Rahu-Ketu Gochar: 13 ದಿನಗಳ ಬಳಿಕ ಈ ರಾಶಿಯವರಿಗೆ ರಾಹು-ಕೇತು ಕಾಟದಿಂದ ಸಿಗಲಿದೆ ಮುಕ್ತಿ

Rahu-Ketu Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ದುಷ್ಟ ಗ್ರಹಗಳು ಎಂತಲೇ ಕರೆಯಲ್ಪಡುವ ರಾಹು-ಕೇತು ಗ್ರಹಗಳು ಶನಿ ದೇವನ ಬಳಿಕ ಅತ್ಯಂತ ನಿಧಾನವಾಗಿ ಚಲಿಸುವ ಗ್ರಹಗಳು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /8

ವೈದಿಕ ಜ್ಯೋತಿಷ್ಯದಲ್ಲಿ ಪಾಪ ಗ್ರಹಗಳು ಎಂತಲೇ ಕರೆಯಲ್ಪಡುವ ರಾಹು-ಕೇತು ಗ್ರಹಗಳನ್ನು ನೆರಳು ಗ್ರಹಗಳು ಎಂತಲೂ ಕರೆಯಲಾಗುತ್ತದೆ. ಈ ಗ್ರಹಗಳು ಶನಿ ಬಳಿಕ ಅತಿ ನಿಧಾನವಾಗಿ ಸಂಚರಿಸುವ ಗ್ರಹಗಳು. ಸದಾ ಹಿಮ್ಮುಖವಾಗಿ ಚಲಿಸುವ ರಾಹು-ಕೇತು ಗ್ರಹಗಳು ಪ್ರತಿ ಒಂದೂವರೆ ವರ್ಷಗಳಿಗೊಮ್ಮೆ ತಮ್ಮ ರಾಶಿಯನ್ನು ಬದಲಾಯಿಸುತ್ತವೆ. 

2 /8

ಇದೀಗ ಅಕ್ಟೋಬರ್ 30, 2023 ರಂದು ರಾಹು-ಕೇತು ಗ್ರಹಗಳು ತಮ್ಮ ಸಂಚಾರವನ್ನು ಬದಲಾಯಿಸಲಿವೆ. ಈ ದಿನ, ರಾಹುವು ಮೇಷ ರಾಶಿಯನ್ನು ತೊರೆದು ಮೀನ ರಾಶಿಯನ್ನು ಪ್ರವೇಶಿಸಿದರೆ, ಕೇತು ತುಲಾ ರಾಶಿಯನ್ನು ಬಿಟ್ಟು ಕನ್ಯಾ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. 

3 /8

ಈ ತಿಂಗಳಾಂತ್ಯದಲ್ಲಿ ರಾಹು-ಕೇತು ಸಂಚಾರ ಬದಲಾವಣೆಯಿಂದ ಕೆಲವು ರಾಶಿಯವರ ಜೀವನದಲ್ಲಿ ಕಷ್ಟದ ಕತ್ತಲು ಕಳೆದು, ಸುಖದ ಜ್ಯೋತಿ ಬೆಳಗಲಿದೆ ಎಂದು ಹೇಳಲಾಗುತ್ತಿದೆ. ಅಕ್ಟೋಬರ್ 30ರ ಬಳಿಕ ಈ ರಾಶಿಯವರಿಗೆ ರಾಹು-ಕೇತು ಕಾಟದಿಂದ ಮುಕ್ತಿ ದೊರೆತು ಅವರ ಬದುಕೇ ಬಂಗಾರವಾಗಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ನೋಡುವುದಾದರೆ... 

4 /8

ಒಂದೂವರೆ ವರ್ಷಗಳಿಂದ ರಾಹು ಕಾಟದಿಂದ ಬಳಲುತ್ತಿದ್ದ ಮೇಷ ರಾಶಿಯವರಿಗೆ ಅಕ್ಟೋಬರ್ 30ರ ಬಳಿಕ ಪರಿಹಾರ ದೊರೆಯಲಿದೆ. ಬಳಿಕ, ಇವರ ವೃತ್ತಿ ಮತ್ತು ವ್ಯವಹಾರದಲ್ಲಿ ಯಶಸ್ಸನ್ನು ಕಾಣಬಹುದು. ಪ್ರತಿ ಕೆಲಸ ಕಾರ್ಯಗಳಲ್ಲೂ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ. 

5 /8

ಅಕ್ಟೋಬರ್ 30 ರಂದು  ರಾಹು-ಕೇತು ಸಂಚಾರ ಬದಲಾವಣೆಯು ಕರ್ಕಾಟಕ ರಾಶಿಯವರಿಗೆ ಒಳ್ಳೆಯ ದಿನಗಳನ್ನು ತರಲಿದೆ. ಈ ಸಂದರ್ಭದಲ್ಲಿ ಹಣಕಾಸಿನ ಸ್ಥಿತಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ. ಮಾತ್ರವಲ್ಲ, ಈ ಜನರ ವೃತ್ತಿ-ವ್ಯವಹಾರದಲ್ಲಿಯೂ ಲಾಭವನ್ನು ಪಡೆಯಬಹುದು. 

6 /8

ರಾಹು-ಕೇತು ಗ್ರಹಗಳ ರಾಶಿ ಪರಿವರ್ತನೆಯು ಸಿಂಹ ರಾಶಿಯವರ ಜೀವನದಲ್ಲಿ ಶುಭ ದಿನಗಳನ್ನು ತರಲಿದೆ. ಅಕ್ಟೋಬರ್ 30ರ ಬಳಿಕ ನಿಮ್ಮ ಜೀವನದಲ್ಲಿ ಇಷ್ಟು ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳು ದೂರಾಗಿ, ಬಂಗಾರದ ಸಮಯವನ್ನು ಅನುಭವಿಸುವಿರಿ. ಆರ್ಥಿಕ ದೃಷ್ಟಿಯಿಂದಲೂ ಇದು ಅತ್ಯುತ್ತಮ ಸಮಯ ಎಂದು ಸಾಬೀತುಪಡಿಸಲಿದೆ.   

7 /8

ರಾಹು-ಕೇತು ಸಂಚಾರವು ತುಲಾ ರಾಶಿಯವರ ಜೀವನದಲ್ಲಿ ಮಂಗಳಕರ ಫಲಗಳನ್ನು ತರಲಿದೆ. ಈ ಸಮಯದಲ್ಲಿ ವಿವಾಹಿತರು ಸುಖ ದಾಂಪತ್ಯವನ್ನು ಅನುಭವಿಸಿದರೆ, ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಬೇರೆಡೆ ಸಿಲುಕಿರುವ ಹಣ ನಿಮ್ಮ ಕೈ ಸೇರಲಿದೆ. 

8 /8

ರಾಹು-ಕೇತು ಗ್ರಹಗಳ ರಾಶಿ ಪರಿವರ್ತನೆಯು ಮೀನ ರಾಶಿಯವರ ಜೀವನದಲ್ಲಿ ಹೊಸ ಹೊಸ ಅವಕಾಶಗಳನ್ನು ತರಲಿದೆ. ಈ ಸಮಯದಲ್ಲಿ ನಿಮ್ಮ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿದ್ದು, ಉದ್ಯೋಗಸ್ಥರಿಗೆ ಪ್ರಮೋಷನ್ ಭಾಗ್ಯವೂ ಇದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.