ದಿನಭವಿಷ್ಯ 22-08-2024: ಈ ದಿನ ಸಂಕಷ್ಟಹರ ಚತುರ್ಥಿ, ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ರಥೋತ್ಸವ ನಿಮ್ಮ ರಾಶಿಗೆ ಏನು ಫಲ

Today Horoscope 22nd August 2024: ಗುರುವಾರದ ಈ ದಿನ ಸಂಕಷ್ಟಹರ ಚತುರ್ಥಿ, ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ರಥೋತ್ಸವದಂದು  ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Aug 22, 2024, 07:08 AM IST
  • ಕರ್ಕಾಟಕ ರಾಶಿಯವರು ಸಂಜೆ ವೇಳೆಗೆ ಶುಭ ಸುದ್ದಿ ಕೇಳುವಿರಿ.
  • ಸಿಂಹ ರಾಶಿಯವರಿಗೆ ಪ್ರಯಾಣವು ಲಾಭದಾಯಕವಾಗಿರುತ್ತದೆ.
  • ಕನ್ಯಾ ರಾಶಿಯವರಿಗೆ ಇಂದು ಆರ್ಥಿಕವಾಗಿ ಅತ್ಯಂತ ಮಂಗಳಕರ ದಿನ.
ದಿನಭವಿಷ್ಯ 22-08-2024:  ಈ ದಿನ ಸಂಕಷ್ಟಹರ ಚತುರ್ಥಿ, ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ರಥೋತ್ಸವ ನಿಮ್ಮ ರಾಶಿಗೆ ಏನು ಫಲ  title=

Guruvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ಈ ದಿನ ಸಂಕಷ್ಟಹರ ಚತುರ್ಥಿ, ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ರಥೋತ್ಸವ ಇದ್ದು, ಯಾವ ರಾಶಿಯ ಜನರಿಗೆ ಗುರುವಾರ ಹೇಗಿದೆ ತಿಳಿಯಿರಿ. 

ಮೇಷ ರಾಶಿಯವರ ಭವಿಷ್ಯ (Aries Horoscope):  
ನಿಮ್ಮ ಒಳ್ಳೆಯ ಕೆಲಸಕ್ಕಾಗಿ ನೀವು ಗೌರವಕ್ಕೆ ಪಾತ್ರರಾಗುರಿವಿರಿ. ಆರ್ಥಿಕ ಸ್ಥಿತಿ ಬದಲಾಗಲಿದ್ದು, ಇಂದು ನಿಮ್ಮ ವ್ಯಾಪಾರ ಅಥವಾ ಉದ್ಯೋಗದಲ್ಲಿ ಯಶಸ್ಸನ್ನು ಪಡೆಯಬಹುದು. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ ಇಂದು ದಿನ ಉತ್ತಮವಾಗಿದೆ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ಹಣಕಾಸಿನ ದೃಷ್ಟಿಯಿಂದ ಇಂದು ಉತ್ತಮ ದಿನ. ವ್ಯವಹಾರದಲ್ಲಿ ಯಶಸ್ಸು ನಿಮ್ಮ ಸಂತೋಷವನ್ನು ಇಮ್ಮಡಿಗೊಳಿಸಲಿದೆ. ಪಾಲುದಾರಿಕೆ ವ್ಯವಹಾರವನ್ನು ಆರಂಭಿಸಲು ಇಂದು ಮಂಗಳಕರ ದಿನವಾಗಿರಬಹುದು.  ಕೆಲಸದ ಸ್ಥಳದಲ್ಲಿ ಕ್ಷಿಪ್ರ ಬದಲಾವಣೆಗಳಾಗುತ್ತವೆ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಇಂದು ಈ ರಾಶಿಯವರಿಗೆ  ಹಣಕಾಸಿನ ದೃಷ್ಟಿಯಿಂದ ಅತ್ಯುತ್ತಮವಾದ ದಿನ. ಆದಾಯ ಉತ್ತಮವಾಗಿದ್ದು ಜೀವನದಲ್ಲಿ ಸುಖ-ಸೌಕರ್ಯಗಳು ಹೆಚ್ಚಾಗಳಿವೆ. ಹೂಡಿಕೆಯಿಂದ ಹೆಚ್ಚಿನ ಆದಾಯ ಸಾದ್ಯವಾಗುತ್ತದೆ. ಆದಾಗ್ಯೂ, ಮುಂದಿನ ದಿನಗಳಲ್ಲಿ ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸಲು ನಿಮ್ಮ ಖರ್ಚುಗಳನ್ನು ನಿಯಂತ್ರಿಸಿ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಈ ರಾಶಿಯ ಜನರಿಗೆ ಇಂದು ಹಣದ ಕೊರತೆ ಹೆಚ್ಚಾಗಿ ಕಾಡಬಹುದು. ಈ ದಿನ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು. ಕೆಲಸದಲ್ಲಿ ನಿಮ್ಮ ನಿರೀಕ್ಷಿತ ಯಶಸ್ಸು ದೊರೆಯದೆ ಇರುವುದರಿಂದ ನಿರಾಶೆಗೊಳ್ಳುವ ಸಾಧ್ಯತೆ. ಸಂಜೆ ವೇಳೆಗೆ ಶುಭ ಸುದ್ದಿ ಕೇಳುವಿರಿ. 

ಇದನ್ನೂ ಓದಿ- ಶೀಘ್ರದಲ್ಲೇ ಶುಕ್ರ-ಕೇತು ಯುತಿ: ಈ ಆರು ರಾಶಿಯವರಿಗೆ ದಿಢೀರ್ ಧನ ಯೋಗ, ಹಣಕ್ಕೆ ಕೊರತೆಯೇ ಇರುವುದಿಲ್ಲ!

ಸಿಂಹ ರಾಶಿಯವರ ಭವಿಷ್ಯ (Leo Horoscope):  
ನಿಮ್ಮ ಕೆಲಸದಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನಿಮ್ಮ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ ಮತ್ತು ಸಮಾಜದಲ್ಲಿ ನಿಮ್ಮ ಸ್ಥಾನಮಾನವೂ ಹೆಚ್ಚಾಗುತ್ತದೆ. ಪ್ರಯಾಣವು ಲಾಭದಾಯಕವಾಗಿರುತ್ತದೆ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಅತ್ಯಂತ ಮಂಗಳಕರ ದಿನ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸಾಕಷ್ಟು ಸುಧಾರಣೆ ಕಾಣುವಿರಿ.  ನಿಮ್ಮ ವ್ಯವಹಾರದಲ್ಲಿ ನೀವು ಹೆಚ್ಚಿನ ಯಶಸ್ಸನ್ನು ಸಾಧಿಸುವಿರಿ ಮತ್ತು ನಿಮ್ಮ ವ್ಯವಹಾರವನ್ನು ವಿಸ್ತರಿಸಲು ಉತ್ತಮ ಅವಕಾಶವನ್ನು ನೀವು ಪಡೆಯುತ್ತೀರಿ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ಇಂದು ಆರ್ಥಿಕವಾಗಿ ನಿಮಗೆ ತುಂಬಾ ಆಹ್ಲಾದಕರ ದಿನ. ಇಂದು ಮುಕ್ತವಾಗಿ ಖರ್ಚು ಮಾಡುವ ಅವಕಾಶವನ್ನು ನೀವು ಪಡೆಯಬಹುದು ಮತ್ತು ನೀವು ಅದನ್ನು ಪೂರ್ಣವಾಗಿ ಆನಂದಿಸಬಹುದು. ಆದಾಗ್ಯೂ, ಆತ್ಮವಿಶ್ವಾಸವನ್ನು ಕಾಪಾಡಿಕೊಳ್ಳಿ, ಸಂಘಟನೆಗೆ ಒತ್ತು ನೀಡಿ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಹಣಕಾಸಿನ ದೃಷ್ಟಿಯಿಂದ ಇಂದು ನಿಮ್ಮ ದಿನವು ನಿಮಗೆ ಮಧ್ಯಮ ಫಲಪ್ರದವಾಗಿರುತ್ತದೆ. ಇಂದು ಹೂಡಿಕೆಗೆ ಸೂಕ್ತ ಸಮಯವಲ್ಲ.  ನಿಮ್ಮ ವೃತ್ತಿ ಮತ್ತು ವ್ಯಾಪಾರ ಚಟುವಟಿಕೆಗಳನ್ನು ವೇಗಗೊಳಿಸಿ. ನಿಮ್ಮ ವ್ಯಕ್ತಿತ್ವವು ಪ್ರಭಾವಶಾಲಿಯಾಗಿರುತ್ತದೆ. 

ಇದನ್ನೂ ಓದಿ- Dharmaśāstra: ನಾವು ಯಾವ ದಿಕ್ಕಿಗೆ ಮಲಗಬೇಕು ಗೊತ್ತಾ..?

ಧನು ರಾಶಿಯವರ ಭವಿಷ್ಯ (Sagittarius Horoscope):  
ಮಾತು ಮತ್ತು ನಡವಳಿಕೆಯಲ್ಲಿ ತಾಳ್ಮೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಆದಾಯದ ಮೂಲಗಳಲ್ಲಿ ಸ್ವಲ್ಪ ಹೆಚ್ಚಳವನ್ನು ನೀವು ಪಡೆಯಬಹುದು. ಆಸ್ತಿಯಿಂದ ಲಾಭವನ್ನು ಪಡೆಯುವಿರಿ. ವ್ಯಾಪಾರವು ಉತ್ತಮ ಬೆಳವಣಿಗೆಯನ್ನು ಕಾಣಲಿದೆ. ಉತ್ತಮ ಆರೋಗ್ಯವನ್ನು ಆನಂದಿಸುವಿರಿ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಆರ್ಥಿಕ ದೃಷ್ಟಿಯಿಂದ ಇಂದು ನಿಮಗೆ ಉತ್ತಮ ದಿನ. ಇಂದು ನಿಮ್ಮ ಆರ್ಥಿಕ ಸ್ಥಿತಿಯನ್ನು ಕಾಪಾಡಿಕೊಳ್ಳಲು ನೀವು ಕಷ್ಟಪಟ್ಟು ಮತ್ತು ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗುತ್ತದೆ. ಕೆಲಸದ ವಿಸ್ತರಣೆ ಯಶಸ್ವಿಯಾಗಲಿದೆ. ವ್ಯಾಪಾರ ಚಟುವಟಿಕೆಗಳು ಸ್ಥಿರವಾಗಿರುತ್ತವೆ. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಇಂದು ಉತ್ತಮ ಆದಾಯವನ್ನು ಪಡೆಯುತ್ತೀರಿ ಅದು ನಿಮಗೆ ಮಾನಸಿಕ ಒತ್ತಡವನ್ನು ತಪ್ಪಿಸಲು ಅವಕಾಶವನ್ನು ನೀಡುತ್ತದೆ. ಆದಾಗ್ಯೂ, ಇಂದು ಹೂಡಿಕೆಗೆ ಸಮಯ ಉತ್ತಮವಾಗಿಲ್ಲ. ಸಂದಿಗ್ಧ ಪರಿಸ್ಥಿತಿಗಳಲ್ಲಿ ಗಾಬರಿಯಾಗುವ ಬದಲು, ನಿಮ್ಮ ಖರ್ಚುಗಳ ಬಗ್ಗೆ ಸ್ವಲ್ಪ ಜಾಗರೂಕರಾಗಿರಿ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ನಿಮ್ಮ ಖರ್ಚುಗಳ ಬಗ್ಗೆ ನೀವು ಗಮನ ಹರಿಸಬೇಕಾಗಬಹುದು. ಇಂದು ನೀವು ನಿಮ್ಮ ಸಂಪತ್ತನ್ನು ಹೆಚ್ಚಿಸಲು ನಿಮ್ಮ ಆದಾಯದ ಮೂಲಗಳನ್ನು ಹೆಚ್ಚಿಸಬೇಕಾಗಬಹುದು. ಕೆಲಸದ ವೇಗವು ಪರಿಣಾಮಕಾರಿಯಾಗಿರುತ್ತದೆ. ನಿಮ್ಮ ನಾಯಕತ್ವ ಸಾಮರ್ಥ್ಯದಿಂದ ಕಠಿಣ ಕೆಲಸಗಳನ್ನೂ ಕೂಡ ಸುಲಭವಾಗಿ ಪೂರ್ಣಗೊಳಿಸುವಿರಿ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News