ಮತ್ತೆ ಆರಂಭವಾಗಲಿದೆಯೇ ಭಾರತ vs ಪಾಕಿಸ್ತಾನ ಕ್ರಿಕೆಟ್ ಸರಣಿ! ಪಾಕ್ ಭೇಟಿ ಬಳಿಕ ಅಧ್ಯಕ್ಷ ರೋಜರ್ ಬಿನ್ನಿ ಹೇಳಿದ್ದು ಹೀಗೆ…

Indian vs Pakistan Bilateral series: ಏಷ್ಯಾ ಕಪ್ ಕಾರಣ ಭಾರತೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಹೀಗಿರುವಾಗ ಮತ್ತೊಮ್ಮೆ ಭಾರತ-ಪಾಕ್ ನಡುವಿನ ಕ್ರಿಕೆಟ್ ಸರಣಿ ಆರಂಭವಾಗಬಹುದೇ ಎಂಬ ಪ್ರಶ್ನೆ ಎದ್ದಿದೆ.

Written by - Bhavishya Shetty | Last Updated : Sep 7, 2023, 10:04 AM IST
    • ರೋಜರ್ ಬಿನ್ನಿ ಮತ್ತು ರಾಜೀವ್ ಶುಕ್ಲಾ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ
    • ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಆಹ್ವಾನದ ಮೇರೆಗೆ ಪಾಕ್’ಗೆ ತೆರಳಿದ್ದರು.
    • ಪಾಕ್ ಭೇಟಿ ಬಳಿಕ ಅಧ್ಯಕ್ಷ ರೋಜರ್ ಬಿನ್ನಿ ಹೇಳಿದ್ದು ಹೀಗೆ…
ಮತ್ತೆ ಆರಂಭವಾಗಲಿದೆಯೇ ಭಾರತ vs ಪಾಕಿಸ್ತಾನ ಕ್ರಿಕೆಟ್ ಸರಣಿ! ಪಾಕ್ ಭೇಟಿ ಬಳಿಕ ಅಧ್ಯಕ್ಷ ರೋಜರ್ ಬಿನ್ನಿ ಹೇಳಿದ್ದು ಹೀಗೆ… title=
India vs Pakistan

Indian vs Pakistan Bilateral series: 2012-13 ರಲ್ಲಿ ಪಾಕಿಸ್ತಾನವು ಭಾರತ ಪ್ರವಾಸ ಕೈಗೊಂಡು 2 T20 ಮತ್ತು 3 ODI ಸರಣಿಗಳನ್ನು ಆಡಿತ್ತು. ಇದುವೇ ಭಾರತ ಮತ್ತು ಪಾಕಿಸ್ತಾನ ನಡುವಿನ ಕೊನೆಯ ಸರಣಿ. ಅಲ್ಲಿಂದೀಚೆಗೆ ಎರಡೂ ತಂಡಗಳು ಬಹುತೇಕ ಐಸಿಸಿ ಟೂರ್ನಿಯಲ್ಲಿ ಮುಖಾಮುಖಿಯಾಗಿವೆಯೇ ಹೊರತು, ಉಭಯ ತಂಡಗಳ ನಡುವೆ ಕ್ರಿಕೆಟ್ ಸರಣಿ ನಡೆದಿಲ್ಲ.

ಇದೀಗ ಏಷ್ಯಾ ಕಪ್ ಕಾರಣ ಭಾರತೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಹೀಗಿರುವಾಗ ಮತ್ತೊಮ್ಮೆ ಭಾರತ-ಪಾಕ್ ನಡುವಿನ ಕ್ರಿಕೆಟ್ ಸರಣಿ ಆರಂಭವಾಗಬಹುದೇ ಎಂಬ ಪ್ರಶ್ನೆ ಎದ್ದಿದೆ. ಈ ಪ್ರಶ್ನೆಗೆ ಸ್ವತಃ ರೋಜರ್ ಬಿನ್ನಿಯೇ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಏಷ್ಯಾಕಪ್ ಮಧ್ಯೆ ಮ್ಯಾಚ್ ಫಿಕ್ಸಿಂಗ್ ಆರೋಪ: 38ರ ಹರೆಯದ ಸ್ಟಾರ್ ಸ್ಪಿನ್ನರ್ ಬಂಧನ!

ಭಾರತೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷ ರೋಜರ್ ಬಿನ್ನಿ ಅವರು ತಮ್ಮ ಭೇಟಿಯ ಸಂದರ್ಭದಲ್ಲಿ ಪಾಕಿಸ್ತಾನದ ಆತಿಥ್ಯದ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ. ಇನ್ನೊಂದೆಡೆ ಮಂಡಳಿಯ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಕೂಡ, ಎರಡೂ ದೇಶಗಳ ನಡುವಿನ ಸಂಬಂಧವನ್ನು ಸುಧಾರಿಸುವಲ್ಲಿ ಕ್ರಿಕೆಟ್ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ನುಡಿದಿದ್ದಾರೆ.

ಏಷ್ಯಾಕಪ್ ಪಂದ್ಯಗಳನ್ನು ವೀಕ್ಷಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಆಹ್ವಾನದ ಮೇರೆಗೆ ಬಿನ್ನಿ ಮತ್ತು ಶುಕ್ಲಾ ಪಾಕ್’ಗೆ ತೆರಳಿದ್ದರು. ಅಂದಹಾಗೆ ಕಳೆದ 17 ವರ್ಷಗಳಲ್ಲಿ ಬಿಸಿಸಿಐ ಅಧಿಕಾರಿಗಳು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದು ಇದೇ ಮೊದಲು.

ಉಭಯ ತಂಡಗಳ ನಡುವಿನ ಕ್ರಿಕೆಟ್ ಸರಣಿ ಮತ್ತೆ ಆರಂಭವಾಗಲಿದೆಯೇ?

ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜಕೀಯ ಉದ್ವಿಗ್ನತೆಯಿಂದಾಗಿ, ದ್ವಿಪಕ್ಷೀಯ ಸರಣಿಗಳು ನಡೆಯುವುದಿಲ್ಲ ಮತ್ತು ಎರಡೂ ದೇಶಗಳು ಐಸಿಸಿ ಅಥವಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸ್ಪರ್ಧೆಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತವೆ. ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿಯನ್ನು ಪ್ರಾರಂಭಿಸುವ ಸಾಧ್ಯತೆಯ ಬಗ್ಗೆ ಕೇಳಿದಾಗ, ಬಿನ್ನಿ ಅವರು ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. “ಈ ಬಗ್ಗೆ ಬಿಸಿಸಿಐ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಇದು ಸರ್ಕಾರದ ವಿಚಾರವಾಗಿದ್ದು, ಅವರೇ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೋಹಿತ್ ಶರ್ಮಾ ಪ್ರಕಾರ ವಿಶ್ವಕಪ್ ಗೆಲ್ಲಿಸಿ ಕೊಡುವ ತಾಕತ್ ಈ ಆಲ್’ರೌಂಡರ್’ಗಿದೆ…

ಇನ್ನು ಭಾರತಕ್ಕೆ ಬಂದ ಬಳಿಕ ಮಾತನಾಡಿದ ಬಿನ್ನಿ, “ನಾವು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ಉತ್ತಮ ಸಭೆ ನಡೆಸಿದ್ದೇವೆ. ಅಲ್ಲಿ ನಮ್ಮನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುವುದು ಮತ್ತು ಅವರೊಂದಿಗೆ ಸಂವಾದ ನಡೆಸುವುದು ನಮ್ಮ ಮುಖ್ಯ ಅಜೆಂಡಾವಾಗಿತ್ತು. ಒಟ್ಟಾರೆ ಪ್ರವಾಸ ಅದ್ಭುತವಾಗಿತ್ತು” ಎಂದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್
 ಮಾಡಿ

Trending News