ಕೊಲೆಯಾದ ದಿನ ದರ್ಶನ್‌ ಜೊತೆಗಿದ್ದ ಚಿಕ್ಕಣ್ಣ... ಪೊಲೀಸ್‌ ವಿಚಾರಣೆಯಲ್ಲಿ ಹೊರಬಿತ್ತು ಸತ್ಯ !?

Actor Chikkanna statement: ದರ್ಶನ್ ಮತ್ತು ಪವಿತ್ರಾ ಗೌಡ ಮೈಸೂರಿನ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದು ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಈ ಪ್ರಕರಣದಲ್ಲಿ ಇತ್ತೀಚಿಗೆ ಕನ್ನಡ ಹಾಸ್ಯನಟ ಚಿಕ್ಕಣ್ಣ ಅವರಿಗೂ ಪೊಲೀಸರು ಕರೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಚಾಲಕ ಅಪ್ರೂವರ್ ಆಗಿ ಶರಣಾಗಿದ್ದರಿಂದ ತನಿಖೆ ಚುರುಕುಗೊಂಡಿದೆ ಎನ್ನಲಾಗ್ತಿದೆ. 

2 /6

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ವೇಗ ಪಡೆದುಕೊಂಡಿದ್ದು,  ದರ್ಶನ್ ಆಪ್ತ ನಟ ಚಿಕ್ಕಣ್ಣ ಅವರಿಗೂ ನೋಟಿಸ್ ಜಾರಿ ನೀಡಿ ವಿಚಾರಣೆ ನಡೆಸಲಾಗಿದೆ. 

3 /6

ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್ ಮತ್ತು ಚಿಕ್ಕಣ್ಣ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ ನಲ್ಲಿ ಭೇಟಿಯಾಗಿದ್ದರು ಎನ್ನಲಾಗಿದೆ. ಮಧ್ಯಾಹ್ನದಿಂದಲೇ ಪಾರ್ಟಿಯಲ್ಲಿ ತೊಡಗಿದ್ದ ದರ್ಶನ್, ಸಂಜೆ ಅರ್ಜೆಂಟ್ ಕೆಲಸವಿದೆ ಎಂದು ಹೇಳಿ ಹೊರಟು ಹೋದರಂತೆ ಎನ್ನಲಾಗಿದೆ. 

4 /6

ಚಿಕ್ಕಣ್ಣ ಕೂಡ ದರ್ಶನ್‌ ಜೊತೆಗಿನ ಈ ಪಾರ್ಟಿಯಲ್ಲಿದ್ದ ಕಾರಣ ಅವರ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದಾರೆ. ಚಿಕ್ಕಣ್ಣ ಠಾಣೆಗೆ ಆಗಮಿಸಿ ಅಧಿಕಾರಿಗಳಿಗೆ ಸಹಕರಿಸಿದ್ದಾರೆ.

5 /6

ದರ್ಶನ್  ಊಟಕ್ಕೆ ಬರುವಂತೆ ಕಾಲ್ ಮಾಡಿ ಕರೆದಿದ್ರು. ಅದಕ್ಕೆ ನಾನು ಸ್ಟೋನಿ ಬ್ರೂಕ್‌ಗೆ ಹೋಗಿದ್ದೆ. ದರ್ಶನ್ ಮತ್ತು ನಾನು ಉತ್ತಮ ಸ್ನೇಹಿತರು. ಆಗಾಗ ಊಟಕ್ಕೆ ಸೇರುತ್ತೇವೆ. ಅವತ್ತು ಕೂಡ ನನ್ನನ್ನು ಊಟಕ್ಕೆ ಕರೆದಿದ್ದರು ನಾನು ಹೋಗಿದ್ದೆ ಎಂದು ಚಿಕ್ಕಣ್ಣ ಹೇಳಿದ್ದಾರೆ ಎನ್ನಲಾಗಿದೆ.

6 /6

ಆ ಬಳಿಕ ಅಲ್ಲಿ ಏನಾಯ್ತು ನನಗೆ ಯಾವುದೇ ಮಾಹಿತಿ ಇಲ್ಲ. ರೇಣುಕಾಸ್ವಾಮಿ ಹಾಗೂ ಬೇರೆ ವಿಚಾರ ನನಗೆ ಗೊತ್ತಿಲ್ಲ. ಮಾಧ್ಯಮಗಳಲ್ಲಿ ಬಂದಾಗಲೇ ನನಗೂ ಮಾಹಿತಿ ತಿಳಿದದ್ದು. ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ನಡ ಚಿಕ್ಕಣ್ಣ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.