ಕ್ಯಾನ್ಸರ್‌ ರೋಗಕ್ಕೆ ಈ ಎಲೆಯೇ ಮದ್ದು! ಬೆಳಗಿನ ಜಾವ ಎರಡು ಎಸಳು ತಿಂದ್ರೆ ಯಾವುದೇ ಕಾರಣಕ್ಕೂ ಹೆಚ್ಚಾಗಲ್ಲ ಶುಗರ್!‌

Tulsi leaves: ತುಳಸಿ ಎಲೆಗಳು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ ಎಂದು ತಿಳಿದಿದೆ. ಈ ಎಲೆಗಳಿಂದ ಹಲವು ರೀತಿಯ ಸಮಸ್ಯೆಗಳನ್ನು ನಿಯಂತ್ರಿಸಬಹುದು. ತುಳಸಿ ಎಲೆಗಳಿಗೆ ದೀರ್ಘಕಾಲದ ಕಾಯಿಲೆಗಳನ್ನೂ ನಿಯಂತ್ರಿಸುವ ಶಕ್ತಿ ಇದೆ. ಪ್ರತಿದಿನ ಒಂದು ತುಳಸಿ ಎಲೆಯನ್ನು ಜಗಿಯುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು.
 

1 /6

ತುಳಸಿಯನ್ನು ಹಿಂದೂಗಳು ವಿಶೇಷವಾಗಿ ಪೂಜಿಸುತ್ತಾರೆ. ಪ್ರತಿಯೊಬ್ಬರ ಮನೆಯಲ್ಲಿ ತುಳಸಿ ಗಿಡ ಸಾಮಾನ್ಯವಾಗಿ ಇದ್ದೇ ಇರುತ್ತದೆ.. ತುಳಸಿ ಸಸ್ಯವು ಎಲ್ಲಾ ರೋಗಗಳಿಗೆ ಪರಿಹಾರವಾಗಿ ಕಾರ್ಯನಿರ್ವಹಿಸುತ್ತದೆ. ತುಳಸಿ ಎಲೆಗಳಿಂದ ಋತುಮಾನದ ಕಾಯಿಲೆಗಳಲ್ಲದೆ, ದೀರ್ಘಕಾಲದ ಕಾಯಿಲೆಗಳನ್ನು ಸಹ ನಿಯಂತ್ರಿಸಬಹುದು.  

2 /6

ಇತ್ತೀಚಿನ ದಿನಗಳಲ್ಲಿ ಮಧುಮೇಹವು ಮಹಾಮಾರಿಯಾಗಿದೆ. ಪ್ರತಿ ಐದು ಜನರಲ್ಲಿ ಇಬ್ಬರು ಮಧುಮೇಹದಿಂದ ಬಳಲುತ್ತಿದ್ದಾರೆ. ಈ ರೋಗವನ್ನು ಆಹಾರದಿಂದ ಮಾತ್ರ ನಿಯಂತ್ರಿಸಬಹುದು.  

3 /6

ಟೈಪ್-2 ಮಧುಮೇಹದಿಂದ ಬಳಲುತ್ತಿರುವವರಿಗೆ ತುಳಸಿ ಎಲೆಗಳು ಚೆನ್ನಾಗಿ ಕೆಲಸ ಮಾಡುತ್ತವೆ. ಪ್ರತಿದಿನ ಹೊಟ್ಟೆಗೆ ತುಳಸಿ ಎಲೆಯನ್ನು ಜಗಿಯುವುದರಿಂದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.  

4 /6

ತುಳಸಿ ಎಲೆಯನ್ನು ಜಗಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು ಎಂದು ಅನೇಕ ಅಧ್ಯಯನಗಳು ಬಹಿರಂಗಪಡಿಸಿವೆ. ತುಳಸಿ ಎಲೆಗಳನ್ನು ಕುದಿಸಿದ ನೀರು ಕೂಡ ಚೆನ್ನಾಗಿ ಕೆಲಸ ಮಾಡುತ್ತದೆ. ತುಳಸಿ ಬೀಜಗಳನ್ನು ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು.  

5 /6

ತುಳಸಿ ಎಲೆಗಳು ಇನ್ಸುಲಿನ್ ಗ್ರಂಥಿಯನ್ನು ಹೆಚ್ಚು ಉತ್ಪಾದಿಸಲು ಉತ್ತೇಜಿಸುತ್ತದೆ. ಇದು ಸಕ್ಕರೆಯ ಮಟ್ಟವನ್ನು ಹೆಚ್ಚಿಸುವುದಿಲ್ಲ. ತುಳಸಿ ಎಲೆಗಳನ್ನು ಜಗಿಯುವುದರಿಂದ ಅಧಿಕ ರಕ್ತದೊತ್ತಡ, ಅಧಿಕ ತೂಕ ಮತ್ತು ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯೂ ಕಡಿಮೆಯಾಗುತ್ತದೆ. ಇದಲ್ಲದೇ ಈ ಎಲೆ ಕ್ಯಾನ್ಸರ್‌ ರೋಗಕ್ಕೂ ಪರಿಣಾಮಕಾರಿ ಮದ್ದಾಗಿದೆ..   

6 /6

ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.