ದಿನಭವಿಷ್ಯ 17-07-2024: ದೇವಶಯನಿ ಏಕಾದಶಿಯ ಈ ದಿನ ದ್ವಾದಶ ರಾಶಿಗಳ ಫಲಾಫಲ

Today Horoscope 17th July 2024: ದೇವಶಯನಿ ಏಕಾದಶಿಯ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Jul 17, 2024, 08:29 AM IST
  • ದೇವಶಯನಿ ಏಕಾದಶಿಯನ್ನು ಆಷಾಢ ಏಕಾದಶಿ ಎಂತಲೂ ಕರೆಯಲಾಗುತ್ತದೆ
  • ಈ ದಿನ ಉಪವಾಸ ಆಚರಣೆಗೆ ವಿಶೇಷ ಮಹತ್ವವಿದೆ.
  • ದೇವಶಯನಿ ಏಕಾದಶಿಯಂದು ಯಾವ ರಾಶಿಯವರಿಗೆ ಏನು ಫಲ ತಿಳಿಯಿರಿ.
ದಿನಭವಿಷ್ಯ 17-07-2024:  ದೇವಶಯನಿ ಏಕಾದಶಿಯ ಈ ದಿನ ದ್ವಾದಶ ರಾಶಿಗಳ ಫಲಾಫಲ  title=

Budhvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಈ ದಿನ ದೇವಶಯನಿ ಏಕಾದಶಿಯ ಈ ದಿನ ಬುಧವಾರ ಅನುರಾಧಾ ನಕ್ಷತ್ರ ಶುಭ ಯೋಗ ಯಾರಿಗೆ ಶುಭ. 

ಮೇಷ ರಾಶಿಯವರ ಭವಿಷ್ಯ (Aries Horoscope):  
ಈ ರಾಶಿಯ ಜನರು ಇದು ಪಾಲುದಾರಿಕೆ ವ್ಯವಹಾರದಲ್ಲಿ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ವ್ಯಾಪಾರಸ್ಥರು ಸರ್ಕಾರದ ನಿಯಮಗಳನ್ನು ಪಾಲಿಸುವುದನ್ನು ಖಚಿತಪಡಿಸಿಕೊಳ್ಳಿ. ವಿದ್ಯಾರ್ಥಿಗಳು ಅಧ್ಯಯನದತ್ತ ಹೆಚ್ಚು ಗಮನವಹಿಸಬೇಕು. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ದಾಂಪತ್ಯ ಜೀವನದಲ್ಲಿ ಪತಿ-ಪತ್ನಿಯರ ನಡುವಿನ ಬಾಂಧವ್ಯ ಇನ್ನೂ ಗಟ್ಟಿಯಾಗಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಪರಿಶ್ರಮಕ್ಕಿಂತ ಬುದ್ಧಿವಂತಿಕೆ ಹೆಚ್ಚು ಫಲ ನೀಡಲಿದೆ. ಹಳೆಯ ಯೋಜನೆಗಳಲ್ಲಿ ಕೆಲಸ ಮಾಡುವ ಉದ್ಯಮಿಗಳು ಪ್ರಸ್ತುತ ತಂತ್ರಜ್ಞಾನದೊಂದಿಗೆ ತಮ್ಮನ್ನು ತಾವು ನವೀಕರಿಸಿಕೊಳ್ಳಬೇಕು. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಇಂದು ಮಾನಸಿಕ ಒತ್ತಡದಿಂದ ಪರಿಹಾರ ದೊರೆಯಲಿದೆ. ಕಛೇರಿಯ ಕೆಲಸವನ್ನು ಪೂರ್ಣಗೊಳಿಸಲು ಕಠಿಣ ಪರಿಶ್ರಮದ ಜೊತೆಗೆ ಸಮಯ ನಿರ್ವಹಣೆಯ ಬಗ್ಗೆಯೂ ನಿಗಾವಹಿಸಿ. ಉದ್ಯಮಿಗಳು ಯಾವುದೇ ದೊಡ್ಡ ಹೂಡಿಕೆ ಮಾಡುವಾಗ ತುಂಬಾ ಜಾಗರೂಕರಾಗಿರಬೇಕು. ಇಲ್ಲವೇ ಭಾರೀ ನಷ್ಟ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಈ ದಿನ ಮಕ್ಕಳಿಂದ ಸಂತೋಷದ ಸುದ್ದಿಯನ್ನು ಸ್ವೀಕರಿಸುವಿರಿ. ನಿಮ್ಮ ಕೆಲಸದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಉದ್ಯಮಿಗಳು ಸ್ಪರ್ಧೆಯ ಭಾವನೆಯಿಂದ ಸಾಧ್ಯವಾದಷ್ಟು ದೂರವಿದ್ದರೆ ಒಳಿತು. ಥೈರಾಯಿಡ್ ಸಮಸ್ಯೆ ಇರುವವರು ನಿಮ್ಮ ಆರೋಗ್ಯದ ಬಗ್ಗೆ ನಿಗಾವಹಿಸಿ. 

ಇದನ್ನೂ ಓದಿ- ದೇವಶಯನಿ ಏಕಾದಶಿಯಂದು ಈ ಕೆಲಸಗಳನ್ನು ಮಾಡಿದರೆ ವೃತ್ತಿ ಬದುಕಿನ ಸಮಸ್ಯೆಗಳಿಂದ ಪರಿಹಾರ, ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಿ

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಪೂರ್ವಜರ ಭೂಮಿ ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯಗಳು ಕೊನೆಗೊಳ್ಳಲಿವೆ. ಉದ್ಯೋಗಸ್ಥರಿಗೆ ಕೆಲಸದಲ್ಲಿ ಬದಲಾವಣೆ ಸಾಧ್ಯತೆ ಇದೆ. ಉದ್ಯಮಿಗಳ ಕೆಲವು ಕೆಲಸಗಳು ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಆದರೆ, ಈ ಸಂದರ್ಭದಲ್ಲಿ ತಾಳ್ಮೆಯಿಂದ ವರ್ತಿಸಿ. ಕಠಿಣ ಪರಿಶ್ರಮದಿಂದ ಓಡಿಹೋಗಬೇಡಿ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಈ ರಾಶಿಯ ದುಡಿಯುವ ಜನರಿಗೆ ದಿನವು ಸಾಮಾನ್ಯವಾಗಿದೆ. ಕೆಲಸದ ಜೊತೆಗೆ ವಿನೋದ ಮತ್ತು ಸಂತೋಷವನ್ನು ಅನುಭವಿಸುವಿರಿ. ಇದು ನಿಮ್ಮ ಮನಸ್ಸನ್ನು ಸಂತೋಷವಾಗಿರಿಸುತ್ತದೆ. ಆಯುರ್ವೇದ ಔಷಧ ವ್ಯವಹಾರಸ್ಥರಿಗೆ ಉತ್ತಮ ದಿನ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ಇಂದು ಈ ರಾಶಿಯ ಜನರಿಗೆ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಉದ್ಯೋಗಸ್ಥರು ತಮ್ಮ ಗುರಿಗಳನ್ನು ಸಾಧಿಸಲು ಕಷ್ಟಪಟ್ಟು ಕೆಲಸ ಮಾಡಬೇಕಾಗಬಹುದು. ವ್ಯಾಪಾರದ ಬಗ್ಗೆ ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಎಂದಿನಂತೆ ಕಠಿಣ ಪರಿಶ್ರಮವನ್ನು ಮುಂದುವರಿಸಿ. ಮಧುಮೇಹ ರೋಗಿಗಳು ತಮ್ಮ ಆಹಾರದ ಬಗ್ಗೆ ನಿಗಾವಹಿಸಿ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಕೆಲಸದ ಸ್ಥಳದಲ್ಲಿ ನಿಮ್ಮ ಉತ್ತಮ ಕಾರ್ಯಶೈಲಿಯನ್ನು ಪರಿಗಣಿಸಿ ಹೊಸ ಯೋಜನೆಯಲ್ಲಿ ಕೆಲಸ ಮಾಡುವ ಅವಕಾಶವನ್ನು ನೀವು ಪಡೆಯಬಹುದು. ಸಾಲ ಪಡೆದಿರುವ ಉದ್ಯಮಿಗಳು ಆದಷ್ಟು ಬೇಗ ಮರುಪಾವತಿ ಆರಂಭಿಸಬೇಕು. ಅನಗತ್ಯ ಖರೀದಿಗಳು ಆರ್ಥಿಕ ನಷ್ಟವನ್ನು ಉಂಟುಮಾಡಬಹುದು.

ಇದನ್ನೂ ಓದಿ- 50 ವರ್ಷಗಳ ನಂತರ ರಾಹುವಿನ ನಕ್ಷತ್ರ ಸಂಚಾರ: ಈ ಮೂರು ರಾಶಿಯವರಿಗೆ ಜಾಕ್‌ಪಾಟ್‌ ಹೊಡೆಯಲಿದೆ!

ಧನು ರಾಶಿಯವರ ಭವಿಷ್ಯ (Sagittarius Horoscope):  
ಇಂದು ನೀವು ಕಾನೂನು ವಿಷಯಗಳಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಉದ್ಯೋಗಸ್ಥರು ಬೇಡದ ವಿಚಾರಗಳಿಗೆ ಕಾಲಹರಣ ಮಾಡುವ ಬದಲಿಗೆ ಕೆಲಸದ ಮೇಲೆಲ್ ಗಮನ ಕೇಂದ್ರೀಕರಿಸಿ. ಹೋಟೆಲ್ ಮತ್ತು ಪ್ರಯಾಣ ಸಂಬಂಧಿತ ವ್ಯವಹಾರದಲ್ಲಿ ಕೆಲಸ ಮಾಡುವವರು ಕಟ್ಟುನಿಟ್ಟಾದ ಮನೋಭಾವವನ್ನು ಅನುಸರಿಸುವುದನ್ನು ತಪ್ಪಿಸಬೇಕು. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ನಿಮ್ಮ ಆದಾಯವನ್ನು ಹೆಚ್ಚಿಸಲು ಯೋಜಿಸಬಹುದು. ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ.  ನೀವು ಹೆಚ್ಚು ಶ್ರಮವಹಿಸಿದರೆ, ಶೀಘ್ರದಲ್ಲೇ ನೀವು ಬಡ್ತಿ ಪಡೆಯುತ್ತೀರಿ. ಮಾರ್ಕೆಟಿಂಗ್ ಉದ್ಯಮಿಗಳು ವ್ಯಾಪಾರ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಇಂದು ಶುಭ ದಿನ. ವ್ಯಾಪಾರ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡುವುದರಿಂದ ಶುಭ. ಆರ್ಥಿಕ ಸ್ಥಿತಿಯ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ. ಕುಟುಂಬದಲ್ಲಿ ವಿವಾದಗಳನ್ನು ತಪ್ಪಿಸಲು ನಿಮ್ಮ ಮಾತಿನ ಬಗ್ಗೆ ನಿಗಾವಹಿಸುವುದು ಅಗತ್ಯ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಈ ದಿನ ನಿಮಗೆ ಅಷ್ಟು ಶುಭಕರವಾಗಿಲ್ಲ. ಉದ್ಯೋಗಸ್ಥರಿಗೆ ಹಲವು ಅಡೆತಡೆಗಳು ನಿಮ್ಮನ್ನು ಬಾಧಿಸಬಹುದು. ನಿಮ್ಮ ಕೆಲಸದ ಮಾದರಿಯನ್ನು ಬದಲಾಯಿಸಲು ಪ್ರಯತ್ನಿಸಬೇಕು. ತುಂಬು ಕುಟುಂಬದಲ್ಲೇ ಇದ್ದರೂ ಯುವಕರಿಗೆ ಇಂದು ಒಂಟಿತನ ಕಾಡಬಹುದು. ರಾಜಕೀಯಕ್ಕೆ ಸಂಬಂಧಿಸಿದ ಜನರಿಗೆ ಹೊಸ ಜವಾಬ್ದಾರಿಗಳು ಹೆಗಲೇರಬಹುದು.

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News