ಮನೆಯ ಮುಂದೆ ಈ ಗಿಡಗಳನ್ನು ನೆಟ್ಟರೆ ಧನ ಹರಿದು ಬರುತ್ತದೆಯಂತೆ .!

ಮನೆಯ ವಿವಿಧ ಸ್ಥಳಗಳಲ್ಲಿ ವಿವಿಧ ರೀತಿಯ ಸಸ್ಯಗಳನ್ನು ನೆಡಲಾಗುತ್ತದೆ. ಇದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಯಾಗುತ್ತದೆ. 

Lucky Plant:  ವಾಸ್ತು ಮನೆಯ ಸಂತೋಷ ಮತ್ತು ಸಮೃದ್ಧಿಗೆ ನೇರವಾಗಿ ಸಂಬಂಧಿಸಿದೆ. ಧನಾತ್ಮಕ ಶಕ್ತಿಗಾಗಿ ಮನೆಯಲ್ಲಿ ಮರ ಗಿಡಗಳನ್ನು ನೆಡಲಾಗುತ್ತದೆ. ಮನೆಯ ವಿವಿಧ ಸ್ಥಳಗಳಲ್ಲಿ ವಿವಿಧ ರೀತಿಯ ಸಸ್ಯಗಳನ್ನು ನೆಡಲಾಗುತ್ತದೆ. ಇದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಯಾಗುತ್ತದೆ. ಮನೆಯ ಮುಂದೆ ನೆದಬಹುದಾದ ಕೆಲವು ಸಸ್ಯಗಳ ಬಗ್ಗೆ ಹೇಳಲಾಗಿದೆ. ಇದು ಮನೆಯಲ್ಲಿ ಸಂಪತ್ತಿನ ಆಗಮನಕ್ಕೆ ದಾರಿ ತೆರೆಯುತ್ತದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /4

ವಾಸ್ತು ಶಾಸ್ತ್ರದ ಪ್ರಕಾರ,ಮನಿ ಪ್ಲಾಂಟ್  ಅನ್ನು ಸರಿಯಾದ ದಿಕ್ಕಿನಲ್ಲಿ  ನೆಡುವುದು ಅವಶ್ಯಕ. ಇದನ್ನು ಮನೆಯಲ್ಲಿ ನೆಡುವುದರಿಂದ ಸಂಪತ್ತು, ಐಶ್ವರ್ಯ ಮತ್ತು ಸಂತೋಷ ಮತ್ತು ಸಮೃದ್ಧಿ ಪ್ರಾಪ್ತಿಯಾಗುತ್ತದೆ. ಇದನ್ನು ಮನೆಯ ಉತ್ತರ ದಿಕ್ಕಿನಲ್ಲಿ ನೆಡಬೇಕು. ಅದೇ ಸಮಯದಲ್ಲಿ, ಉತ್ತರ ದಿಕ್ಕಿನಲ್ಲಿ ನೆಡಲು ಸಾಧ್ಯವಾಗದಿದ್ದರೆ, ಅದನ್ನು ಪೂರ್ವ ದಿಕ್ಕಿನಲ್ಲಿಯೂ ನೆಡಬಹುದು. ಮನಿ ಪ್ಲಾಂಟ್ ಅನ್ನು ದಕ್ಷಿಣ ದಿಕ್ಕಿನಲ್ಲಿ ನೆಡಬಾರದು . 

2 /4

ಹಿಂದೂ ಧರ್ಮದಲ್ಲಿ ತುಳಸಿ ವಿಷ್ಣು ಮತ್ತು  ಲಕ್ಷ್ಮೀ ದೇವಿಗೆ ಸಂಬಂಧಿಸಿದ್ದಾಗಿದೆ. ತುಳಸಿ ಗಿಡವನ್ನು ಮನೆಯಲ್ಲಿ ನೆಟ್ಟರೆ ಇಬ್ಬರ ಕೃಪೆಯೂ ಸಿಗುತ್ತದೆ. ಮನೆಯಲ್ಲಿರುವ ತುಳಸಿ ಗಿಡವು ಹಸಿರಾಗಿದ್ದರೆ, ಅದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯ ಸೂಚಕವಾಗಿದೆ. 

3 /4

ನಿಂಬೆ ಮರವನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಕಿತ್ತಳೆ ಅಥವಾ ನಿಂಬೆ ಮರವನ್ನು ಮನೆಯ ಮುಂದೆ ನೆಟ್ಟರೆ ಆದಾಯ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ನಿಬೆ ಸಸಿ ಎಷ್ಟು ಹಣ್ಣುಗಳನ್ನು ಬಿಡುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ಮನೆಗೆ ಹರಿದು ಬರುವ ಧನ ಸಂಪತ್ತು ಕೂಡಾ ವೃದ್ದಿಯಾಗುತ್ತದೆ ಎಂದು ಹೇಳಲಾಗುತ್ತದೆ.   

4 /4

ತಾಳೆ ಮರವನ್ನು ವಾಸ್ತು ಪ್ರಕಾರ ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಅರೆಕಾ ಪಾಮ್ ಉತ್ತಮ ಆರೋಗ್ಯ, ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ. ಮನೆಯಲ್ಲಿ ಸಕಾರಾತ್ಮಕತೆ ಉಳಿಯುತ್ತದೆ. ಈ ಸಸ್ಯವು ಮನೆಯಲ್ಲಿ ಆಮ್ಲಜನಕದ ಮಟ್ಟವನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ ಮನೆಯಲ್ಲಿರುವ ಎಲ್ಲಾ ರೀತಿಯ ಋಣಾತ್ಮಕತೆಯನ್ನು ಹೋಗಲಾಡಿಸುತ್ತದೆ.