Virat Kohli: ಫೀಲ್ಡ್ ಅಂಪೈರ್‌ಗಳೊಂದಿಗೆ ವಾದ; ಕೊಹ್ಲಿ ವಿರುದ್ಧ ಬಿಸಿಸಿಐ ಕ್ರಮ!?

KKR Vs RCB IPL 2024 Match: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡು ಫೀಲ್ಡ್ ಅಂಪೈರ್‌ಗಳೊಂದಿಗೆ ವಾದಕ್ಕಿಳಿದಿದ್ದಾರೆ..

Written by - Savita M B | Last Updated : Apr 22, 2024, 04:12 PM IST
  • ಕೊಹ್ಲಿ ಔಟಾದಾಗ, ಮೈದಾನದ ಅಂಪೈರ್‌ಗಳೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ
  • ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು ಎನ್ನಲಾಗಿದೆ..
Virat Kohli: ಫೀಲ್ಡ್ ಅಂಪೈರ್‌ಗಳೊಂದಿಗೆ ವಾದ; ಕೊಹ್ಲಿ ವಿರುದ್ಧ ಬಿಸಿಸಿಐ ಕ್ರಮ!? title=

KKR Vs RCB: ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡು ಫೀಲ್ಡ್ ಅಂಪೈರ್‌ಗಳೊಂದಿಗೆ ವಾದಕ್ಕಿಳಿದಿದ್ದಾರೆ.. 

ಹೌದು ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಐಪಿಎಲ್ 2024ರ 36 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಿದೆ. ಈ ಪಂದ್ಯದ ವೇಳೆ ಮೂರನೇ ಓವರ್‌’ನಲ್ಲಿ ಬೌಲಿಂಗ್’ಗೆ ಬಂದ ಹರ್ಷಿತ್ ರಾಣಾ, ವಿರಾಟ್ ವಿಕೆಟ್ ತೆಗೆದರು..ಈ ಸಂದರ್ಭದಲ್ಲಿ ವಿರಾಟ್ ನೋ ಬಾಲ್ ರಿವ್ಯೂ ತೆಗೆದುಕೊಂಡು.. ಆದರೆ, ಥರ್ಡ್ ಅಂಪೈರ್ ಕೂಡ ಕೊಹ್ಲಿಗೆ ಬೆಂಬಲ ನೀಡದೆ ಮೈದಾನದಿಂದ ಹೊರಹೋಗುವಂತೆ ಸೂಚಿಸಿದರು.  ಇದಕ್ಕೆ ಕೋಪಗೊಂಡ ಕೊಹ್ಲಿ ಅಂಪೈರ್ ಜೊತೆ ವಾದ ಮಾಡಿದ್ದಾರೆ.

ಇದನ್ನೂ ಓದಿ-ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಸಿಕ್ಸರ್ ಹೊಡೆದ ಆಟಗಾರ ಯಾರು ಗೊತ್ತಾ? 99 ರಷ್ಟು ಮಂದಿಗೆ ಇದಕ್ಕೆ ಉತ್ತರವೇ ಗೊತ್ತಿಲ್ಲ!

ಕೊಹ್ಲಿ ಔಟಾದಾಗ, ಮೈದಾನದ ಅಂಪೈರ್‌ಗಳೊಂದಿಗೆ ವಾಗ್ವಾದಕ್ಕಿಳಿದಿದ್ದು.. ಕೆಲವು ನಿಂದನೀಯ ಮಾತುಗಳನ್ನು ಹೇಳುತ್ತಿರುವುದು ಕಂಡುಬಂದಿದೆ.. ಅವರ ವರ್ತನೆಯನ್ನು ನೋಡಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು ಎನ್ನಲಾಗಿದೆ.. 

ಇದನ್ನೂ ಓದಿ-ಗುಜರಾತ್ ಟೈಟಾನ್ಸ್ ತಂಡದ ಸ್ಟಾರ್‌ ಆಟಗಾರ ರಾಹುಲ್ ತೇವಾಟಿಯ ಪತ್ನಿ ಇವರೇ! ಯಾವ ಬಾಲಿವುಡ್‌ ಹಿರೋಯಿನ್‌ಗೂ ಕಡಿಮೆ ಇಲ್ಲ ಈ ಚೆಲುವೆ!!

ನಿಯಮದ ಪ್ರಕಾರ ಯಾವುದೇ ಆಟಗಾರ ಅಂಪೈರ್‌ನ ನಿರ್ಧಾರವನ್ನು ಗೌರವಿಸಬೇಕು.. ಆಟಗಾರನು ಅಂಪೈರ್‌ನ ನಿರ್ಧಾರಕ್ಕೆ ಭಿನ್ನಾಭಿಪ್ರಾಯವನ್ನು ತೋರಿಸಿದರೆ ಅಥವಾ ಬೇರಾವುದೇ ರೀತಿಯಲ್ಲಿ ವರ್ತಿಸಿದರೆ, ಅದನ್ನು ಅಪರಾಧವೆಂದು ಪರಿಗಣಿಸಿ, ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಈ ನಿಯಮವನ್ನು ಗಮನದಲ್ಲಿಟ್ಟುಕೊಂಡು ಕೊಹ್ಲಿಗೆ ಶಿಕ್ಷೆ ಮತ್ತು ದಂಡ ವಿಧಿಸಬಹುದು ಎನ್ನಲಾಗುತ್ತಿದೆ.. ಸದ್ಯ, ದಿಗ್ಗಜ ಬ್ಯಾಟ್ಸ್‌ಮನ್‌ನ ವಿಕೆಟ್ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಹಲವರು ಇದು ಸರಿಯಾದ ನಿರ್ಧಾರ ಎಂದರೇ ಇನ್ನೂ ಕೆಲವರು ನಾಟ್ ಔಟ್ ಎನ್ನುತ್ತಿದ್ದಾರೆ.  

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News