ಸಿಂಪಲ್‌ಸ್ಟಾರ್‌ಗೆ ತಪ್ಪದ ಸಂಕಷ್ಟ.. ಸ್ಯಾಂಡಲ್‌ವುಡ್‌ ನಟ ರಕ್ಷಿತ್ ಶೆಟ್ಟಿ ಮೇಲೆ ಮತ್ತೊಂದು ದೂರು ದಾಖಲು!

Rakshit Shetty: ಸ್ಯಾಂಡಲ್‌ವುಡ್‌ ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ಕಾಮಿಡಿ ಜಾನರ್‌ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಜನವರಿ 26 ರಂದು ರಿಲೀಸ್‌ ಆಗಿತ್ತು.. ಇದೀಗ ಈ ಚಿತ್ರದಲ್ಲಿರುವ ಹಾಡನ್ನು ಕದ್ದು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.. 
 

1 /5

ರಿಷಬ್‌ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದ ಕಿರಿಕ್‌ ಪಾರ್ಟಿ ಸಿನಿಮಾದಲ್ಲಿ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ನಟಿಸಿದ್ದರು.. 2016ರಲ್ಲಿ ತೆರೆಗೆ ಬಂದ ಈ ಸಿನಿಮಾ ಕಾಪಿರೈಟ್‌ ವಿಚಾರವಾಗಿ ವಿವಾದಕ್ಕೆ ಸಿಲುಕಿತ್ತು..   

2 /5

 ಇದೀಗ ನಟ ರಕ್ಷಿತ್‌ ಶೆಟ್ಟಿ ಅವರು ನಿರ್ಮಿಸಿರುವ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿನ ʻಗಾಳಿಮಾತುʼ ಹಾಗೂ ʻನ್ಯಾಯ ಎಲ್ಲಿದೆʼ ಎಂಬ ಹಾಡನ್ನು ಕದ್ದಿರುವ ಆರೋಪದ ಜೊತೆಗೆ ನಟ ರಕ್ಷಿತ್‌ ಮೇಲೆ ದೂರು ದಾಖಲಾಗಿದೆ.  

3 /5

 ‘ಒಮ್ಮೆ ನಿನ್ನನ್ನೂ ಕಣ್ತುಂತ ನೋಡುವಾಸೆ”.. ʻನ್ಯಾಯ ಎಲ್ಲಿದೆʼ ಟೈಟಲ್ ಸಾಂಗ್.. ಈ ಹಾಡುಗಳನ್ನು ಕದ್ದಿದ್ದಾರೆ.. ಅನುಮತಿ ಇಲ್ಲದೇ ಬಳಕೆ ಮಾಡಿದ್ದಾರೆ ಎಂದು ಹಾಡುಗಳ ಕಾಪಿರೈಟ್ ಪಡೆದು ಮಾರಟ ಮಾಡುವ ಬ್ಯುಸಿನೆಸ್ ಮೆನ್ ನವೀನ್‌ರಿಂದ ಆರೋಪ ಕೇಳಿ ಬಂದಿದೆ..   

4 /5

ಸದ್ಯ ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಿರಿಕ್ ಪಾರ್ಟಿ ಬಳಿಕ ಬ್ಯಾಚುಲರ್ ಪಾರ್ಟಿ ವಿವಾದ ಶುರುವಾಗಿದೆ.. ಹೀಗೆ ನಟ ರಕ್ಷಿತ್‌ ಶೆಟ್ಟಿ ಅವರಿಗೆ ತಪ್ಪದೇ ಕಾಡುತ್ತಿದೆ ಈ ಕಾಪಿರೈಟ್‌ ಸಂಕಷ್ಟ..   

5 /5

ಇನ್ನು ಕಾಮಿಡಿ ಜಾನರ್‌ ಹೊಂದಿರುವ ಈ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಜನವರಿ 26 ರಂದು ರಿಲೀಸ್‌ ಆಗಿತ್ತು.. ಇದರಲ್ಲಿ ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತ್ ಕುಮಾ‌ರ್, ನಟಿ ಸಿರಿ ರವಿಕುಮಾರ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.. ಅಲ್ಲದೇ ಈ ಬ್ಯಾಚುಲರ್ ಪಾರ್ಟಿ’ ಸಿನಿಮಾಗೆ  ಕಿರಿಕ್ ಪಾರ್ಟಿ ಸಿನಿಮಾದ ಬರಹಗಾರ ಅಭಿಜಿತ್ ಮಹೇಶ್ ಸಂಭಾಷಣೆ ಬರೆದಿದ್ದರು..