Rajasthan Election Result 2023: ಯಾರಾಗ್ತಾರೆ ರಾಜಸ್ಥಾನದ ‘ರಾಜ’?, ಪ್ರಮುಖರ ಸಂಪೂರ್ಣ ಮಾಹಿತಿ

Rajasthan Election Result 2023: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸರ್ದಾರ್‌ಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರವು ಗೆಹ್ಲೋಟ್ ಅವರ ಕಾರ್ಯಕ್ಷೇತ್ರವಾಗಿದ್ದು, ಅವರು 25 ವರ್ಷಗಳಿಂದ ನಿರಂತರವಾಗಿ ಇಲ್ಲಿಂದ ಚುನಾವಣೆಯಲ್ಲಿ ಗೆದ್ದಿದ್ದಾರೆ.

Rajasthan Election Result 2023: ರಾಜಸ್ಥಾನ ವಿಧಾನಸಭಾ ಚುನಾವಣಾ ಫಲಿತಾಂಶದ ಸ್ಥಿತಿ ಬಹುತೇಕ ಸ್ಪಷ್ಟವಾಗಿದೆ. ಗೆದ್ದು ಸೋತ ರಾಜಸ್ಥಾನದ 10 ಪ್ರಮುಖರ ನಾಯಕರ ಶಕ್ತಿ ಪ್ರದರ್ಶನ ಹೇಗಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ನಾಯಕರ ಜೊತೆಗೆ ಇನ್ನುಳಿದ ಪಕ್ಷಗಳ ನಾಯಕರ ಭವಿಷ್ಯ ಏನಾಗಲಿದೆ..? ಇದಕ್ಕೆ ನಾಳೆ ಮತದಾರನಿಂದ ಉತ್ತರ ಸಿಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /10

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸರ್ದಾರ್‌ಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರವು ಗೆಹ್ಲೋಟ್ ಅವರ ಕಾರ್ಯಕ್ಷೇತ್ರವಾಗಿದ್ದು, ಅವರು 25 ವರ್ಷಗಳಿಂದ ನಿರಂತರವಾಗಿ ಇಲ್ಲಿಂದ ಚುನಾವಣೆಯಲ್ಲಿ ಗೆದ್ದಿದ್ದಾರೆ.1998ರಲ್ಲಿ ಕಾಂಗ್ರೆಸ್ ಗೆಹ್ಲೋಟ್ ಅವರನ್ನು ರಾಜಸ್ಥಾನದ ಸಿಎಂ ಮಾಡಿದಾಗ, ಅವರು ಸರ್ದಾರ್ಪುರ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಬೇಕಾಗಿತ್ತು. ಈ ಚುನಾವಣೆಯಲ್ಲಿ ಗೆದ್ದು ಅವರು ವಿಧಾನಸಭೆ ಪ್ರವೇಶಿಸಿದರು. 2008ರಲ್ಲಿ ಗೆಹ್ಲೋಟ್ 2ನೇ ಬಾರಿಗೆ ಮುಖ್ಯಮಂತ್ರಿ ಚುನಾವಣೆಯಲ್ಲಿ ಗೆದ್ದರು. 2018ರಲ್ಲಿ ಮುಖ್ಯಮಂತ್ರಿಯೂ ಆದ ಅವರು ಪ್ರಸ್ತುತ 3ನೇ ಅವಧಿಯನ್ನು ಪೂರ್ಣಗೊಳಿಸುತ್ತಿದ್ದಾರೆ. ಗೆಹ್ಲೋಟ್ ವಿರುದ್ಧ ಪ್ರೊಫೆಸರ್ ಮಹೇಂದ್ರ ಸಿಂಗ್ ರಾಥೋಡ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ರಾಥೋಡ್ ರಾಜಸ್ಥಾನ ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರು. ಈ ಚುನಾವಣೆಯಲ್ಲಿ ರಾಥೋಡ್ ವಿರುದ್ಧ ಗೆಹ್ಲೋಟ್ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

2 /10

ಸಚಿನ್ ಪೈಲಟ್ ಟೋಂಕ್‌ನ ಪ್ರಸ್ತುತ ಶಾಸಕರಾಗಿದ್ದು, ಅವರು ಈ ಕ್ಷೇತ್ರದಿಂದ ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಪೈಲಟ್ ಈ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬುದು ಕುತೂಹಲಕಾರಿಯಾಗಿದೆ. ಟೋಂಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪೈಪೋಟಿ ಏರ್ಪಟ್ಟಿದೆ. ಕಳೆದ 3 ಚುನಾವಣೆಗಳಲ್ಲಿ 2ರಲ್ಲಿ ಕಾಂಗ್ರೆಸ್ ಈ ಗೆದ್ದಿದೆ, 2013ರಲ್ಲಿ ಬಿಜೆಪಿ ಗೆದ್ದಿತ್ತು. ಟೋಂಕ್ ಕ್ಷೇತ್ರದಲ್ಲಿ ಸಚಿನ್ ಪೈಲಟ್ ಮತ್ತು ಅಜಿತ್ ಸಿಂಗ್ ಮೆಹ್ತಾ ನಡುವೆ ಪೈಪೋಟಿ ಏರ್ಪಟ್ಟಿದೆ. ಪೈಲಟ್ 2018ರಲ್ಲಿ ಮೆಹ್ತಾ ಅವರನ್ನು ಸೋಲಿಸಿದ್ದರು, ಮೆಹ್ತಾ 2013ರಲ್ಲಿ ಗೆಲುವು ಸಾಧಿಸಿದ್ದರು.

3 /10

ವಸುಂಧರಾ ರಾಜೆ ಅವರು ಝಲ್ರಾಪಟನ್ ಕ್ಷೇತ್ರವನ್ನು ತಮ್ಮ ಭದ್ರಕೋಟೆ ಎಂದು ಪರಿಗಣಿಸಿದ್ದಾರೆ, ಈ ಬಾರಿಯೂ ಅವರು ಈ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಅವರು 2003ರಿಂದ ನಿರಂತರವಾಗಿ ಈ ಕ್ಷೇತ್ರದಲ್ಲಿ ಗೆಲ್ಲುತ್ತಿದ್ದಾರೆ. ಈ ಅವಧಿಯಲ್ಲಿ ಅವರು 2 ಬಾರಿ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದರು. ಅವರ ವಿರುದ್ಧ ಕಾಂಗ್ರೆಸ್ ರಾಮಲಾಲ್ ಚೌಹಾಣ್ ಅವರನ್ನು ಕಣಕ್ಕಿಳಿಸಿದೆ. 2018ರ ಚುನಾವಣೆಯಲ್ಲಿ ವಸುಂಧರಾ ಅವರು ಕಾಂಗ್ರೆಸ್‌ನ ಮನ್ವೇಂದ್ರ ಸಿಂಗ್ ಅವರನ್ನು ಸೋಲಿಸಿದ್ದರು.

4 /10

ರಾಜಸ್ಥಾನದ ರಾಜಸಮಂದ್ ಲೋಕಸಭಾ ಕ್ಷೇತ್ರದ ಸಂಸದೆ ದಿಯಾ ಕುಮಾರಿ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜಧಾನಿ ಜೈಪುರದ ವಿದ್ಯಾಧರ್ ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದಾರೆ. ಆಂತರಿಕ ಮೂಲಗಳ ಮಾಹಿತಿ ಪ್ರಕಾರ, ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ದಿಯಾಕುಮಾರಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡಬಹುದು ಎಂಬ ಚರ್ಚೆ ನಡೆದಿದೆ. ಆದರೆ ಇದು ಕೇವಲ ಊಹಾಪೋಹ ಎಂದು ಸ್ವತಃ ದಿಯಾ ಕುಮಾರಿ ಅವರೇ ಹೇಳಿದ್ದಾರೆ.

5 /10

ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಬಾಬಾ ಬಾಲಕ್ ನಾಥ್ ಜನಪ್ರಿಯ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಅನೇಕರು ಅವರನ್ನು ರಾಜಸ್ಥಾನದ ಯೋಗಿ ಎಂದೂ ಕರೆಯುತ್ತಾರೆ. ಬಿಜೆಪಿ ಅವರನ್ನು ತಿಜಾರಾ ವಿಧಾನಸಭಾ ಕ್ಷೇತ್ರದಿಂದ ತನ್ನ ಅಭ್ಯರ್ಥಿಯನ್ನಾಗಿ ಮಾಡಿದೆ. ಇಮ್ರಾನ್ ಖಾನ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಇತ್ತೀಚೆಗಷ್ಟೇ ಬಾಬಾ ಬಾಲಕನಾಥ್ ಕೂಡ ತಮ್ಮ ಹೇಳಿಕೆಗಳಿಂದ ಸುದ್ದಿಯಾಗಿದ್ದರು. ಈ ಕ್ಷೇತ್ರದ ಫಲಿತಾಂಶವನ್ನು ಭಾರತ-ಪಾಕಿಸ್ತಾನ ಪಂದ್ಯವೆಂದು ಬಣ್ಣಿಸಲಾಗಿದೆ. ಹೀಗಾಗಿ ಇಲ್ಲಿ ಯಾರಿಗೆ ಗೆಲುವು ಸಿಗುತ್ತದೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.

6 /10

ಒಲಿಂಪಿಯನ್ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಬಿಜೆಪಿಯು ಜೋತ್ವಾರಾ ಕ್ಷೇತ್ರದಿಂದ ಕಣಕ್ಕಿಳಿಸಿದೆ. 2014ರಲ್ಲಿ ಮೊದಲ ಬಾರಿಗೆ ಸಂಸದರಾಗಿದ್ದ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಕಣಕ್ಕಿಳಿಸಿದೆ. ಅವರ ವಿರುದ್ಧ ಕಾಂಗ್ರೆಸ್ ಅಭಿಷೇಕ್ ಚೌಧರಿ ಅವರನ್ನು ಕಣಕ್ಕಿಳಿಸಿದೆ.

7 /10

ಬಿಜೆಪಿಯ ಕಿರೋರಿ ಲಾಲ್ ಮೀನಾ ಸವಾಯಿ ಮಾಧೋಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಆಶಾ ಮೀನಾ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಕಾರಣ ಈ ಬಾರಿಯ ಚುನಾವಣೆ ಅವರಿಗೆ ಸುಲಭವಲ್ಲ. ಈ ಮೂಲಕ ಈ ಕ್ಷೇತ್ರದಲ್ಲಿ ಬಿಜೆಪಿಯ ಕಿರೋರಿ ಲಾಲ್ ಮತ್ತು ಕಾಂಗ್ರೆಸ್‌ನ ಹಾಲಿ ಶಾಸಕ ಡ್ಯಾನಿಶ್ ಅಬ್ರಾರ್ ಹಾಗೂ ಆಶಾ ಮೀನಾ ನಡುವೆ ಪೈಪೋಟಿ ಏರ್ಪಡಲಿದೆ.

8 /10

ಮಾಜಿ ವಿಧಾನಸಭಾ ಸ್ಪೀಕರ್ ಸಿಪಿ ಜೋಶಿ ನಾಥದ್ವಾರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಬಾರಿ ಬಿಜೆಪಿ ಅವರ ವಿರುದ್ಧ ಮೇವಾರ್ ರಾಜಮನೆತನದ ಕುನ್ವರ್ ವಿಶ್ವರಾಜ್ ಸಿಂಗ್ ಅವರನ್ನು ಕಣಕ್ಕಿಳಿಸಿದೆ. ಆದಾಗ್ಯೂ, ನಾಥದ್ವಾರವನ್ನು ಸಿಪಿ ಜೋಶಿ ಅವರ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಇಲ್ಲಿಂದ 5 ಬಾರಿ ಶಾಸಕರೂ ಆಗಿದ್ದಾರೆ. 1980, 1985, 1993, 2003ರ ಚುನಾವಣೆಯಲ್ಲಿ ಸಿ.ಪಿ.ಜೋಶಿ ಶಾಸಕರಾಗಿದ್ದಾರೆ. 2018ರ ಚುನಾವಣೆಯಲ್ಲಿ ಅವರು ಬಿಜೆಪಿಯ ಮಹೇಶ್ ಪ್ರತಾಪ್ ಸಿಂಗ್ ಅವರನ್ನು ಸೋಲಿಸಿದ್ದರು.

9 /10

ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋಟಸಾರ ಅವರು ಸಿಕರ್ ಜಿಲ್ಲೆಯ ಲಕ್ಷ್ಮಣಗಢ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಅವರು ಗೆಹ್ಲೋಟ್ ಸರ್ಕಾರದಲ್ಲಿ ಸಚಿವರಾಗಿದ್ದರು. ಆದರೆ ಅಧ್ಯಕ್ಷರಾದ ನಂತರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ದೋಟಸಾರ ವಿರುದ್ಧ ಬಿಜೆಪಿ ಸುಭಾಷ್ ಮಹಾರಿಯಾಗೆ ಟಿಕೆಟ್ ನೀಡಿದೆ. 2013ರ ಚುನಾವಣೆಯಲ್ಲೂ ದೋಟಸಾರಾ ಮತ್ತು ಮಹರಿಯಾ ನಡುವೆ ಮುಖಾಮುಖಿಯಾಗಿತ್ತು. ಆದರೆ ಆಗ ಮಹರಿಯಾ ಸೋಲು ಕಂಡಿದ್ದರು.

10 /10

ತಾರಾನಗರ ವಿಧಾನಸಭಾ ಕ್ಷೇತ್ರವು ಈ ಬಾರಿ ಅತ್ಯಂತ ಪ್ರಮುಖ ಕ್ಷೇತ್ರವಾಗಿ ಗಮನ ಸೆಳೆದಿದೆ. ಇಲ್ಲಿ ಕಾಂಗ್ರೆಸ್ ಮಾಜಿ ರಾಜ್ಯಸಭಾ ಸದಸ್ಯ ನರೇಂದ್ರ ಬುದಾನಿಯಾ ಅವರನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್ ಅವರನ್ನು ಕಣಕ್ಕಿಳಿಸಿದೆ. ಈ ಕ್ಷೇತ್ರವು ಅತ್ಯಂತ ಪ್ರಮುಖ ಆಕರ್ಷಣೆಯಾಗಿದ್ದು, ಇಲ್ಲಿ ಗೆಲ್ಲಲು ಪ್ರಮುಖ ಪಕ್ಷಗಳು ಎಲ್ಲಾ ರಣತಂತ್ರಗಳನ್ನು ಪ್ರಯೋಗಿಸಿವೆ. ಬುದಾನಿಯಾ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ‘ಚುನಾವಣೆಯಲ್ಲಿ ಗೆಲ್ಲಲು ಯಾರನ್ನೂ ಬೇಕಾದರೂ ಸಾಯಿಸಿ’ ಎಂದು ಹೇಳಿದ್ದರು. ಈ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿತ್ತು. ಬುಡಾನಿಯಾ ಅವರ ಈ ಹೇಳಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು.