Diwali 2023 ಬಳಿಕ ತ್ರಿಗ್ರಹಿ ಯೋಗ ನಿರ್ಮಾಣ, ಸೂರ್ಯ-ಮಂಗಳರ ಕೃಪೆಯಿಂದ ಈ ಜನರ ಜೀವನದಲ್ಲಿ ಅಪಾರ ಕನಕವೃಷ್ಟಿ!

Surya-Mangal-Budh Yuti In Scorpio 2023:ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ದೀಪಾವಳಿ ಬಳಿಕ ವೃಶ್ಚಿಕ ರಾಶಿಯಲ್ಲಿ ತ್ರಿಗ್ರಹಿ ಯೋಗ ರೂಪುಗೊಳ್ಳುತ್ತಿದೆ. ಈ ಯೋಗ ಆರು ರಾಶಿಗಳ ಜನರಿಗೆ ಅಪಾರ ಧನಲಾಭ ಹಾಗೂ ಭಾಗ್ಯೋದಯವನ್ನು ಕರುಣಿಸಲಿದೆ. (Spiritual News In Kannada)
 

ಬೆಂಗಳೂರು: ಪ್ರತಿಯೊಂದು ಗ್ರಹ ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಯನ್ನು ಬದಲಾಯಿಸಿ ಇತರ ಗ್ರಹಗಳ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುತ್ತವೆ. ಇದರಿಂದ ಶುಭ-ಅಶುಭ ಯೋಗಗಳು ರೂಪುಗೊಳ್ಳುತ್ತವೆ. ಪ್ರಸ್ತುತ ನವೆಂಬರ್ 17, 2023 ರಂದು ವೃಶ್ಚಿಕ ರಾಶಿಯಲ್ಲಿ ತ್ರಿಗ್ರಹಿ ಯೋಗ ರೂಪುಗೊಳ್ಳುತ್ತಿದೆ. ಏಕೆಂದರೆ ಈ ದಿನ ಸೂರ್ಯದೇವ ವೃಶ್ಚಿಕ ರಾಶಿಯಲ್ಲಿ ಸಂಚರಿಸಲಿದ್ದಾನೆ. ಆದರೆ, ಮಂಗಳ ಹಾಗೂ ಬುಧ ಈಗಾಗಲೇ ವೃಶ್ಚಿಕ ರಾಶಿಯಲ್ಲಿ ವಿರಾಜಮಾನರಾಗಿರುವ ಕಾರಣ ಅಲ್ಲಿ ಮೂರು ಗ್ರಹಗಳ ಮೈತ್ರಿ ನೆರವೇರಲಿದೆ. ಇದು ಒಟ್ಟು ಆರು ರಾಶಿಗಳ ಜನರ ಭಾಗ್ಯವನ್ನು ಬೆಳಗಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kannada)

 

ಇದನ್ನೂ ಓದಿ-ಶೀಘ್ರದಲ್ಲಿಯೇ ಸ್ವರಾಶಿಗೆ ಧನದಾತನ ಆಗಮನ, ಲಕ್ಷ್ಮಿ ಕೃಪೆಯಿಂದ ಈ ರಾಶಿಗಳ ಜನರ ಜೀವನದಲ್ಲಿ ಶುಕ್ರದೆಸೆ ಆರಂಭ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ತುಲಾ ರಾಶಿ: ನಿಮ್ಮ ಜಾತಕದ ಧನ ಭಾವದಲ್ಲಿ ಈ ಯೋಗ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕಾಲಕಾಲಕ್ಕೆ ಆಕಸ್ಮಿಕ ಧನಲಾಭ ಪ್ರಾಪ್ತಿಯಾಗಲಿದೆ. ಈ ಸಮಯದಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಅಪಾರ ಸುಧಾರಿಸಲಿದೆ. ನಿಮಗೆ ಅಪಾರ ಧನಪ್ರಾಪ್ತಿಯಾಗಲಿದ್ದು ನಿಮ್ಮ ಜೀವನದಲ್ಲಿ ಮಹತ್ವಪೂರ್ಣ ಪರಿವರ್ತನೆ ಸಂಭವಿರುವ ಸಾಧ್ಯತೆ ಇದೆ. ಒಂದು ವೇಳೆ ನಿಮಗೆ ಬರಬೇಕಾದ ಹಣ ಎಲ್ಲಾದರು ಸಿಲುಕಿಕೊಂಡಿದ್ದರೆ, ಅದು ನಿಮ್ಮ ಕೈಸೇರಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಲಿದ್ದು, ಜನರು ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. ಮಾರ್ಕೆಟಿಂಗ್, ಮಾಧ್ಯಮ, ಶಿಕ್ಷಣ, ಸಂವಹನ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಈ ಯೋಗ ಅದ್ಭುತ ಸಾಬೀತಾಗಲಿದೆ. 

2 /7

ಸಿಂಹ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ವಾಹನ-ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಜೀವನದಲ್ಲಿ ಸುಖ ಸಮೃದ್ಧಿ ಹೆಚ್ಚಾಗಲಿದೆ. ನಿಮ್ಮ ಆಸೆಗಳು ಈಡೇರಲಿವೆ. ರಿಯಲ್ ಎಸ್ಟೇಟ್, ಆಸ್ತಿಪಾಸ್ತಿ, ಭೂಮಿಗೆ ಸಂಬಂಧಿಸಿದ ವ್ಯಾಪಾರದಲ್ಲಿ ತೊಡಗಿರುವ ಜನರಿಗೆ ಈ ಯೋಗ ಉತ್ತಮವಾಗಿರಲಿದೆ. ತ್ರಿಗ್ರಹಿ ಯೋಗದ ದೃಷ್ಟಿ ನಿಮ್ಮ ಕರ್ಮ ಭಾವದ ಮೇಲೆ ಬೀಳುತ್ತಿರುವ ಕಾರಣ ನೌಕರ ವರ್ಗದ ಜನರಿಗೆ ಬಡ್ತಿ ಭಾಗ್ಯ ಹಾಗೂ ವೃತ್ತಿ ಜೀವನದಲ್ಲಿ ಒಳ್ಳೆಯ ಅವಕಾಶಗಳು ಒದಗಿಬರಲಿವೆ. 

3 /7

ಮಕರ ರಾಶಿ: ಈ ಯೋಗ ನಿಮ್ಮ ಜಾತಕದ ಆದಾಯ ಹಾಗೂ ಲಾಭ ಸ್ಥಾನದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಜಬರ್ದಸ್ತ್ ಹೆಚ್ಚಳ ಸಂಭವಿಸಲಿದೆ. ಆದಾಯದ ಹೊಸ ಮಾರ್ಗಗಳು ನಿಮಗಾಗಿ ತೆರೆದುಕೊಳ್ಳಲಿವೆ. ಆದಾಯದ ಹೊಸ ಹೊಸ ಸಾಧನಗಳು ನಿರ್ಮಾಣಗೊಳ್ಳಲಿವೆ ಮತ್ತು ಅದರಿಂದ ನಿಮಗೆ ಅಪಾರ ಆರ್ಥಿಕ ಲಾಭ ಸಂಭವಿಸುವ ಸಾಧ್ಯತೆ ಇದೆ. ಆಮದು ಮತ್ತು ರಫ್ತು ವ್ಯವಹಾರದಲ್ಲಿ ತೊಡಗಿರುವವರಿಗೆ ಸಮಯ ಸಾಕಷ್ಟು ಅನುಕೂಲಕರವಾಗಿದೆ . ಹೂಡಿಕೆಗಾಗಿ ಯೋಚಿಸುತ್ತಿದ್ದ, ನೀವು ಮಾಡುವ ಹೂಡಿಕೆಗೆ ಉತ್ತಮ ಲಾಭವನ್ನು ನೀವು ಪಡೆಯಬಹುದು. 

4 /7

ಕನ್ಯಾ ರಾಶಿ: ಈ ಯೋಗ ನಿಮ್ಮ ಜಾತಕದ ತೃತೀಯ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರಿಂದ ನಿಮ್ಮ ಸಾಹಸ ಪರಾಕ್ರಮದಲ್ಲಿ ಸಾಕಷ್ಟು ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ಸಹೋದರ-ಸಹೋದರಿಯರ ಬೆಂಬಲ ನಿಮಗೆ ಪ್ರಾಪ್ತಿಯಾಗಲಿದೆ. ವಿದೇಶದಲ್ಲಿ ಕರಿಯರ್ ಮಾಡಲು ಬಯಸುವವರ ಆಸೆ ಈಡೇರಲಿದೆ. ಕಾರ್ಯಸ್ಥಳದಲ್ಲಿಯೂ ಕೂಡ ಮೇಲಾಧಿಕಾರಿಗಳು ನಿಮ್ಮ ಕೆಲಸದಿಂದ ಸಂತೃಪ್ತರಾಗಲಿದ್ದಾರೆ. ಈ ಅವಧಿಯಲ್ಲಿ ನಿಮ್ಮ ಆಸೆಗಳು  ಈಡೇರಲಿವೆ. ನಿಮ್ಮ ಎಲ್ಲಾ ಯೋಜನೆಗಳು ಪೂರ್ಣಗೊಳ್ಳಲಿವೆ. ನಿಮ್ಮ ಘನತೆ ಗೌರವ ಕೂಡ ಹೆಚ್ಚಾಗಲಿದೆ. 

5 /7

ವೃಶ್ಚಿಕ ರಾಶಿ: ಈ ಯೋಗ ನಿಮ್ಮ ರಾಶಿಯಲ್ಲಿಯೇ ರೂಪುಗೊಳ್ಳುತ್ತಿರುವ ಕಾರಣ ನಿಮ್ಮ ಸಾಹಸ ಪರಾಕ್ರಮ ಹೆಚ್ಚಾಗಲಿದೆ. ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು-ಚೈತನ್ಯ ಇರಲಿದೆ. ನಿಮ್ಮ ಜೀವನದಲ್ಲಿ ಖುಷಿಗಳ ಆಗಮನವಾಗಲಿದೆ. ವಿದೇಶೀ ಮೂಲಗಳಿಂದ ನಿಮಗೆ ಚನಲಾಭ ಉಂಟಾಗುವ ಸಾಧ್ಯತೆ ಇದೆ. ಈ ಯೋಗದ ದೃಷ್ಟಿ ನಿಮ್ಮ ಜಾತಕದ ಸಪ್ತಮ ಭಾವದಲ್ಲಿ ನೆಟ್ಟಿರುವ ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ಖುಷಿಗಳ ಆಗಮನವಾಗಲಿದೆ. ನಿಮಗೆ ಬಾಳಸಂಗಾತಿಯ ಬೆಂಬಲ ಸಿಗಲಿದೆ. ವೃತ್ತಿ ಜೀವನದಲ್ಲಿ ಲಾಭ ಪಡೆಯಲು ನೀವು ಮಾಡುವ ಪ್ರಯತ್ನಗಳು ಯಶಸ್ವಿಯಾಗಲಿವೆ. ಇದರಿಂದ ನಿಮಗೆ ಬಡ್ತಿ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಪಾಟ್ನರ್ಶಿಪ್ ವ್ಯವಹಾರದಲ್ಲಿಯೂ ಕೂಡ ನಿಮಗೆ ಉತ್ತಮ ಲಾಭ ಸಿಗಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರುವ ಸಾಧ್ಯತೆ ಇದೆ. 

6 /7

ಕರ್ಕ ರಾಶಿ: ತ್ರಿಗ್ರಹಿ ಯೋಗ ನಿಮ್ಮ ಜಾತಕದ ಪಂಚಮ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಮಕ್ಕಳಿಗೆ ಸಂಬಂಧಿಸಿದ ಒಳ್ಳೆಯ ಸುದ್ದಿ ನಿಮಗೆ ಸಿಗುವ ಸಾಧ್ಯತೆ ಇದೆ. ಸಂತಾನ ಪ್ರಾಪ್ತಿಯ ಬಯಕೆ ಹೊಂದಿದವರಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ವ್ಯಾಪಾರ ಮಾಡುತ್ತಿದ್ದರೆ ವ್ಯಾಪಾರದಲ್ಲಿ ಮಹತ್ವದ ಪರಿವರ್ತನೆಗಳನ್ನು ನೀವು ನೋಡುವಿರಿ. ಈ ಪರಿವರ್ತನೆಗಳು ನಿಮ್ಮ ಪಾಲಿಗೆ ಲಾಭದಾಯಕ ಸಾಬೀತಾಗಲಿವೆ. ಆಕಸ್ಮಿಕ ಧನಲಾಭದ ಸಂಕೇತಗಳೂ ಕೂಡ ಗೋಚರಿಸುತ್ತಿವೆ. 

7 /7

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)