Team India : ಟೀಂನಿಂದ ಈ ಆಟಗಾರನನ್ನು ಹೊರಗಿಟ್ಟು ವಿವಾದ ಸೃಷ್ಟಿಸಿದ ಪಾಂಡ್ಯ!

IND vs NZ, 3rd T20 : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಮತ್ತು ನಿರ್ಣಾಯಕ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾಗೆ ಈ ಪಂದ್ಯವನ್ನು ಗೆಲ್ಲುವುದು ಬಹಳ ಮುಖ್ಯವಾಗಿದೆ. 

Written by - Channabasava A Kashinakunti | Last Updated : Feb 1, 2023, 08:39 PM IST
  • ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿ
  • ವಿವಾದ ಸೃಷ್ಟಿಸಿದ ಪಾಂಡ್ಯ
  • ಉತ್ತಮ ಪ್ರದರ್ಶನ ನೀಡಿದರೂ ಸಿಗಲಿಲ್ಲ ಚಾನ್ಸ್
Team India : ಟೀಂನಿಂದ ಈ ಆಟಗಾರನನ್ನು ಹೊರಗಿಟ್ಟು ವಿವಾದ ಸೃಷ್ಟಿಸಿದ ಪಾಂಡ್ಯ! title=

IND vs NZ, 3rd T20 : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಮತ್ತು ನಿರ್ಣಾಯಕ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾಗೆ ಈ ಪಂದ್ಯವನ್ನು ಗೆಲ್ಲುವುದು ಬಹಳ ಮುಖ್ಯವಾಗಿದೆ. 

ಈ ಪಂದ್ಯದಲ್ಲಿ ಭಾರತ ಗೆದ್ದರೆ ಟಿ20 ಸರಣಿ ವಶಪಡಿಸಿಕೊಳ್ಳಲಿದ್ದು, ವಿಶ್ವದ ನಂಬರ್ 1 ಟಿ20 ತಂಡವಾಗಿ ಹೊರಹೊಮ್ಮಲಿದೆ.. ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಏಕಾಏಕಿ ಆಟಗಾರನನ್ನು ಹೊರಗಿಟ್ಟು ದೊಡ್ಡ ವಿವಾದವನ್ನೇ ಸೃಷ್ಟಿಸಿದ್ದಾರೆ. ಅವರ ಉತ್ತಮ ಪ್ರದರ್ಶನದ ಹೊರತಾಗಿಯೂ, ನಾಯಕ ಹಾರ್ದಿಕ್ ಪಾಂಡ್ಯ ಈ ಆಟಗಾರನನ್ನು ಟೀಮ್ ಇಂಡಿಯಾದ ಪ್ಲೇಯಿಂಗ್ XI ನಿಂದ ಕೈಬಿಟ್ಟಿದ್ದಾರೆ.

ಇದನ್ನೂ ಓದಿ : IND vs NZ : 'ಅಂತಿಮ' ಪಂದ್ಯದಲ್ಲಿ ಸ್ಕೋರ್ ಎಷ್ಟು? ಪಂದ್ಯಕ್ಕೂ ಮುನ್ನವೇ ಬಯಲಾಗಿದೆ ರಹಸ್ಯ!

ವಿವಾದ ಸೃಷ್ಟಿಸಿದ ಪಾಂಡ್ಯ 

ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಅವರ ಈ ನಿರ್ಧಾರ ಇದ್ದಕ್ಕಿದ್ದಂತೆ ಭಾರಿ ವಿವಾದವನ್ನೇ ಸೃಷ್ಟಿಸಿದೆ. ಉತ್ತಮ ಪ್ರದರ್ಶನ ತೋರುತ್ತಿರುವ ಆಟಗಾರನನ್ನು ನಾಯಕ ಹಾರ್ದಿಕ್ ಪಾಂಡ್ಯ ಹೇಗೆ ಪ್ಲೇಯಿಂಗ್ XI ನಿಂದ ಕೈಬಿಟ್ಟರು ಎಂದು ಅಭಿಮಾನಿಗಳು ಆಶ್ಚರ್ಯ ಪಡುತ್ತಿದ್ದಾರೆ. ವಾಸ್ತವವಾಗಿ, ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ವಿರುದ್ಧದ ಕೊನೆಯ ಮತ್ತು ನಿರ್ಣಾಯಕ ಟಿ20 ಪಂದ್ಯದಿಂದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರನ್ನು ಕೈಬಿಟ್ಟಿದ್ದಾರೆ. ಯುಜುವೇಂದ್ರ ಚಹಾಲ್ ಬದಲಿಗೆ ವೇಗದ ಬೌಲರ್ ಉಮ್ರಾನ್ ಮಲಿಕ್‌ಗೆ ನಾಯಕ ಹಾರ್ದಿಕ್ ಪಾಂಡ್ಯ ಅವಕಾಶ ನೀಡಿದ್ದಾರೆ.

ಉತ್ತಮ ಪ್ರದರ್ಶನ ನೀಡಿದರೂ ಸಿಗಲಿಲ್ಲ ಚಾನ್ಸ್

ಅಂತಿಮ ಪಂದ್ಯದಲ್ಲಿ ಮಿಚೆಲ್ ಸ್ಯಾಂಟ್ನರ್ ನೇತೃತ್ವದ ನ್ಯೂಜಿಲೆಂಡ್ ತಂಡದ ವಿರುದ್ಧ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಈ ಪಂದ್ಯದಲ್ಲಿ ಭಾರತ ಒಂದು ಬದಲಾವಣೆ ಮಾಡಿದ್ದು, ಯುಜ್ವೇಂದ್ರ ಚಹಾಲ್ ಬದಲಿಗೆ ಉಮ್ರಾನ್ ಮಲಿಕ್‌ಗೆ ಅವಕಾಶ ನೀಡಲಾಗಿದೆ. ಯುಜ್ವೇಂದ್ರ ಚಹಾಲ್ ಟಿ20 ಅಂತರಾಷ್ಟ್ರೀಯ ಅಪಾಯಕಾರಿ ಲೆಗ್-ಸ್ಪಿನ್ನರ್ ಮತ್ತು ಅವರು ಭಾರತದಿಂದ ಅತಿ ಹೆಚ್ಚು ಟಿ20 ಅಂತರಾಷ್ಟ್ರೀಯ ವಿಕೆಟ್ ಪಡೆದವರು. ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಕಿಲ್ಲರ್ ಬೌಲಿಂಗ್ ಮಾಡುವಾಗ ಯುಜುವೇಂದ್ರ ಚಹಾಲ್ 2 ಓವರ್‌ಗಳಲ್ಲಿ 4 ರನ್ ನೀಡಿ 1 ವಿಕೆಟ್ ಪಡೆದರು.

ಯುಜ್ವೇಂದ್ರ ಚಹಾಲ್ ಎಕನಾಮಿಕ್ ರೇಟ್ ಕೇವಲ 2.00 ಆಗಿತ್ತು. ಅಹಮದಾಬಾದ್ ನಲ್ಲಿ ಮೂರನೇ ಟಿ20 ಪಂದ್ಯ ನಡೆಯುತ್ತಿದ್ದು, ಸ್ಪಿನ್ ಬೌಲರ್ ಗಳಿಗೆ ಸಾಕಷ್ಟು ನೆರವು ಸಿಗುತ್ತದೆ. ಯುಜುವೇಂದ್ರ ಚಹಾಲ್ ಮೂರನೇ ಟಿ20 ಪಂದ್ಯದಲ್ಲಿ ಆಡುವ ಇಲೆವೆನ್‌ನಲ್ಲಿ ಆಡಿದ್ದರೆ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್‌ಗಳಿಗೆ ಆಪತ್ಬಾಂಧವರಾಗಿ ಪರಿಣಮಿಸಿದ್ದರು. ಅಹಮದಾಬಾದ್ ಪಿಚ್ ನಲ್ಲಿ ಉಮ್ರಾನ್ ಮಲಿಕ್ ರಂತಹ ವೇಗದ ಬೌಲರ್ ಗೆ ಅವಕಾಶ ನೀಡುವ ಮೂಲಕ ನಾಯಕ ಹಾರ್ದಿಕ್ ಪಾಂಡ್ಯ ಅತಿ ದೊಡ್ಡ ತಪ್ಪು ಮಾಡಿದ್ದಾರೆ. ಉಮ್ರಾನ್ ಮಲಿಕ್ ಈ ಪಂದ್ಯದಲ್ಲಿ ದುಬಾರಿ ಎನಿಸಬಹುದು.

ಇದನ್ನೂ ಓದಿ : Suryakumar Yadav : ಟೀಂ ಇಂಡಿಯಾಗೆ ವರ್ಷದ ಸಿಹಿ ಸುದ್ದಿ : ಇತಿಹಾಸ ಸೃಷ್ಟಿಸಿದ ಸೂರ್ಯಕುಮಾರ್! 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News