ವಿಶ್ವಕಪ್’ಗೂ ಇಲ್ಲ ಅಕ್ಷರ್ ಪಟೇಲ್! ಬದಲಿಯಾಗಿ 33 ವರ್ಷ ಸ್ಟಾರ್ ಸ್ಪಿನ್ನರ್’ಗೆ ಸ್ಥಾನ ಕನ್ಫರ್ಮ್

India vs Australia ODI Series: ಭಾರತದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಯುಜ್ವೇಂದ್ರ ಚಹಾಲ್ ಅವರನ್ನು ತಂಡದಲ್ಲಿ ಆಯ್ಕೆ ಮಾಡದ ಆಯ್ಕೆ ಸಮಿತಿಯನ್ನು ಪ್ರಶ್ನಿಸಿದ್ದಾರೆ. ತಂಡದಲ್ಲಿ 37ರ ಹರೆಯದ ಸ್ಪಿನ್ನರ್ ಆರ್ ಅಶ್ವಿನ್ ಮೊದಲು ಚಾಹಲ್ ಗೆ ಅವಕಾಶ ಸಿಗಬೇಕಿತ್ತು ಎಂದು ಭಜ್ಜಿ ಅಭಿಪ್ರಾಯಪಟ್ಟಿದ್ದಾರೆ.

Written by - Bhavishya Shetty | Last Updated : Sep 20, 2023, 09:50 AM IST
    • ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ 3 ಪಂದ್ಯಗಳ ODI ಸರಣಿ ನಡೆಯಲಿದೆ
    • ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಕೂಡ ಈ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿದೆ
    • ಯುಜ್ವೇಂದ್ರ ಚಹಲ್‌ ಇಂಗ್ಲೆಂಡ್‌ ಪ್ರವಾಸ ಕೈಗೊಂಡು ಕೌಂಟಿ ಕ್ರಿಕೆಟ್‌ ಆಡುತ್ತಿದ್ದಾರೆ
ವಿಶ್ವಕಪ್’ಗೂ ಇಲ್ಲ ಅಕ್ಷರ್ ಪಟೇಲ್! ಬದಲಿಯಾಗಿ 33 ವರ್ಷ ಸ್ಟಾರ್ ಸ್ಪಿನ್ನರ್’ಗೆ ಸ್ಥಾನ ಕನ್ಫರ್ಮ್ title=
Harbhajan Singh

India vs Australia ODI Series: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಸೆಪ್ಟೆಂಬರ್ 22 ರಿಂದ 3 ಪಂದ್ಯಗಳ ODI ಸರಣಿ ನಡೆಯಲಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಕೂಡ ಈ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಆದರೆ ಈ ತಂಡದಲ್ಲಿ ಒಬ್ಬ ಸ್ಟಾರ್ ಆಟಗಾರನಿಗೆ ಸ್ಥಾನ ಸಿಕ್ಕಿಲ್ಲ. ಆ ಆಟಗಾರ ಬೇರೆ ಯಾರೂ ಅಲ್ಲ, ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್.

ಈ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಚಾಹಲ್‌’ಗೆ ಅವಕಾಶ ಸಿಗದಿರುವ ಬಗ್ಗೆ ಭಾರತದ ಮಾಜಿ ಆಟಗಾರರೊಬ್ಬರು ದೊಡ್ಡ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಚಿನ್ನದ ಬೆಲೆ 2,180 ರೂ. ಭರ್ಜರಿ ಇಳಿಕೆ: ಇಂದು 10 ಗ್ರಾಂ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ?

ಭಾರತದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಯುಜ್ವೇಂದ್ರ ಚಹಾಲ್ ಅವರನ್ನು ತಂಡದಲ್ಲಿ ಆಯ್ಕೆ ಮಾಡದ ಆಯ್ಕೆ ಸಮಿತಿಯನ್ನು ಪ್ರಶ್ನಿಸಿದ್ದಾರೆ. ತಂಡದಲ್ಲಿ 37ರ ಹರೆಯದ ಸ್ಪಿನ್ನರ್ ಆರ್ ಅಶ್ವಿನ್ ಮೊದಲು ಚಾಹಲ್ ಗೆ ಅವಕಾಶ ಸಿಗಬೇಕಿತ್ತು ಎಂದು ಭಜ್ಜಿ ಅಭಿಪ್ರಾಯಪಟ್ಟಿದ್ದಾರೆ.

ಆರ್ ಅಶ್ವಿನ್ ಕಳೆದ ವರ್ಷ ಜನವರಿಯಲ್ಲಿ ಟೀಮ್ ಇಂಡಿಯಾ ಪರ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಅಂದಿನಿಂದ ಅವರು ಭಾರತ ODI ತಂಡದಿಂದ ಹೊರಗುಳಿದಿದ್ದರು.

ಹರ್ಭಜನ್ ಸಿಂಗ್ ಶಾಕಿಂಗ್ ಹೇಳಿಕೆ:

ಹರ್ಭಜನ್ ಸಿಂಗ್ ತಮ್ಮ ಯೂಟ್ಯೂಬ್ ಚಾನೆಲ್‌’ನಲ್ಲಿ, “ಚಹಾಲ್ ಈ ತಂಡದ ಭಾಗವಾಗಬೇಕಿತ್ತು. ಅವರಿಗೆ ಅವಕಾಶ ಸಿಕ್ಕಿಲ್ಲ. ಇದು ನನ್ನ ತಿಳುವಳಿಕೆಯನ್ನು ಮೀರಿದೆ. ಚಹಾಲ್ ಯಾರೊಂದಿಗಾದರೂ ಜಗಳವಾಡಿದ್ದಾರೆಯೇ? ಅಥವಾ ಯಾರಿಗಾದರೂ ಕೆಟ್ಟ ಮಾತುಗಳಿಂದ ನಿಂದಿಸಿದ್ದಾರೆಯೇ? ಏನಾಗಿದೆ ಎಂದು ನನಗೆ ತಿಳಿದಿಲ್ಲ. ನಾವು ಪ್ರತಿಭೆಯ ಬಗ್ಗೆ ಮಾತ್ರ ಮಾತನಾಡುತ್ತಿದ್ದರೆ, ಆ ಸ್ಥಳದಲ್ಲಿ ಅವರ ಹೆಸರು ಇರಬೇಕಿತ್ತು” ಎಂದಿದ್ದಾರೆ.

ಇನ್ನು ಏಷ್ಯಾ ಕಪ್‌ ಟೂರ್ನಿಗೆ ಆಯ್ಕೆಯಾಗದ ಹಿನ್ನೆಲೆಯಲ್ಲಿ 33 ವರ್ಷದ ಅನುಭವಿ ಲೆಗ್‌ ಸ್ಪಿನ್ನರ್‌ ಯುಜ್ವೇಂದ್ರ ಚಹಲ್‌ಇಂಗ್ಲೆಂಡ್‌ ಪ್ರವಾಸ ಕೈಗೊಂಡು ಕೌಂಟಿ ಕ್ರಿಕೆಟ್‌ ಆಡುತ್ತಿದ್ದಾರೆ.

ಮಾತು ಮುಂದುವರೆಸಿದ ಭಜ್ಜಿ, “ಮುಂಬರುವ ಐಸಿಸಿ ಒಡಿಐ ಏಕದಿನ ವಿಶ್ವಕಪ್‌ 2023 ಟೂರ್ನಿಗೆ ಆಯ್ಕೆ ಮಾಡಲಾಗಿರುವ ಭಾರತ ತಂಡದಲ್ಲಿ ಅಕ್ಷರ್‌ ಪಟೇಲ್‌ ಅವರನ್ನು ಕೈಬಿಟ್ಟು ಚಹಲ್‌’ನ ಆಯ್ಕೆ ಮಾಡಿಕೊಳ್ಳುವುದು ಸೂಕ್ತ” ಎಂದು ಅಭಿಪ್ರಾಯ ಪಟ್ಟಿದ್ದಾರೆ. ಒಂದು ವೇಳೆ ವಿಶ್ವಕಪ್ ಸಂದರ್ಭದಲ್ಲಿ ಅಕ್ಷರ್ ಫಿಟ್ನೆಸ್ ಟೆಸ್ಟ್ ಪಾಸ್ ಆಗದಿದ್ದರೆ, ತಂಡದಿಂದ ಹೊರಗುಳಿಯುವುದು ಖಚಿತ, ಈ ಸಂದರ್ಭದಲ್ಲಿ ಭಜ್ಜಿ ಸಲಹೆ ಅನುಸಾರ ಚಹಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯೂ ಇದೆ.

ಮೊದಲ ಎರಡು ಏಕದಿನ ಪಂದ್ಯಗಳಿಗೆ ಭಾರತ ತಂಡ:

ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

ಇದನ್ನೂ ಓದಿ: ವಿಶ್ವಕಪ್’ಗೂ ಮುನ್ನ 6 ಸ್ಟಾರ್ ಆಟಗಾರರನ್ನು ಅಮಾನತುಗೊಳಿಸಿದ ICC! ಈ ಪಟ್ಟಿಯಲ್ಲಿ ಮೂವರು ಭಾರತೀಯರೇ

ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News