Rahu Ketu Upay: ರಾಹು-ಕೇತು ದೋಷದಿಂದ ಮುಕ್ತಿಗಾಗಿ ಈ ಕೆಲಸ ಮಾಡಿ

Rahu Ketu Upay: ನೆರಳು ಗ್ರಹಗಳು ಎಂತಲೇ ಕರೆಯಲ್ಪಡುವ ರಾಹು-ಕೇತು ಗ್ರಹಗಳು ಸೂರ್ಯ-ಚಂದ್ರರನ್ನೂ ಬಿಡದೆ ಕಾಡುತ್ತಾರೆ ಎಂದು ಹೇಳಲಾಗುತ್ತದೆ. ರಾಹು-ಕೇತು ದೋಷದಿಂದ ಪರಿಹಾರಕ್ಕಾಗಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಹಲವು ಪರಿಹಾರಗಳನ್ನು ಸೂಚಿಸಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /8

ಪಾಪ ಗ್ರಹಗಳು ಎಂದು ಕರೆಯಲ್ಪಡುವ ರಾಹು-ಕೇತು ಗ್ರಹಗಳು ಜಾತಕದಲ್ಲಿ ಅಶುಭ ಸ್ಥಾನದಲ್ಲಿದ್ದರೆ, ಅವರ ಸ್ವರ್ಗದಂತಹ ಜೀವನವೂ ನರಕವಾಗುತ್ತದೆ ಎಂದು ಹೇಳಲಾಗುತ್ತದೆ. ಯಾವುದೇ ವ್ಯಕ್ತಿಯ ಜಾತಕದಲ್ಲಿ ರಾಹು-ಕೇತು ಮಹಾದಶ ನಡೆಯುತ್ತಿದ್ದಾರೆ ಅವರ ಜೀವನದಲ್ಲಿ ಒಂದಾದ ಮೇಲೊಂದರಂತೆ ಸಮಸ್ಯೆಗಳು ಬೆಂಬಿಡದೆ ಕಾಡುತ್ತವೆ ಎಂದು ಹೇಳಲಾಗುತ್ತದೆ. 

2 /8

ರಾಹುವು ದುರ್ಬಲ ಸ್ಥಾನದಲ್ಲಿದ್ದಾಗ, ಜೀವನದಲ್ಲಿ ಅಶುಭ ಘಟನೆಗಳು ಸಂಭವಿಸಲು ಪ್ರಾರಂಭಿಸುತ್ತವೆ. ವ್ಯಕ್ತಿಯು ಒತ್ತಡಕ್ಕೆ ಒಳಗಾಗುತ್ತಾನೆ.

3 /8

ಯಾವುದೇ ವ್ಯಕ್ತಿಯ ಜಾತಕದಲ್ಲಿ ಕೇತು ಅಶುಭ ಸ್ಥಾನದಲ್ಲಿದ್ದರೆ, ವ್ಯಕ್ತಿಯು ನಿದ್ರಾಹೀನತೆ, ಆರ್ಥಿಕ ಬಿಕ್ಕಟ್ಟು ಮತ್ತು ವಿವಾದಗಳನ್ನು ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ, ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳು, ಕೀಲು ನೋವು, ಚರ್ಮ ರೋಗಗಳು, ಮೊಣಕಾಲು ನೋವು, ಬೆನ್ನು ನೋವು ಮತ್ತು ಸಂಬಂಧಗಳಲ್ಲಿನ ಒತ್ತಡವನ್ನು ಸಹ ಅನುಭವಿಸಬೇಕಾಗುತ್ತದೆ. 

4 /8

ರಾಹು-ಕೇತು ದೋಷದಿಂದ ಪರಿಹಾರಕ್ಕಾಗಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಹಲವು ಪರಿಹಾರಗಳನ್ನು ಸೂಚಿಸಲಾಗಿದೆ. ಈ ಪರಿಹಾರಗಳನ್ನು ಕೈಗೊಳ್ಳುವುದರಿಂದ ರಾಹು-ಕೇತು ಮಹಾದಶ ಪ್ರಭಾವವನ್ನು ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತದೆ. ಆ ಪರಿಹಾರಗಳೆಂದರೆ....   

5 /8

ಜಾತಕದಲ್ಲಿ ರಾಹು-ಕೇತು ದೋಷ ಹೊಂದಿರುವವರು ಭಾನುವಾರದ ದಿನ ಮದುವೆಯಾಗದ ಹೆಣ್ಣು ಮಕ್ಕಳಿಗೆ ಪಾದ ಪೂಜೆ ಮಾಡಿ, ಸಿಹಿ ತಿನಿಸು ನೀಡಿ ಅವರ ಆಶೀರ್ವಾದ ಪಡೆಯಿರಿ. 

6 /8

ನಿಯಮಿತವಾಗಿ ನಾಯಿಗೆ ಆಹಾರ ನೀಡುತ್ತಾ ಬಂದರೆ ಜಾತಕದಲ್ಲಿ ರಾಹು-ಕೇತು ದೋಷದಿಂದ ಪರಿಹಾರ ದೊರೆಯಲಿದೆ ಎಂಬ ನಂಬಿಕೆಯಿದೆ. 

7 /8

ಶಿವನ ಆರಾಧನೆಯಿಂದಲೂ ರಾಹು-ಕೇತು ದೋಷದ ಪ್ರಭಾವ ಕಡಿಮೆಯಾಗುತ್ತದೆ. ಇದಕ್ಕಾಗಿ, ಸೋಮವಾರದ ದಿನ ಶಿವಾನಿಗೆ ಕಪ್ಪು ಎಳ್ಳು, ಬೇಲ್ಪತ್ರೆ ಮತ್ತು ಗಂಗಾಜಲವನ್ನು ಅರ್ಪಿಸಿ. ಓಂ ನಮಃ ಶಿವಾಯ ಎಂಬ ಮಂತ್ರವನ್ನು ಪಠಿಸಿ. 

8 /8

ರಾಹು-ಕೇತು ಗ್ರಹಗಳ ದೋಷದಿಂದ ಮುಕ್ತಿ ಪಡೆಯಲು ನಾಗಶೇಷನ ಮೇಲೆ ನರ್ತಿಸುವ ಶ್ರೀಕೃಷ್ಣನ ಫೋಟೋವನ್ನು ಪೂಜಿಸಿ, ಈ ಸಮಯದಲ್ಲಿ 'ಓಂ ನಮೋ ಭಗವತೇ ವಾಸುದೇವಾಯ ನಮಃ' ಎಂಬ  ಮಂತ್ರವನ್ನು 108 ಬಾರಿ ಜಪಿಸಿ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.