ಇನ್ನು ಈ ರಾಶಿಯವರ ಜೀವನದಲ್ಲಿ ಎಲ್ಲವೂ ಮಂಗಳವೇ! ಹೆಜ್ಜೆ ಇಟ್ಟರೆ ಜಯ, ಕೈ ಇಟ್ಟರೆ ಧನ !

ಜ್ಯೋತಿಷ್ಯದ ಪ್ರಕಾರ, ಶನಿದೇವರು ನವೆಂಬರ್‌ನಲ್ಲಿ ನೇರ ನಡೆಗೆ ಮರಳುತ್ತಾರೆ. ಶನಿಯ ಈ ಸಂಚಾರವು ಕೆಲವು ರಾಶಿಯವರಿಗೆ ಅನುಕೂಲಕರ ಫಲಗಳನ್ನು ನೀಡುತ್ತದೆ.

ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿಗ್ರಹವನ್ನು ಪ್ರಭಾವಿ ಗ್ರಹ ಎಂದು ಕರೆಯಲಾಗುತ್ತದೆ. ಶನಿಯ ಸಂಚಾರವು ಪ್ರತಿಯೊಬ್ಬರ ಜಾತಕದ ಮೇಲೆ ಪರಿಣಾಮ ಬೀರುತ್ತದೆ. ನವೆಂಬರ್ 4 ರಂದು ಶನಿದೇವನು ತನ್ನ  ಪಥವನ್ನು  ಬದಲಾಯಿಸುತ್ತಾರೆ. ನವೆಂಬರ್ 4 ರಂದು ಮಧ್ಯಾಹ್ನ 12:31 ಕ್ಕೆ ಶನಿದೇವರು ನೇರ ನಡೆಗೆ ಮರಳಲಿದ್ದಾರೆ. ಈ ಮೂಲಕ 2024 ರವರೆಗಿನ ಅವಧಿಯನ್ನು ಕೆಲವು ರಾಶಿಯವರಿಗೆ ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ವೃಷಭ ರಾಶಿ : ವೃಷಭ ರಾಶಿಯವರ ಇಷ್ಟಾರ್ಥಗಳು ನೆರವೇರಲಿವೆ. ಈ ಸಮಯದಲ್ಲಿ, ಕೆಲಸ ಮತ್ತು ವ್ಯವಹಾರದಲ್ಲಿ ಲಾಭ ಗಳಿಸುವಲ್ಲಿ ಯಶಸ್ವಿಯಾಗುತ್ತೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಾನ, ಪ್ರತಿಷ್ಠೆ ಮತ್ತು ಗೌರವ ಹೆಚ್ಚಾಗುತ್ತದೆ.  

2 /5

ಮಿಥುನ ರಾಶಿ : ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯ ವಾತಾವರಣ ನೆಲೆಯಾಗುವುದು. ಮಿಥುನ ರಾಶಿಯ ವಿದ್ಯಾರ್ಥಿಗಳಿಗೆ ಈ ಸಮಯ  ತುಂಬಾ ಅನುಕೂಲಕರವಾಗಿರುತ್ತದೆ. ಶ್ರಮಕ್ಕೆ ಸಂಪೂರ್ಣ ಪ್ರತಿಫಲ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಪರಿಸ್ಥಿತಿಯು ಮೊದಲಿಗಿಂತ ಉತ್ತಮವಾಗಿರುತ್ತದೆ. 

3 /5

ತುಲಾ ರಾಶಿ : ಹಣಕಾಸಿನ ವಿಷಯದಲ್ಲಿ ಎದುರಾಗಿದ್ದ ಸಮಸ್ಯೆಗಳು ಬಗೆಹರಿಯುವುದು. ಜೀವನದಲ್ಲಿ ಧನಾತ್ಮಕ ಬದಲಾವಣೆಗಳನ್ನು ತರುತ್ತದೆ. ತುಲಾ ರಾಶಿಯವರ ಒಳ್ಳೆಯ ದಿನಗಳು ಪ್ರಾರಂಭವಾಗಲಿವೆ. 

4 /5

ಮಕರ ರಾಶಿ - ಉದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯಲಿವೆ. ಕೆಲವರಿಗೆ ಬಡ್ತಿಯೂ ಸಿಗಬಹುದು. ವ್ಯಾಪಾರದಲ್ಲಿ ತೊಡಗಿರುವ ಮಕರ ರಾಶಿಯವರು ಆರ್ಥಿಕ ಲಾಭದ ಎಲ್ಲಾ ಅವಕಾಶಗಳನ್ನು ಹೊಂದಿರುತ್ತಾರೆ. ಎಲ್ಲಾ ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ. ಜೀವನವು ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರುತ್ತದೆ.  

5 /5

 ಸೂಚನೆ : ಈ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ಬೋಧನೆಗಳು, ಧರ್ಮಗಳು, ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶ. ZEE NEWS ಇದಕ್ಕೆ ಹೊಣೆಯಲ್ಲ.