"ಕೆಂಪೇಗೌಡರು ಒಂದು ಜಾತಿ, ಸಮುದಾಯಕ್ಕೆ ಸೀಮಿತವಾದ ವ್ಯಕ್ತಿ ಅಲ್ಲ"

ಮುಖ್ಯಮಂತ್ರಿ Siddaramaiah ಅವರು ಇಂದು ಹಾಸನದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ನಾಡ ಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
 

1 /6

ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ ಐದು ಎಕರೆ ಜಾಗ ನೀಡಲಾಯಿತು.

2 /6

ಇದೇ ರೀತಿ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮ್ಮ ಸರ್ಕಾರದಲ್ಲಿ ನಾಡ ಪ್ರಭು ಕೆಂಪೇಗೌಡ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲಾಯಿತು.

3 /6

ಇಂತಹ ಮಹನೀಯರು ಕೇವಲ ಜಾತಿ, ವರ್ಗಗಳಿಗೆ ಸೀಮಿತವಾಗದೆ ಸಮಾಜದ ಸ್ವತ್ತಾಗಬೇಕು ಎಂಬುವ ಉದ್ದೇಶದಿಂದ ಇಂತಹ ಗಣ್ಯರ ಜಯಂತಿಯನ್ನು ಸರ್ಕಾರದ ವತಿಯಿಂದ ಆಯೋಜಿಸಲು ನಿರ್ಧಾರವನ್ನು ನಾವು ಮಾಡಿದ್ದೆವು.

4 /6

ದೇಶ ಅಥವಾ ರಾಜ್ಯದ ಅಭಿವೃದ್ಧಿಗೆ ಉದ್ಯಮ ಸೃಷ್ಟಿಯಾಗಬೇಕು ಆಗ ಉದ್ಯೋಗ ಹೆಚ್ಚಿ ವ್ಯಾಪಾರ ಅಭಿವೃದ್ದಿಯಾಗುತ್ತದೆ.

5 /6

ಕೆಂಪೇಗೌಡ ಅವರು ದೂರದೃಷ್ಟಿ ಯಿಂದ ನಾಡು ಕಟ್ಟಿದ್ದಾರೆ. ನಾಲ್ಕು ದಿಕ್ಕಿಗೂ ದ್ವಾರ ಮಾಡಿ, ವೃತ್ತಿಗೊಂದು ಮಾರುಕಟ್ಟೆ ಸ್ಥಾಪಿಸಿ, ಕೆರೆ ಕಟ್ಟೆಗಳನ್ನು ಅಭಿವೃದ್ಧಿ ಮಾಡಿದ್ದರು.

6 /6

ಕೆಂಪೇಗೌಡರು ಒಂದು ಜಾತಿ, ಸಮುದಾಯಕ್ಕೆ ಸೀಮಿತವಾದ ವ್ಯಕ್ತಿ ಅಲ್ಲ.  ಅವರು ಇಡೀ ನಾಡಿನ ಒಲವು ಪಡೆದ ಮಹನೀಯ. ಬೆಂಗಳೂರು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದರೆ ಅದಕ್ಕೆ ಕೆಂಪೇಗೌಡ ಅವರೇ ಮೂಲ ಕಾರಣ.