ಡೀಸೆಲ್ ವಾಹನಕ್ಕೆ ಬಸ್ ಡಿಕ್ಕಿ; 18 ಪ್ರಯಾಣಿಕರು ಸ್ಥಳದಲ್ಲೇ ಸಾವು!

ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬಸ್‌ನಿಂದ ಜಿಗಿದು ಕೆಲವು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Written by - Puttaraj K Alur | Last Updated : Aug 20, 2023, 12:34 PM IST
  • ಡೀಸೆಲ್‌ ಡ್ರಮ್‌ ಸಾಗಿಸುತ್ತಿದ್ದ ವಾಹನಕ್ಕೆ ಬಸ್‌ ಡಿಕ್ಕಿ; 18 ಪ್ರಯಾಣಿಕರ ಸಾವು
  • ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡದಿರುವ ದುರ್ಘಟನೆ
  • ಈ ದುರ್ಘಟನೆಯಲ್ಲಿ 16ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ
ಡೀಸೆಲ್ ವಾಹನಕ್ಕೆ ಬಸ್ ಡಿಕ್ಕಿ; 18 ಪ್ರಯಾಣಿಕರು ಸ್ಥಳದಲ್ಲೇ ಸಾವು! title=
18 ಪ್ರಯಾಣಿಕರು ಸ್ಥಳದಲ್ಲೇ ಸಾವು!

ನವದೆಹಲಿ: ಡೀಸೆಲ್‌ ಡ್ರಮ್‌ಗಳನ್ನು ಸಾಗಿಸುತ್ತಿದ್ದ ವಾಹನಕ್ಕೆ ಬಸ್‌ ಡಿಕ್ಕಿಯಾಗಿ 18 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡದಿದೆ.

ಈ ದುರ್ಘಟನೆಯಲ್ಲಿ 16ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಕರಾಚಿಯಿಂದ ಇಸ್ಲಾಮಾಬಾದ್‌ಗೆ 40 ಜನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಭಾನುವಾರ ಬೆಳಗ್ಗೆ 4:30 ರ ಸುಮಾರಿಗೆ ಲಾಹೋರ್‌ನಿಂದ 140 ಕಿಲೋಮೀಟರ್ ದೂರದಲ್ಲಿರುವ ಫೈಸಲಾಬಾದ್ ಮೋಟಾರು ಮಾರ್ಗದ  ಪಿಂಡಿ ಬಟ್ಟಿಯಾನ್‌ ಪ್ರದೇಶದ ಬಳಿ ಡೀಸೆಲ್‌ ಡ್ರಮ್‌ಗಳನ್ನು ಸಾಗಿಸುತ್ತಿದ್ದ ಪಿಕ್‌ಅಪ್‌ ವಾಹನಕ್ಕೆ ಗುದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ನಿಗೂಢ ಬಾಹ್ಯಾಕಾಶದಲ್ಲಿ ನಿಜವಾಗಿಯೂ ʼಬಿಳಿ ರಂಧ್ರʼ ಇದೆಯೇ..! ಇಲ್ಲಿದೆ ನೋಡಿ ಉತ್ತರ

ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳ ಹೆಚ್ಚಿನ ಸಂಖ್ಯೆಯಲ್ಲಿದ್ದರು ಎಂದು ಜಿಲ್ಲಾ ಪೊಲೀಸ್ ಅಧಿಕಾರಿ (DPO) ಫಹಾದ್ ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬಸ್‌ನಿಂದ ಜಿಗಿದು ಕೆಲವು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಇತರರಿಗೆ ಇಳಿಯಲು ಅವಕಾಶ ಸಿಗಲಿಲ್ಲ, ಘಟನೆಯಲ್ಲಿ ಎರಡೂ ವಾಹನಗಳ ಚಾಲಕರೂ ಸಾವನ್ನಪ್ಪಿದ್ದಾರೆ ಎಂದು ಐಜಿ ಖವಾಜಾ ತಿಳಿಸಿದ್ದಾರೆ.   

ಇದನ್ನೂ ಓದಿ: ಗುಡ್ ಬೈ Cheems.. ಮೀಮ್ಸ್ ಮೂಲಕ ಜನರನ್ನು ಸೆಳೆದ ನಾಯಿ ಇನ್ನಿಲ್ಲ!

ಅಪಘಾತದ ಸಮಯದಲ್ಲಿ ಬಸ್ ಚಾಲಕ ನಿದ್ರಿಸಿದ್ದಾನೆಯೇ ಅಥವಾ ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆಯೇ? ಎಂದು ಅಪಘಾತದ ಕಾರಣದ ಬಗ್ಗೆ ತನಿಖೆ ನಡೆಸಲಾಗತ್ತಿದೆ. ವ್ಯಾನ್‌ನಲ್ಲಿ ಇಂಧನ ಟ್ಯಾಂಕ್ ಇಲ್ಲದೇ ಇದ್ದಿದ್ದರೆ ಎರಡೂ ವಾಹನಗಳಿಗೆ ಬೆಂಕಿ ಬೀಳುತ್ತಿರಲಿಲ್ಲವೆಂದು ಅವರು ಹೇಳಿದ್ದಾರೆ. ಮೃತರ ಗುರುತು ಡಿಎನ್‌ಎ ಪರೀಕ್ಷೆಯ ಮೂಲಕ ಪತ್ತೆ  ಮಾಡಲಿದ್ದು, ಬಳಿಕ ಮೃತದೇಹಗಳನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News