ಹತ್ತು ವರ್ಷಗಳ ಬಳಿಕ ಸೂರ್ಯ-ಮಂಗಳರ ಮೈತ್ರಿ ಧನ ಕುಬೇರ ಕೃಪೆಯಿಂದ ಈ ಜನರಿಗೆ ಅಪಾರ ಧನಲಾಭ!

Surya Mangal Yuti 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ವೃಶ್ಚಿಕ ರಾಶಿಯಲ್ಲಿ ಸೂರ್ಯ ಹಾಗೂ ಮಂಗಳರ ಯುತಿ ನೆರವೇರಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಧನ ಕುಬೇರ ಕೃಪೆಯಿಂದ ಅಪಾರ ಧನಸಂಪತ್ತು ಪ್ರಾಪ್ತಿಯಾಗಲಿದೆ. (Spiritual News In Kannada)

ಬೆಂಗಳೂರು: ಜೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲಾ ಗ್ರಹಗಳು ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಗಳನ್ನು ಪರಿವರ್ತಿಸುವ ಮೂಲಕ ಪರಸ್ಪರ ಮೈತ್ರಿಯನ್ನು ಮಾಡಿಕೊಳ್ಳುತ್ತವೆ. ಈ ಮೈತ್ರಿಯ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಗೋಚರಿಸುತ್ತದೆ. ಪ್ರಸ್ತುತ ನವೆಂಬರ್ 17, 2023 ರಂದು ಸೂರ್ಯ ವೃಶ್ಚಿಕ ರಾಶಿಗೆ ಪ್ರವೇಶಿಸಿದ್ದಾನೆ. ಆದರೆ ವೃಶ್ಚಿಕ ರಾಶಿಯಲ್ಲಿ ಈಗಾಗಲೇ ಮಂಗಳ ವಿರಾಜಮಾನನಾಗಿರುವ ಕಾರಣ ಅಲ್ಲಿ ಸೂರ್ಯ ಮಂಗಳರ ಮೈತ್ರಿ ನೆರವೇರಿದೆ. ಈ ಮೈತ್ರಿಯ ಪ್ರಭಾವದಿಂದ ಕೆಲ ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭ ಹಾಗೂ ವೃತ್ತಿ-ವ್ಯಾಪಾರದಲ್ಲಿ ಉನ್ನತಿಯ ಯೋಗ ರೂಪುಗೊಳ್ಳುತ್ತಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kannada)

 

ಇದನ್ನೂ ಓದಿ-ಐವತ್ತು ವರ್ಷಗಳ ಬಳಿಕ ವಿಪರೀತ ರಾಜಯೋಗ, ಬುಧನ ಕೃಪೆಯಿಂದ ಈ ಜನರ ಬ್ಯಾಂಕ್ ಬ್ಯಾಲೆನ್ಸ್ ದುಪ್ಪಟ್ಟು!

 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Surya Mangal Yuti 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ವೃಶ್ಚಿಕ ರಾಶಿಯಲ್ಲಿ ಸೂರ್ಯ ಹಾಗೂ ಮಂಗಳರ ಯುತಿ ನೆರವೇರಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಧನ ಕುಬೇರ ಕೃಪೆಯಿಂದ ಅಪಾರ ಧನಸಂಪತ್ತು ಪ್ರಾಪ್ತಿಯಾಗಲಿದೆ. (Spiritual News In Kannada)  

2 /5

ಕರ್ಕ ರಾಶಿ: ಹಾಗೆ ನೋಡಿದರೆ ಈ ಇಬ್ಬರು ಕೂಡ ನಿಮ್ಮ ರಾಶಿಯ ರಾಷ್ಯಾಧಿಪನಾಗಿರುವ ಬುಧನ ಜೊತೆಗೆ ಸ್ನೇಹಭಾವದ ಸಂಬಂಧ ಹೊಂದಿದ್ದಾರೆ. ಇನ್ನೊಂದೆಡೆ ಈ ಮೈತ್ರಿ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ರೂಪುಗೊಂಡಿರುವ ಕಾರಣ ಅಲ್ಲಿ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣಗೊಂಡಿದೆ. ನಿಮ್ಮ ಜಾತಕದ ಧನಭಾವಕ್ಕೆ ಸೂರ್ಯ ಅಧಿಪತಿಯಾಗಿದ್ದಾನೆ ಮತ್ತು ಆತ ಪಂಚಮ ಭಾವದಲ್ಲಿ ಕುಳಿತುಕೊಂಡಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಅಪಾರ ಉನ್ನತಿಯಾಗಲಿದ್ದು, ಕಾಲಕಾಲಕ್ಕೆ ನಿಮಗೆ ಧನ ಪ್ರಾಪ್ತಿಯ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ ಮತ್ತು ನಿಮಗೆ ಧನಲಾಭ ಉಂಟಾಗಲಿದೆ. ಅದರಲ್ಲಿಯೂ ವಿಶೇಷವಾಗಿ ಹಣಗಳಿಕೆಯಲ್ಲಿ ನಿಮ್ಮ ಬುದ್ಧಿ ನಿಮಗೆ ಸಾಥ್ ನೀಡಲಿದೆ. ಮಕ್ಕಳ ಕಡೆಯಿಂದ ಶುಭ ಸಮಾಚಾರ ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಘನತೆ ಗೌರವ ಹೆಚ್ಚಾಗಲಿದ್ದು, ಪ್ರತಿಷ್ಠೆ ಪ್ರಾಪ್ತಿಯಾಗಲಿದೆ. ಎಲ್ಲಾ ಕಾರ್ಯಗಳಲ್ಲಿ ಆರ್ಯಸಿದ್ಧಿ ಪ್ರಾಪ್ತಿಯಾಗಲಿದೆ.   

3 /5

ಸಿಂಹ ರಾಶಿ: ಸೂರ್ಯ ಮಂಗಳರ ಈ ಮಂಗಳಕರ ಯೋಗ ನಿಮ್ಮ ಜಾತಕದ ಚತುರ್ಥ ಭಾವದಲ್ಲಿ ರೂಪುಗೊಂಡಿದೆ. ನಿಮ್ಮ ಜಾತಕದ ಭಾಗ್ಯ ಸ್ಥಾನಕ್ಕೆ ಮಂಗಳ ಅಧಿಪತಿಯಾಗಿದ್ದು, ಆತ ಕೇಂದ್ರ ತ್ರಿಕೋನ ರಾಜಯೋಗ ಕೂಡ ನಿರ್ಮಿಸಿದ್ದಾನೆ. ಈ ಅವಧಿಯಲ್ಲಿ ನಿಮಗೆ ಆಸ್ತಿಪಾಸ್ತಿಯಿಂದ ಲಾಭ ಸಿಗಲಿದೆ. ವೃತ್ತಿಜೀವನದಲ್ಲಿ ನಿಂತುಹೋದ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ವಾಹನ ಸುಖ ಪ್ರಾಪ್ತಿಯಾಗಲಿದೆ ಹಾಗೂ ವ್ಯಾಪಾರದಲ್ಲಿಯೂ ಕೂಡ ನಿಮಗೆ ಲಾಭ ಗಳಿಕೆಯ ಹಲವು ಅವಕಾಶಗಳು ಒದಗಿ ಬರಲಿವೆ. ನಿಮ್ಮ ಜೀವನದಲ್ಲಿ ಸುಖ ಸೌಕರ್ಯಗಳು ಹೆಚ್ಚಾಗಲಿವೆ. 

4 /5

ತುಲಾ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ನವೆಂಬರ್ 20,2023ರ ಬಳಿಕ ನಿಮಗೆ ಆಕಸ್ಮಿಕ ಧನಲಾಭ ಪ್ರಾಪ್ತಿಯಾಗಲಿದೆ. ಅದರಲ್ಲಿಯೂ ವಿಶೇಷವಾಗಿ ವ್ಯಾಪಾರಿಗಳಿಗೆ ಅಪಾರ ಲಾಭ ಸಿಗಲಿದೆ. ಇನ್ನೊಂದೆಡೆ ಗುರು ನಿಮ್ಮ ಜಾತಕದ ಸಪ್ತಮಭಾವದಲ್ಲಿ ಸ್ಥಿತನಾಗಿದ್ದಾನೆ ಮತ್ತು ಆತನ ದೃಷ್ಟಿ ಲಾಭದ ಮನೆಯ ಮೇಲಿದೆ. ಹೀಗಾಗಿ ಈ ಅವಧಿಯಲ್ಲಿ ಯಾವುದಾದರೊಂದು ಹೊಸ ಬಿಸ್ನೆಸ್ ಆರಂಭಿಸಲು ನೀವು ಬಯಸುತ್ತಿದ್ದರೆ, ಈ ಅವಧಿ ನಿಮ್ಮ ಪಾಲಿಗೆ ಅತ್ಯುತ್ತಮ ಸಾಬೀತಾಗಲಿದೆ. ಕುಟುಂಬದ ಬೆಂಬಲ ತೆಗೆದುಕೊಳ್ಳಲು ಮರೆಯಬೇಡಿ. 

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)