1524 ದಿನಗಳ ನಂತರ ಟೀಂ ಇಂಡಿಯಾಗೆ ಎದುರಾಯ್ತು ಆ ಒಂದು ಸನ್ನಿವೇಶ…! ಹೆಚ್ಚಾಯ್ತು ಅಭಿಮಾನಿಗಳ ಎದೆಬಡಿತ

India vs Pakistan, Reserve Day: ಏಷ್ಯಾಕಪ್‌’ನ ಸೂಪರ್-4 ಸುತ್ತಿನ ಪಂದ್ಯ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಇಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿವೆ.

Written by - Bhavishya Shetty | Last Updated : Sep 11, 2023, 08:24 AM IST
    • ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುತ್ತಿದೆ
    • ಮೀಸಲು ದಿನವನ್ನು ಇಂದು ಅಂದರೆ ಸೆಪ್ಟೆಂಬರ್ 11 ರಂದು ಇರಿಸಲಾಗಿದೆ.
    • ಈ ಸಂದರ್ಭದಲ್ಲಿ ಟೀಂ ಇಂಡಿಯಾದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ
1524 ದಿನಗಳ ನಂತರ ಟೀಂ ಇಂಡಿಯಾಗೆ ಎದುರಾಯ್ತು ಆ ಒಂದು ಸನ್ನಿವೇಶ…! ಹೆಚ್ಚಾಯ್ತು ಅಭಿಮಾನಿಗಳ ಎದೆಬಡಿತ title=
Asia Cup Reserve Day

India vs Pakistan, Reserve Day: ಏಷ್ಯಾ ಕಪ್-2023 ರ ಸೂಪರ್-4 ಸುತ್ತಿನಲ್ಲಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುತ್ತಿದೆ. ಮಳೆ ಮತ್ತು ಕೆಟ್ಟ ಹವಾಮಾನದಿಂದಾಗಿ ಈ ಪಂದ್ಯವನ್ನು ಸೆಪ್ಟೆಂಬರ್ 10 ಭಾನುವಾರ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಮೀಸಲು ದಿನವನ್ನು ಇಂದು ಅಂದರೆ ಸೆಪ್ಟೆಂಬರ್ 11 ರಂದು ಇರಿಸಲಾಗಿದೆ.

ಇದನ್ನೂ ಓದಿ: ಭಾರತ vs ಪಾಕಿಸ್ತಾನ ಸೂಪರ್ 4 ಫೈಟ್’ಗೆ ಪ್ಲೇಯಿಂಗ್ 11 ರೆಡಿ: ಸ್ಟಾರ್ ವೇಗಿ ಸೇರಿ ಇಬ್ಬರು ಔಟ್

ಇನ್ನು ಈ ಸಂದರ್ಭದಲ್ಲಿ ಟೀಂ ಇಂಡಿಯಾದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಇದರಿಂದಾಗಿ ಭಾರತ ತಂಡದ ಕೋಟ್ಯಂತರ ಅಭಿಮಾನಿಗಳ ಹೃದಯ ಬಡಿತ ಹೆಚ್ಚಾಗಿದೆ.

ಏಷ್ಯಾಕಪ್‌’ನ ಸೂಪರ್-4 ಸುತ್ತಿನ ಪಂದ್ಯ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಇಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿವೆ. ಸೆಪ್ಟೆಂಬರ್ 10 ರಂದು ಎರಡೂ ತಂಡಗಳು ಮುಖಾಮುಖಿಯಾಗುತ್ತಿದ್ದವು ಆದರೆ ನಿರಂತರ ಮಳೆಯಿಂದಾಗಿ ಪಂದ್ಯವನ್ನು ಮೀಸಲು ದಿನಕ್ಕೆ ವಿಸ್ತರಿಸಲಾಯಿತು.

ಈ ಪಂದ್ಯ ಮಳೆಯಿಂದ ಸ್ಥಗಿತಗೊಂಡ ಸ್ಥಳದಲ್ಲೇ ಆರಂಭವಾಗಲಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 24.1 ಓವರ್‌ಗಳಲ್ಲಿ 2 ವಿಕೆಟ್‌’ಗೆ 147 ರನ್ ಗಳಿಸಿತು. ಇದೀಗ ಮೀಸಲು ದಿನದಲ್ಲೂ ಭಾರತ ತಂಡ ಈ ಸ್ಕೋರ್’ನೊಂದಿಗೆ ಆಟ ಆರಂಭಿಸಲಿದೆ. ಆಟ ಸ್ಥಗಿತಗೊಂಡಾಗ ವಿರಾಟ್ ಕೊಹ್ಲಿ 8 ರನ್ ಹಾಗೂ ಕೆಎಲ್ ರಾಹುಲ್ 17 ರನ್ ಗಳಿಸಿ ಕ್ರೀಸ್‌ನಲ್ಲಿದ್ದರು. ಈ ಇಬ್ಬರೂ ಬಲಿಷ್ಠ ಬ್ಯಾಟ್ಸ್‌ಮನ್‌ಗಳು ಸೆಪ್ಟೆಂಬರ್ 11 ರಂದು ಅಂದರೆ ಮೀಸಲು ದಿನದಂದು ಬ್ಯಾಟಿಂಗ್‌ ಮಾಡಲಿದ್ದಾರೆ.

ಇದನ್ನೂ ಓದಿ: ICC ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಯಾರು? ಟಾಪ್ 5ರಲ್ಲಿ ಈ ಭಾರತೀಯನೇ ಅಗ್ರ...

1524 ದಿನಗಳ ನಂತರ ಸಂಭವಿಸಿದ ಘಟನೆ:

ಭಾರತ ತಂಡವು 1524 ದಿನಗಳ ನಂತರ ಮೀಸಲು ದಿನದಂದು ಏಕದಿನ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದೆ. ಈ ಬಾರಿ ಪಾಕಿಸ್ತಾನವನ್ನು ಎದುರಿಸುತ್ತಿದೆ. ಇದಕ್ಕೂ ಮೊದಲು 2019 ರಲ್ಲಿ ಮೀಸಲು ದಿನದಂದು ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ವನ್ನು ವಿಶ್ವಕಪ್ ಸೆಮಿಫೈನಲ್‌’ನಲ್ಲಿ 18 ರನ್‌’ಗಳಿಂದ ನ್ಯೂಜಿಲೆಂಡ್‌ ಸೋಲಿಸಿತ್ತು. ಈ ಬಾರಿ ಮತ್ತೆ ಅಂತಹದ್ದೇ ದಿನ ಬಂದಿದ್ದು, ಫ್ಯಾನ್ಸ್ ಮನದಲ್ಲಿ ಭಯದ ವಾತಾವರಣ ಮನೆ ಮಾಡಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News