ದಿನಭವಿಷ್ಯ : ಬುಧವಾರದಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ದಿನ ಭವಿಷ್ಯ ಹೇಗಿದೆ ಎಂದು ತಿಳಿಯೋಣ...
ಮೇಷ ರಾಶಿ:
ನಿಮ್ಮ ಗುರಿಯ ಮೇಲೆ ಗಮನ ಕೇಂದ್ರೀಕರಿಸಲು ಇದು ಅತ್ಯುತ್ತಮವಾದ ದಿನ. ನೀವು ಇಂದು ಏಕಾಗ್ರತೆಯಿಂದ ಮಾಡುವ ಕೆಲಸದಲ್ಲಿ ಹೆಚ್ಚಿನ ಪ್ರಯೋಜನವನ್ನು ಪಡೆಯುವಿರಿ. ಮಾತ್ರವಲ್ಲ, ಸಂಜೆಯು ನಿಮ್ಮ ಪ್ರೀತಿ ಪಾತ್ರರೊಂದಿಗೆ ಆಹ್ಲಾದಕರವಾಗಿರುತ್ತದೆ.
ವೃಷಭ ರಾಶಿ:
ವೃಷಭ ರಾಶಿಯವರೇ ನೀವು ಇಂದು ಕಮ್ಫರ್ಟ್ ಜೋನ್ ನಿಂದ ಹೊರಬಂದು ಜನರೊಂದಿಗೆ ಬೆರೆಯಿರಿ. ಇದರಿಂದ ವಾಸ್ತವವನ್ನು ಅರ್ಥ ಮಾಡಿಕೊಳ್ಳಲು ನಿಮಗೆ ಅನುಕೂಲವಾಗಲಿದೆ. ಇದಲ್ಲದೆ, ಯಾವುದೇ ಕೆಲಸದಲ್ಲಿ ಪರಿಶ್ರಮದ ಅಗತ್ಯವೂ ಇರಲಿದೆ. ನಿಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಲು ಇಂದು ಉತ್ತಮ ದಿನ.
ಮಿಥುನ ರಾಶಿ:
ಯಾವುದೇ ಕೆಲಸ ಕಾರ್ಯಗಳಲ್ಲಿ ಎಷ್ಟೇ ಅಡೆತಡೆಗಳು ಬಂದರೂ ಜಯ ನಿಮಗೆ ಶತಸಿದ್ಧ. ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಇಂದು ನಿಮ್ಮ ವೃತ್ತಿ ರಂಗದಲ್ಲಿ ಬರುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ.
ಕರ್ಕಾಟಕ ರಾಶಿ:
ಕರ್ಕಾಟಕ ರಾಶಿಯವರು ಇಂದು ನಿಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಮೊದಲ ಹೆಜ್ಜೆ ಇಡಲು ಪ್ರಯತ್ನಿಸಿ. ನಿಷ್ಠೆಯಿಂದ ಮಾಡುವ ಕೆಲಸಕ್ಕೆ ಒಂದಲ್ಲಾ ಒಂದು ದಿನ ಉತ್ತಮ ಪ್ರತಿಫಲ ದೊರೆಯುತ್ತದೆ ಎಂಬುದನ್ನು ನೆನಪಿನಲ್ಲಿಡಿ. ಉದ್ಯೋಗ ಬದಲಾಯಿಸುವ ಚಿಂತನೆಯನ್ನು ಕೆಲ ದಿಂಗಳು ಮುಂದೂಡಿ.
ಇದನ್ನೂ ಓದಿ- Mangal Gochar: ಇನ್ನೊಂದು ತಿಂಗಳು ಈ ರಾಶಿಯವರಿಗೆ ಭಾರೀ ಅದೃಷ್ಟ, ಕೈ ತುಂಬಾ ಹಣ
ಸಿಂಹ ರಾಶಿ:
ಸಿಂಹ ರಾಶಿಯವರೇ ಯಾವುದೇ ಕೆಲಸವನ್ನು ನಮ್ಮಿಂದ ಆಗುವುದಿಲ್ಲ ಎಂಬ ಮನಸ್ಥಿತಿಯಿಂದ ಹೊರಬನ್ನಿ. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಅಸಾಧ್ಯವಾದುದು ಯಾವುದೂ ಇಲ್ಲ. ನಿಮ್ಮ ಪ್ರೀತಿಪಾತ್ರರ ಬಗೆಗಿನ ನಿಮ್ಮ ಮನಸ್ಸಿನ ಭಾವನೆಯನ್ನು ಮುಕ್ತವಾಗಿ ಹಂಚಿಕೊಳ್ಳಿ.
ಕನ್ಯಾ ರಾಶಿ:
ಕನ್ಯಾ ರಾಶಿಯವರು ಇಂದು ನಿಮ್ಮ ಹಳೆಯ ಸ್ನೇಹಿತರನ್ನು ಭೇಟಿಯಾಗುವಿರಿ. ಇದು ನಿಮ್ಮ ಮನಸ್ಸಿಗೆ ಮುದ ನೀಡುತ್ತದೆ. ಆದರೆ, ಹಣಕಾಸಿನ ವಿಷಯದಲ್ಲಿ ಅನಾವಶ್ಯಕ ಖರ್ಚುಗಳನ್ನು ತಪ್ಪಿಸಿ. ಇದರಿಂದ ಭವಿಷ್ಯದ ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸಬಹುದು.
ತುಲಾ ರಾಶಿ:
ತುಲಾ ರಾಶಿಯವರೇ ಇಂದು ನೀವು ಬಾಹ್ಯ ಅಲಂಕಾರ, ಮೋಜು ಮಸ್ತಿಗಾಗಿ ನಿಮ್ಮ ಹಣವನ್ನು ವ್ಯಯಿಸುವುದನ್ನು ತಪ್ಪಿಸಿ. ಜೊತೆಗೆ ಇಂತಹ ವಿಚಾರಗಳಿಗೆ ನಿಮ್ಮನ್ನು ಪ್ರೇರೇಪಿಸುವ ಜನರ ಬಗ್ಗೆ ಜಾಗರೂಕರಾಗಿರಿ. ವಾಸ್ತವದಲ್ಲಿ ಬದುಕುವುದನ್ನು ರೂಢಿಸಿಕೊಳ್ಳಿ.
ವೃಶ್ಚಿಕ ರಾಶಿ:
ವೃಶ್ಚಿಕ ರಾಶಿಯವರಿಗೆ ನಿಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸಲು ನಿಮ್ಮ ಮನಸ್ಸು ಇಂದು ನಿಮ್ಮನ್ನು ಪ್ರೇರೇಪಿಸಬಹುದು. ನಿಮ್ಮ ಚಾಣಾಕ್ಷ ಬುದ್ದಿಯಿಂದ ಆರ್ಥಿಕ ಪ್ರಯೋಜನವನ್ನೂ ಪಡೆಯಬಹುದು. ಹಿತ ಶತ್ರುಗಳ ಬಗ್ಗೆ ಜಾಗರೂಕರಾಗಿರಿ.
ಇದನ್ನೂ ಓದಿ- ಇವು ಆಂಜನೇಯನ ಪ್ರಿಯ ರಾಶಿಗಳು: ಸಂಪತ್ತು-ಅದೃಷ್ಟದ ಜೊತೆ ಸರ್ಕಾರಿ ನೌಕರಿ ಭಾಗ್ಯ ನೀಡುವನು… ಯಾವತ್ತೂ ಕೈಬಿಡಲ್ಲ ಖಚಿತ
ಧನು ರಾಶಿ:
ಧನು ರಾಶಿಯವರು ಇಂದು ಹೆಚ್ಚು ನಿಗೂಢ ವ್ಯಕ್ತಿಯಿಂದ ಆಕರ್ಷಿತರಾಗಬಹುದು. ಆದರೆ, ಅಪರಿಚಿತರ ಬಗ್ಗೆ ಜಾಗರೂಕರಾಗಿರಿ. ಜೂಜಾಟ ಅಭ್ಯಾಸವಿದ್ದರೆ, ಇಂದೇ ನಿಮ್ಮ ಈ ಅಭ್ಯಾಸವನ್ನು ಬಿಡುವುದು ಒಳಿತು. ಕೆಲಸದಲ್ಲಿ ತಾಳ್ಮೆಯನ್ನು ರೂಢಿಸಿಕೊಳ್ಳಿ.
ಮಕರ ರಾಶಿ:
ಮಕರ ರಾಶಿಯವರು ಇಂದು ನಿಮ್ಮ ಸ್ವಂತ ಅಗತ್ಯಗಳ ಮೇಲೆ ಗಮನವನ್ನು ಕೇಂದ್ರೀಕರಿಸಿ. ನಿಮ್ಮ ಸಂಗಾತಿಯೊಂದಿಗೆ ಮನಸ್ಸಿನ ಮಾತನ್ನು ಹಂಚಿಕೊಳ್ಳಲು ಭಯವನ್ನು ಮಧ್ಯೆ ಬರಲು ಬಿಡಬೇಡಿ. ಭವಿಷ್ಯದ ದೃಷ್ಟಿಯಿಂದ ನಿಮ್ಮ ಖರ್ಚಿಗೆ ಕಡಿವಾಣ ಹಾಕುವುದು ಒಳ್ಳೆಯದು.
ಕುಂಭ ರಾಶಿ:
ಕುಂಭ ರಾಶಿಯವರಿಗೆ ವೈಯಕ್ತಿಕ ಸಮಸ್ಯೆಗಳಿಂದ ಪರಿಹಾರ ದೊರೆಯಲಿದೆ. ಉದ್ಯೋಗ ರಂಗದಲ್ಲಿ ಸಿಗುವ ಒಳ್ಳೆಯ ಅವಕಾಶಗಳನ್ನು ಬಳಸಿಕೊಳ್ಳಿ. ಇದರಿಂದ ಆರ್ಥಿಕ ಸ್ಥಿತಿ ಸುಧಾರಿಸಲಿದೆ.
ಮೀನ ರಾಶಿ:
ಮೀನ ರಾಶಿಯವರಿಗೆ ಇಂದು ನಿಮ್ಮ ಶಕ್ತಿಯನ್ನು ಬೇರೆಯವರಿಗೆ ಮನವರಿಕೆ ಮಾಡಿಸಲು ಸುದಿನ ಎಂತಲೇ ಹೇಳಬಹುದು. ಯಾವುದೇ ವಿಚಾರದ ಬಗ್ಗೆ ನಿರ್ಧಾರ ಕೈಗೊಳ್ಳುವಾಗ ಎಚ್ಚರಿಕೆಯಿಂದ ನೂರು ಬಾರಿ ಯೋಚಿಸಿ ನಿರ್ಧರಿಸಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.