Indian Cricket: ಕ್ರಿಕೆಟ್ ಬಳಿಕ ರಾಜಕೀಯದಲ್ಲೂ ಸ್ಟಾರ್ ಗಳಾದ ಟೀಂ ಇಂಡಿಯಾದ ಈ ಖ್ಯಾತ ಆಟಗಾರರು!

ಕ್ರಿಕೆಟ್ ಅನ್ನು ಭಾರತದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆ ಎಂದು ಪರಿಗಣಿಸಲಾಗಿದೆ. ಇಂದಿನ ಕಾಲದಲ್ಲಿ, ಕ್ರಿಕೆಟಿಗರು ನಿವೃತ್ತಿಯ ನಂತರ ಕಾಮೆಂಟರಿಯಲ್ಲಿ ಕುಳಿತುಕೊಳ್ಳುತ್ತಾರೆ ಅಥವಾ ಕೋಚ್ ಆಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಈ ಸುದ್ದಿಯಲ್ಲಿ ನಾವು ಕ್ರಿಕೆಟ್‌ಗೆ ವಿದಾಯ ಹೇಳಿ ರಾಜಕೀಯಕ್ಕೆ ಸೇರಿದ 5 ಭಾರತೀಯ ಆಟಗಾರರ ಬಗ್ಗೆ ಹೇಳಲಿದ್ದೇವೆ. ಈ ಆಟಗಾರರು ಈಗ ಕ್ರಿಕೆಟ್ ಹಾಗೂ ರಾಜಕೀಯದಲ್ಲಿ ತಮ್ಮದೇ ಆದ ಐಡೆಂಟಿಟಿ ಮೂಡಿಸಿದ್ದಾರೆ.

1 /5

2007 ರ ಟಿ 20 ವಿಶ್ವಕಪ್ ಮತ್ತು 2011 ರ ವಿಶ್ವಕಪ್‌ನ ಭಾಗವಾಗಿದ್ದ ಲೆಜೆಂಡರಿ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ 2019 ರಲ್ಲಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಗಂಭೀರ್ ಭಾರತೀಯ ಜನತಾ ಪಕ್ಷದ ಲೋಕಸಭಾ ಸಂಸದರಾಗಿದ್ದಾರೆ. ಗೌತಮ್ ಗಂಭೀರ್ 2018 ರಲ್ಲಿ ಕ್ರಿಕೆಟ್‌ಗೆ ವಿದಾಯ ಹೇಳಿದರು.

2 /5

ಮನೋಜ್ ತಿವಾರಿ ಟೀಮ್ ಇಂಡಿಯಾದಲ್ಲಿ ಹೆಚ್ಚು ಯಶಸ್ವಿಯಾಗಲಿಲ್ಲ, ಆದರೆ ರಾಜಕೀಯದಲ್ಲಿ ಅವರ ವೃತ್ತಿಜೀವನವು ಉತ್ತಮವಾಗಿ ಸಾಗುತ್ತಿದೆ. ಮನೋಜ್ ತಿವಾರಿ ಪ್ರಸ್ತುತ ಬಂಗಾಳ ಸರ್ಕಾರದಲ್ಲಿ ಕ್ರೀಡಾ ಮತ್ತು ಯುವ ವ್ಯವಹಾರಗಳ ರಾಜ್ಯ ಸಚಿವರಾಗಿ ನೇಮಕಗೊಂಡಿದ್ದಾರೆ.

3 /5

ಟೀಂ ಇಂಡಿಯಾದ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರಾದ ಹರ್ಭಜನ್ ಸಿಂಗ್ ಇತ್ತೀಚೆಗೆ ರಾಜಕೀಯಕ್ಕೆ ಬಂದಿದ್ದಾರೆ. ಹರ್ಭಜನ್ ಸಿಂಗ್ ಜುಲೈ 18, 2022 ರಂದು ಆಮ್ ಆದ್ಮಿ ಪಕ್ಷದಿಂದ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

4 /5

1983ರ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದ ಆಲ್ ರೌಂಡರ್ ಕೀರ್ತಿ ಆಜಾದ್ ಕೂಡ ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕೀರ್ತಿ ಆಜಾದ್ ಅವರ ತಂದೆ ಭಗವತ್ ಝಾ ಆಜಾದ್ ಕೂಡ ರಾಜಕೀಯದ ಭಾಗವಾಗಿದ್ದರು. ಕೀರ್ತಿ ಆಜಾದ್ ಪ್ರಸ್ತುತ TMC ಪಕ್ಷದಿಂದ ರಾಜಕೀಯ ಪ್ರವೇಶ ಮಾಡಿದ್ದಾರೆ.

5 /5

ಟೀಂ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು 2009 ರಲ್ಲಿ ಕಾಂಗ್ರೆಸ್‌ನಿಂದ ಲೋಕಸಭೆ ಚುನಾವಣೆಯ ಮೂಲಕ ರಾಜಕೀಯ ಪ್ರವೇಶಿಸಿದರು. ಅಜರುದ್ದೀನ್ ಭಾರತದ ಪರ 99 ಟೆಸ್ಟ್ ಮತ್ತು 334 ಏಕದಿನ ಪಂದ್ಯಗಳನ್ನು ಆಡಿದ್ದಾರೆ.