Karnataka Election 2023: ಶಿವಮೊಗ್ಗದಲ್ಲಿ ಮುಗಿಲುಮುಟ್ಟಿದ ‘ನಮೋ’ ಘೋಷ!

Karnataka Election 2023: ಮಲೆನಾಡು ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಭರ್ಜರಿ ಮತಬೇಟೆ ನಡೆಸಿದರು.

Karnataka Election 2023: ಮಲೆನಾಡು ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಭರ್ಜರಿ ಮತಬೇಟೆ ನಡೆಸಿದರು. ಮಲೆನಾಡಿನ ಮಡಿಲಲ್ಲಿ ಕೇಸರಿ ಕಲರವ ರಂಗೇರಿತ್ತು. ಬಿಜೆಪಿ ಅಭ್ಯರ್ಥಿಗಳ ಪರ ಮತಪ್ರಚಾರ ನಡೆಸಿದ ಪ್ರಧಾನಿ ಮೋದಿಯವರು ಬಿಜೆಪಿಯನ್ನು ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಶಿವಮೊಗ್ಗ ಗ್ರಾಮಾಂತರ ಆಯನೂರಿನಲ್ಲಿ ಬಿಜೆಪಿ ಬೃಹತ್ ಚುನಾವಣಾ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಿ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿಯವರಿಗೆ ಆಂಜನೇಯನ ಮೂರ್ತಿ ನೀಡಿ ಸನ್ಮಾನಿಸಲಾಯಿತು.

2 /5

‘ಜೈ ಬಜರಂಗ ಬಲಿ’ & ‘ಸಿಗಂಧೂರು ಚೌಡೇಶ್ವರಿ’ಯ ಪಾದಕ್ಕೆ ನನ್ನ ನಮನ, ಭೋಲೋ ಭಾರತ್ ಮಾತಾಕೀ ಜೈ ಎಂದು ಭಾಷಣ ಆರಂಭಿಸಿದ ಪ್ರಧಾನಿ ಮೋದಿಯವರು ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

3 /5

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ ಎಂದ ಪ್ರಧಾನಿ ಮೋದಿ ಸಾರ್ವಜನಿಕರಿಗೆ ಮನವಿ ಮಾಡಿದರು. ಇದೇ ವೇಳೆ ಅವರು ಒಗ್ಗಟಿನ ಮಂತ್ರವನ್ನು ಜಪಿಸಿದರು.

4 /5

ಪ್ರಧಾನಿ ಮೋದಿಯವರು ಬಿಜೆಪಿಯ ಹಾವೇರಿ ಗ್ರಾಮೀಣ ಮಂಡಲದ ಕಾರ್ಯಕರ್ತ ಹನುಮಂತಪ್ಪ ದಾಸರ್ ಅವರ ಕುಶಲೋಪರಿ ವಿಚಾರಿಸಿದ ಅಪೂರ್ವ ಕ್ಷಣ.

5 /5

ಶಿವಮೊಗ್ಗದಲ್ಲಿ ಪ್ರಧಾನಿ ಮೋದಿಯವರ ಭಾಷಣ ಕೇಳಲು ಸಾವಿರಾರು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸೇರಿದ್ದರು. ಎಲ್ಲಲ್ಲೂ ಬಿಜೆಪಿ ಬಾವುಗಳು ಕಂಗೊಳಿಸಿದ್ದು ಕಂಡುಬಂತು.