Photos: ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಧ್ಯಾನ ಆರಂಭಿಸಿದ ಪ್ರಧಾನಿ ಮೋದಿ

Vivekananda Rock Memorial: ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ್ದ ಪವಿತ್ರ ಸ್ಥಳದಲ್ಲಿರುವ ಧ್ಯಾನ ಮಂಟಪದಲ್ಲಿ ಜೂನ್ 1ರ ಸಂಜೆಯವರೆಗೆ ಪ್ರಧಾನಿ ಮೋದಿಯವರು ನಿರಂತರ ಧ್ಯಾನವನ್ನು ಮಾಡಲಿದ್ದಾರೆ.  

Loksabha election result 2024: ಪ್ರಧಾನಿ ನರೇಂದ್ರ ಮೋದಿಯವರು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ವಿಶ್ವ ಪ್ರಸಿದ್ಧ ವಿವೇಕಾನಂದ ರಾಕ್ ಮೆಮೋರಿಯಲ್‌ಗೆ ಭೇಟಿ ನೀಡಿದ್ದು, ಆಧ್ಯಾತ್ಮಿಕ ಪ್ರವಾಸ ಕೈಗೊಂಡಿದ್ದಾರೆ. ದೇಶದ ದಕ್ಷಿಣ ತುದಿಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕದಲ್ಲಿ 73 ವರ್ಷದ ಪ್ರಧಾನಿ ಮೋದಿ ತಮ್ಮ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಪ್ರಾರಂಭಿಸಿದ್ದಾರೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /8

ಪ್ರಧಾನಿ ಮೋದಿ ಅವರು ದೋಣಿಯ ಮೂಲಕ ವಿವೇಕಾನಂದ ರಾಕ್ ಸ್ಮಾರಕವನ್ನು ತಲುಪಿದರು. ಬಳಿಕ 'ಧ್ಯಾನ ಮಂಟಪ'ದಲ್ಲಿ ತಮ್ಮ ಧ್ಯಾನವನ್ನು ಪ್ರಾರಂಭಿಸಿದರು.  

2 /8

ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ್ದ ಪವಿತ್ರ ಸ್ಥಳದಲ್ಲಿರುವ ಧ್ಯಾನ ಮಂಟಪದಲ್ಲಿ ಜೂನ್ 1ರ ಸಂಜೆಯವರೆಗೆ ಪ್ರಧಾನಿ ಮೋದಿಯವರು ನಿರಂತರ ಧ್ಯಾನವನ್ನು ಮಾಡಲಿದ್ದಾರೆ.  

3 /8

ಶನಿವಾರ ನಿಗದಿಯಾಗಿರುವ ಏಳನೇ ಹಂತದ ಲೋಕಸಭಾ ಚುನಾವಣೆಯ ಪ್ರಚಾರ ಕೊನೆಗೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಧ್ಯಾನ ಕೈಗೊಂಡಿದ್ದಾರೆ. ಮೊದಲಿಗೆ ಪ್ರಧಾನಿ ಮೋದಿಯವರು ಭಗವತಿ ಅಮ್ಮನ್ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.

4 /8

ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರಗಳು ಸಂಗಮಿಸುವ ಸ್ಥಳದಲ್ಲಿ ಪ್ರಧಾನಿ ಮೋದಿಯವರು ಧ್ಯಾನ ಮಾಡುತ್ತಿದ್ದಾರೆ. ಇದನ್ನು ಬಿಜೆಪಿ ನಾಯಕರು ರಾಷ್ಟ್ರೀಯ ಏಕತೆಯ ಪ್ರಬಲ ಸಂಕೇತವಾಗಿ ನೋಡುತ್ತಿದ್ದಾರೆ.

5 /8

ಪ್ರಧಾನಿಯವರ ಭದ್ರತೆಯನ್ನು ಖಾತ್ರಿಪಡಿಸಲು ವಿವೇಕಾನಂದ ರಾಕ್ ಸ್ಮಾರಕದ ಸುತ್ತಲೂ 2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕೋಸ್ಟ್ ಗಾರ್ಡ್ ಮತ್ತು ನೌಕಾಪಡೆ ಕೂಡ ಕಟ್ಟೆಚ್ಚರ ವಹಿಸಿದೆ.

6 /8

ಲೋಕಸಭೆ ಚುನಾವಣೆಯ ಅಂತಿಮ ಹಂತದ ಪ್ರಚಾರ ಗುರುವಾರ ಸಂಜೆ 5 ಗಂಟೆಗೆ ಮುಕ್ತಾಯಗೊಂಡಿತು. 2019ರ ಚುನಾವಣೆಯ ಕೊನೆಯ ಹಂತದ ಮೊದಲು ಸಹ ಪ್ರಧಾನಿ ಮೋದಿಯವರು ಕೇದಾರನಾಥ ಪ್ರವಾಸದ ಸಮಯದಲ್ಲಿ ಗುಹೆಯಲ್ಲಿ ಧ್ಯಾನ ಮಾಡಿದ್ದರು.

7 /8

ಧ್ಯಾನವನ್ನು ಪ್ರಾರಂಭಿಸುವ ಮೊದಲು ಸ್ವಲ್ಪ ಸಮಯದವರೆಗೆ ಪ್ರಧಾನಿ ಮೋದಿಯವರು ಮಂಟಪಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ನಿಂತು ಸುತ್ತಮುತ್ತಲ ಪ್ರಕೃತಿಯನ್ನು ವೀಕ್ಷಿಸಿದರು.  

8 /8

ಸ್ಮಾರಕಕ್ಕೆ ಪ್ರಧಾನಿ ಮೋದಿಯವರ ಭೇಟಿಯನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು 'ಖಾಸಗಿ' ಭೇಟಿ ಎಂದು ಹೇಳಿದ್ದಾರೆ. ಹೀಗಾಗಿ ಅವರ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲವೆಂದು ತಿಳಿದುಬಂದಿದೆ.