Shani dev: ಶನಿಕಾಟ ತಪ್ಪಿಸಲು ಶನಿವಾರ ದೀಪ ಹಚ್ಚುವಾಗ ಈ ಕೆಲಸ ಮಾಡಿ

Rules For Worshiping Shani Dev: ಶನಿ ದೇವರನ್ನು ಒಲಿಸಿಕೊಳ್ಳಲು ಶನಿಯ ಪೂಜೆ, ಮಂತ್ರ ಹೇಳುವುದು, ಕಾಗೆಗೆ ಆಹಾರ ನೀಡುವುದು, ಎಳ್ಳೆಣ್ಣೆ ನೀಡುವುದು ಮತ್ತು ಆಂಜನೇಯ ಸ್ವಾಮಿಯ ಪೂಜೆ ಮಾಡಬೇಕು. ಹೀಗೆ ಮಾಡಿದರೆ ನೀವು ತಕ್ಕಮಟ್ಟಿಗೆ ಶನಿಯ ಕೆಟ್ಟ ದೃಷ್ಟಿಯಿಂದ ಪಾರಾಗಬಹುದು.  

Rules For Worshiping Shani Dev: ಹಿಂದೂಗಳು ಪ್ರತಿಯೊಂದು ದಿನವನ್ನು ಒಂದೊಂದು ದೇವರುಗಳ ಪೂಜೆಗೆ ಮೀಸಲಿರಿಸಿದ್ದಾರೆ. ಭಾನುವಾರ ಸೂರ್ಯನ ವಾರ, ಸೋಮವಾರ ಈಶ್ವರನ ಪೂಜೆ, ಮಂಗಳವಾರ ಹನುಮಂತನ ಪೂಜೆಗೆ, ಬುಧವಾರ ಗಣೇಶನ ಪೂಜೆಗೆ, ಗುರುವಾರ ವಿಷ್ಣುವಿನ ಪೂಜೆ, ಶುಕ್ರವಾರ ತಾಯಿ ಲಕ್ಷ್ಮೀದೇವಿಯ ಪೂಜೆಗೆ ಅದರಂತೆ ವಾರದ ಕೊನೆಯ ವಾರ ಶನಿವಾರದಂದು ನಾವು ಶನಿದೇವರನ್ನು ಪೂಜಿಸುತ್ತೇವೆ. ಶನಿದೇವರು ನ್ಯಾಯದ ದೇವರು, ಕರ್ಮದ ಫಲ ನೀಡುವ ದೇವರು ಎಂದು ಹೇಳಲಾಗಿದೆ. ಪ್ರತಿಯೊಬ್ಬ ವ್ಯಕ್ತಿಗೆ ಆತನ ಕರ್ಮಕ್ಕನುಸಾರ ಶನಿದೇವರು ಶಿಕ್ಷೆ ಮತ್ತು ಆಶೀರ್ವಾದವನ್ನು ನೀಡುತ್ತಾನೆಂದು ಹೇಳಲಾಗಿದೆ. ಶನಿಕಾಟವನ್ನು ತಪ್ಪಿಸಲು ಶನಿವಾರ ದೀಪ ಹಚ್ಚುವಾಗ ಒಂದು ಕೆಲಸವನ್ನು ಮಾಡಬೇಕು. ಇದರ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಶನಿವಾರ ಬಂತೆಂದರೆ ಶನಿದೇವನ ವಾರ ಎಂದರ್ಥ. ನೀವು ಏನಾದರೂ ಶನಿ ಗ್ರಹದ ವಕ್ರದೃಷ್ಟಿಗೆ ಒಳಗಾಗಿದ್ದರೆ ಈ ದಿನ ಶನಿದೇವರನ್ನು ಭಕ್ತಿಯಿಂದ ಪ್ರಾರ್ಥಿಸಿ ಪೂಜೆ ಮಾಡುವುದರಿಂದ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಬಹುದು.

2 /5

ಕೆಲವರು ಶನಿಯ ವಕ್ರದೃಷ್ಟಿಯಿಂದ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಶನಿಕಾಟದಿಂದ ಅವರಿಗೆ ಯಾವುದೇ ರೀತಿಯ ಯಶಸ್ಸು ದೊರೆಯುವುದಿಲ್ಲ, ಪ್ರತಿಯೊಂದರಲ್ಲಿಯೂ ಅವರಿಗೆ ಸೋಲು ಇರುತ್ತದೆ.

3 /5

ಶನಿದೇವನ ಅವಗಣನೆಗೆ ಒಳಗಾದರೆ ಜೀವನದಲ್ಲಿ ಕೈ ಹಿಡಿದ ಕೆಲಸಗಳಲ್ಲಿ ಸೋಲು, ವೃತ್ತಿ ಜೀವನದಲ್ಲಿ ಹಿನ್ನಡೆ, ನಿರುದ್ಯೋಗ ಸಮಸ್ಯೆ, ಸಮಾಜದಲ್ಲಿ ಅವಮಾನ, ಆರ್ಥಿಕವಾಗಿ ಹಿನ್ನಡೆಯುಂಟಾಗುತ್ತದೆ. ಶನಿದೇವನ ಕೃಪಾಕಟಾಕ್ಷ ದೊರೆತರೆ ಈ ಎಲ್ಲಾ ಸಮಸ್ಯೆಗಳಿಂದ ನಿಮಗೆ ಮುಕ್ತಿ ದೊರೆಯುತ್ತದೆ. 

4 /5

ಶನಿ ದೇವರನ್ನು ಒಲಿಸಿಕೊಳ್ಳಲು ಶನಿಯ ಪೂಜೆ, ಮಂತ್ರ ಹೇಳುವುದು, ಕಾಗೆಗೆ ಆಹಾರ ನೀಡುವುದು, ಎಳ್ಳೆಣ್ಣೆ ನೀಡುವುದು ಮತ್ತು ಆಂಜನೇಯ ಸ್ವಾಮಿಯ ಪೂಜೆ ಮಾಡಬೇಕು. ಹೀಗೆ ಮಾಡಿದರೆ ನೀವು ತಕ್ಕಮಟ್ಟಿಗೆ ಶನಿಯ ಕೆಟ್ಟ ದೃಷ್ಟಿಯಿಂದ ಪಾರಾಗಬಹುದು.  

5 /5

ಕರ್ಮಕಾರಕನಾದ ಶನಿದೇವರು ನಮ್ಮ ಕರ್ಮ ಫಲಗಳಿಗೆ ಅನುಸಾರವಾಗಿ ಒಳಿತು-ಕೆಡುಕು ಮಾಡುತ್ತಾನೆ. ಶನಿ ದೇವನ ಕೆಡುಕಿನಿಂದ ಪಾರಾಗಬೇಕಾದರೆ ಶನಿವಾರಗಳಂದು ದೇವರಿಗೆ ಎಳ್ಳೆಣ್ಣೆ ದೀಪ ಹಚ್ಚುವಾಗ ದೀಪಕ್ಕೆ ಒಂದು ಲವಂಗವನ್ನೂ ಹಾಕಬೇಕು. ವಾಸ್ತು ಪ್ರಕಾರ ಹೀಗೆ ಮಾಡುವುದರಿಂದ ಶನಿಯಿಂದ ಆಗಬಹುದಾದ ತೊಂದರೆಗಳು ನಿವಾರಣೆಯಾಗುತ್ತದೆ. ನಮ್ಮ ಆರ್ಥಿಕ ಸಂಕಷ್ಟಗಳೂ ಪರಿಹಾರವಾಗುತ್ತದೆ ಎಂಬ ನಂಬಿಕೆಯಿದೆ.