ತುಲಾ ರಾಶಿಯಲ್ಲಿ ಬುಧ ಸಂಚಾರದಿಂದ ಈ ರಾಶಿಯವರಿಗೆ ಕುಬೇರನ ನಿಧಿ ಪ್ರಾಪ್ತಿ

Budh Gochar 2022 Impact: ಜ್ಯೋತಿಷ್ಯದ ಪ್ರಕಾರ, ಇಂದು ಅಂದರೆ ಅಕ್ಟೋಬರ್ 26 ರಂದು ಬುಧ ಗ್ರಹವು ತನ್ನ ರಾಶಿಚಕ್ರವನ್ನು ಬದಲಾಯಿಸಲಿದೆ. ಬುಧನ ರಾಶಿ ಪರಿವರ್ತನೆಯು ಎಲ್ಲಾ 12 ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ಆದರೂ, ಇದು ಕೆಲವು ರಾಶಿಯವರಿಗೆ ಅಪಾರ ಆರ್ಥಿಕ ಪ್ರಯೋಜನವನ್ನು ನೀಡಲಿದೆ. ಆ ರಾಶಿಗಳು ಯಾವುವು ತಿಳಿಯೋಣ...

Written by - Yashaswini V | Last Updated : Oct 26, 2022, 07:21 AM IST
  • ನವಗ್ರಹಗಳಲ್ಲಿ ಯಾವುದೇ ಒಂದು ಗ್ರಹದಲ್ಲಿನ ಸಣ್ಣ ಸಣ್ಣ ಬದಲಾವಣೆಯೂ ಸಹ ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ.
  • ಪ್ರತಿಯೊಂದು ಗ್ರಹವೂ ಒಂದು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತವೆ.
  • ಇಂದು ಅಕ್ಟೋಬರ್ 26 ರಂದು ಗ್ರಹಗಳ ರಾಜಕುಮಾರ ಎಂದು ಬಣ್ಣಿಸಲಾಗುವ ಬುಧ ಗ್ರಹವು ರಾಶಿಚಕ್ರವನ್ನು ಬದಲಾಯಿಸಿ ತುಲಾ ರಾಶಿಯನ್ನು ಪ್ರವೇಶಿಸಲಿದೆ.
ತುಲಾ ರಾಶಿಯಲ್ಲಿ ಬುಧ ಸಂಚಾರದಿಂದ ಈ ರಾಶಿಯವರಿಗೆ ಕುಬೇರನ ನಿಧಿ ಪ್ರಾಪ್ತಿ  title=
Budh gochar 2022

Budh Gochar 2022 Impact: ಜ್ಯೋತಿಷ್ಯದ ಪ್ರಕಾರ,  ನವಗ್ರಹಗಳಲ್ಲಿ ಯಾವುದೇ ಒಂದು ಗ್ರಹದಲ್ಲಿನ ಸಣ್ಣ ಸಣ್ಣ ಬದಲಾವಣೆಯೂ ಸಹ ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಪ್ರತಿಯೊಂದು ಗ್ರಹವೂ ಒಂದು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತವೆ.  ಇಂದು ಅಕ್ಟೋಬರ್ 26 ರಂದು ಗ್ರಹಗಳ ರಾಜಕುಮಾರ ಎಂದು ಬಣ್ಣಿಸಲಾಗುವ ಬುಧ ಗ್ರಹವು ರಾಶಿಚಕ್ರವನ್ನು ಬದಲಾಯಿಸಿ ತುಲಾ ರಾಶಿಯನ್ನು ಪ್ರವೇಶಿಸಲಿದೆ. ತುಲಾ ರಾಶಿಯಲ್ಲಿ ಬುಧ ಪ್ರವೇಶದಿಂದ ಕೆಲವು ರಾಶಿಚಕ್ರದವರಿಗೆ ಲಾಭವಾಗಲಿದ್ದು, ಅವರಿಗೆ ಕುಬೇರನ ನಿಧಿಯೇ ದೊರೆಯಲಿದೆ ಎಂದು ಹೇಳಲಾಗುತ್ತಿದೆ. ಆ ರಾಶಿಗಳು ಯಾವುವು ತಿಳಿಯೋಣ...

ತುಲಾ ರಾಶಿಯಲ್ಲಿ ಬುಧ ಸಂಚಾರದಿಂದ ಈ ರಾಶಿಯವರಿಗೆ ಕುಬೇರನ ನಿಧಿ ಪ್ರಾಪ್ತಿ :
ಕನ್ಯಾ ರಾಶಿ: ಜ್ಯೋತಿಷ್ಯ ಶಾಸ್ತ್ರ
ದ ಪ್ರಕಾರ, ತುಲಾ ರಾಶಿಯಲ್ಲಿ ಬುಧದ ಸಂಚಾರವು ಈ ರಾಶಿಚಕ್ರದ ಚಿಹ್ನೆಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಈ ಸಮಯದಲ್ಲಿ, ಈ ರಾಶಿಯವರು ವಿಶೇಷ ಆರ್ಥಿಕ ಲಾಭವನ್ನು ಪಡೆಯಲಿದ್ದಾರೆ. ಈ ಸಮಯದಲ್ಲಿ, ಭಾಷಣದಲ್ಲಿ ಮಾಧುರ್ಯ ಇರುತ್ತದೆ. ಸಂಚಾರದ ಸಮಯದಲ್ಲಿ, ಕನ್ಯಾ ರಾಶಿಯ ಜನರು ಹಠಾತ್ ಹಣದ ಲಾಭವನ್ನು ಪಡೆಯಬಹುದು. ವ್ಯಾಪಾರಿಗಳಿಗೆ ಲಾಭವಾಗುವ ಸಾಧ್ಯತೆ ಇದೆ. 

ಇದನ್ನೂ ಓದಿ- Diwali 2022: ದೀಪಾವಳಿಯಂದು ಈ 6 ವಸ್ತುಗಳನ್ನು ಮನೆಗೆ ತರುವುದರಿಂದ ಅದೃಷ್ಟ

ಧನು ರಾಶಿ: ತುಲಾ ರಾಶಿಯಲ್ಲಿ ಬುಧ ಸಂಕ್ರಮಣದಿಂದ ಧನು ರಾಶಿಯವರ ಜೀವನದಲ್ಲಿ ದೊಡ್ಡ ಬದಲಾವಣೆ ಕಂಡುಬರುತ್ತದೆ. ಈ ಅವಧಿಯಲ್ಲಿ, ಧನು ರಾಶಿಯ ಜನರು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಈ ಸಮಯದಲ್ಲಿ, ನೀವು ಕೈ ಹಾಕುವ ಕೆಲಸವು ನಿಮಗೆ ಯಶಸ್ಸನ್ನು ನೀಡುತ್ತದೆ. ಬುಧ ಸಂಚಾರದಿಂದಾಗಿ ಹಠಾತ್ ಹಣದ ಲಾಭವಾಗಬಹುದು. ಆದಾಯ ಹೆಚ್ಚಾಗಬಹುದು. ಸ್ಥಗಿತಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಈ ಅವಧಿಯಲ್ಲಿ ಅದೃಷ್ಟವು ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ಕೌಟುಂಬಿಕ ವಾತಾವರಣ ಆಹ್ಲಾದಕರವಾಗಿರುತ್ತದೆ.

ಇದನ್ನೂ ಓದಿ- Budh Gochar: ದೀಪಾವಳಿ ನಂತರ ಈ ರಾಶಿಯವರಿಗೆ ನಷ್ಟ

ಕುಂಭ ರಾಶಿ:  ಈ ರಾಶಿಯವರಿಗೆ ಬುಧ ಸಂಕ್ರಮಣದಿಂದ ಶುಭ ಫಲಗಳು ದೊರೆಯುತ್ತವೆ. ಉದ್ಯೋಗಸ್ಥರಿಗೆ ಬಡ್ತಿ ದೊರೆಯಬಹುದು. ಹೊಸ ಉದ್ಯೋಗ ಆಯ್ಕೆಗಳು ಕಾಣಿಸಿಕೊಳ್ಳುತ್ತವೆ. ಹಣ ಮಾಡುವ ಎಲ್ಲಾ ಸಾಧ್ಯತೆಗಳಿವೆ. ನೀವು ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ, ಈ ಸಮಯವು ಅನುಕೂಲಕರವಾಗಿರುತ್ತದೆ. ಈ ಸಮಯವು ಹೂಡಿಕೆಗೆ ಪ್ರಶಸ್ತವಾಗಿದೆ. ಈ ಸಮಯದಲ್ಲಿ, ನಿಮಗೆ ಭೂಮಿ ಮತ್ತು ವಾಹನ ಖರೀದಿಯ ಯೋಗವೂ ಇದೆ.

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಧಾರ್ಮಿಕ ನಂಬಿಕೆಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

Trending News