಲಾಸ ಸಿಗುತ್ತದೆ.

5 /6

ಈ ರುಚಿಕರವಾದ ಮಸಾಲೆಯು ಇನ್ಸುಲಿನ್ ನಂತೆ ಕಾರ್ಯನಿರ್ವಹಿಸುವ ಅಂಶಗಳನ್ನು ಒಳಗೊಂಡಿದೆ.ಆದ್ದರಿಂದ, ಚಕ್ಕೆ ಸೇವನೆಯು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ.ದಾಲ್ಚಿನ್ನಿ ಚಹಾವನ್ನು ಕುಡಿಯುವುದರಿಂದ   ಇದರಲ್ಲಿ ಇರುವ ಗ್ಲೈಕೋಜೆನ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.  

6 /6

ಬೇಸಿಗೆಯಲ್ಲಿ ಸೌತೆಕಾಯಿ, ಪಾಲಕ್, ಪುದೀನಾ, ಸೋರೆಕಾಯಿ ಮತ್ತು ಹಸಿರು ಸೇಬುಗಳನ್ನು ಒಟ್ಟಿಗೆ ರುಬ್ಬುವ ಮೂಲಕ ಸ್ಮೂಥಿ ಮಾಡಿ.ಇದು ಉತ್ಕರ್ಷಣ ನಿರೋಧಕಗಳು, ಡಯೆಟರಿ ಫೈಬರ್ ಮತ್ತು ವಿಟಮಿನ್‌ಗಳಿಂದ ಸಮೃದ್ಧವಾಗಿರುವ ಪಾನೀಯವಾಗಿದ್ದು ಇದು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. (ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.)