Rashid Latif statement: ಕೊಹ್ಲಿ ಬಗ್ಗೆ ಪಾಕ್ ಕ್ರಿಕೆಟಿಗ ನೀಡಿದ ಈ ಹೇಳಿಕೆಗೆ ರೊಚ್ಚಿಗೆದ್ದ ಭಾರತೀಯ ಫ್ಯಾನ್ಸ್!! ಅಂತಹದ್ದೇನಂದ್ರು?

Rashid Latif statement on Virat Kohli Century: ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ 72 ಶತಕಗಳನ್ನು ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ಶತಕ ಸಿಡಿಸಿದ ವಿಶ್ವದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

Written by - Bhavishya Shetty | Last Updated : Dec 12, 2022, 01:04 PM IST
    • ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬಗ್ಗೆ ಕಾಮೆಂಟ್
    • ಪಾಕಿಸ್ತಾನದ ಮಾಜಿ ನಾಯಕ ರಶೀದ್ ಲತೀಫ್ ವಿರುದ್ಧ ಆಕ್ರೋಶ
    • ರಶೀದ್ ಲತೀಫ್ ಕೊಹ್ಲಿಯನ್ನು ಲೇವಡಿ ಮಾಡಿದ್ದಾರೆ
Rashid Latif statement: ಕೊಹ್ಲಿ ಬಗ್ಗೆ ಪಾಕ್ ಕ್ರಿಕೆಟಿಗ ನೀಡಿದ ಈ ಹೇಳಿಕೆಗೆ ರೊಚ್ಚಿಗೆದ್ದ ಭಾರತೀಯ ಫ್ಯಾನ್ಸ್!! ಅಂತಹದ್ದೇನಂದ್ರು? title=
Virat Kohli

Rashid Latif statement on Virat Kohli Century: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬಗ್ಗೆ ಪಾಕಿಸ್ತಾನದ ಮಾಜಿ ನಾಯಕ ರಶೀದ್ ಲತೀಫ್ ಕಾಮೆಂಟ್ ಮಾಡಿದ್ದು, ಇದಕ್ಕೆ ಭಾರತೀಯ ಅಭಿಮಾನಿಗಳು ಕೋಪಗೊಂಡಿದ್ದಾರೆ. ರಶೀದ್ ಲತೀಫ್ ಅವರ ಈ ಕಾಮೆಂಟ್ ಅನ್ನು ಭಾರತೀಯ ಅಭಿಮಾನಿಗಳು ಎಂದಿಗೂ ಮರೆಯುವುದಿಲ್ಲ. ರಶೀದ್ ಲತೀಫ್ ಕೊಹ್ಲಿಯನ್ನು ಲೇವಡಿ ಮಾಡಿದ್ದು, “ಭಾರತೀಯ ಅಭಿಮಾನಿಗಳಿಗೆ ವಿರಾಟ್ ಅವರ ಶತಕ ಅಗತ್ಯವಿಲ್ಲ, ಆದರೆ ವಿಶ್ವಕಪ್ ಟ್ರೋಫಿ ಬೇಕಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Team India: ಟೀಂ ಇಂಡಿಯಾದಲ್ಲಿ ಪಂತ್-ಧವನ್ ಸ್ಥಾನಕ್ಕೆ ಅಪಾಯ ತಂದಿಟ್ಟ ಈ ಸ್ಟಾರ್ ಆಟಗಾರ!

ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ 72 ಶತಕಗಳನ್ನು ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ಶತಕ ಸಿಡಿಸಿದ ವಿಶ್ವದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕಗಳ ದಾಖಲೆ ಹೊಂದಿರುವ ವಿರಾಟ್ ಕೊಹ್ಲಿಗಿಂತ ಸಚಿನ್ ತೆಂಡೂಲ್ಕರ್ ಮುಂದಿದ್ದಾರೆ.

ಪಾಕಿಸ್ತಾನದ ಮಾಜಿ ನಾಯಕ ರಶೀದ್ ಲತೀಫ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿರಾಟ್ ಕೊಹ್ಲಿ ಅವರು ಎಷ್ಟು ಬೇಕಾದರೂ ಶತಕಗಳನ್ನು ಗಳಿಸಬಹುದು, ಆದರೆ ಭಾರತೀಯ ಅಭಿಮಾನಿಗಳಿಗೆ ವಿಶ್ವಕಪ್ ಟ್ರೋಫಿ ಅಗತ್ಯವಿದೆ ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿ ಅವರ 100 ಶತಕ ಅಥವಾ 200 ಶತಕಗಳ ದಾಖಲೆಯ ಬಗ್ಗೆ ಭಾರತೀಯ ಅಭಿಮಾನಿಗಳು ತಲೆಕೆಡಿಸಿಕೊಳ್ಳುವುದಿಲ್ಲ. ಬದಲಿಗೆ ಭಾರತಕ್ಕೆ ವಿಶ್ವಕಪ್ ಟ್ರೋಫಿಯನ್ನು ಏಕೆ ಗೆಲ್ಲಲು ಸಾಧ್ಯವಾಗುತ್ತಿಲ್ಲ ಎಂಬ ಚಿಂತೆ ಅವರಲ್ಲಿದೆ' ಎಂದು ಹೇಳಿದರು.

“ನೀವು ಆರ್ಥಿಕವಾಗಿ ನೋಡಿದರೆ, ಭಾರತೀಯ ಕ್ರಿಕೆಟ್ ಮತ್ತು ಐಪಿಎಲ್ ಸಾಕಷ್ಟು ಪ್ರಗತಿ ಸಾಧಿಸಿದೆ. ಆದರೆ ಈಗ ಮಾಧ್ಯಮಗಳು ಮತ್ತು ಅಭಿಮಾನಿಗಳಿಂದ ಭಾರತ ತಂಡವು ದೊಡ್ಡ ಐಸಿಸಿ ಟ್ರೋಫಿ ಗೆಲ್ಲಬೇಕು ಎಂದು ಒತ್ತಡ ಹೇರುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: Team India Playing XI: ಟೆಸ್ಟ್ ಪಂದ್ಯದಿಂದ ರೋಹಿತ್ ಔಟ್! ಟೀಂ ಇಂಡಿಯಾದಲ್ಲಿ ಹಠಾತ್ ಬದಲಾವಣೆ: ಈ ಆಟಗಾರರಿಗೆ ಸ್ಥಾನ

“ಟೀಮ್ ಇಂಡಿಯಾ 2022 ರ ಏಷ್ಯಾಕಪ್ ಗೆಲ್ಲಲು ಸಾಧ್ಯವಾಗಲಿಲ್ಲ. ಇದಲ್ಲದೇ 2017ರ ಚಾಂಪಿಯನ್ಸ್ ಟ್ರೋಫಿ, 2019ರ ವಿಶ್ವಕಪ್, 2021ರ ಟಿ20 ವಿಶ್ವಕಪ್ ಮತ್ತು 2022ರ ಟಿ20 ವಿಶ್ವಕಪ್ ಗೆಲ್ಲಲು ಭಾರತಕ್ಕೆ ಸಾಧ್ಯವಾಗಿಲ್ಲ. 100 ಶತಕಗಳು ತಮ್ಮದೇ ಆದ ಪ್ರಾಮುಖ್ಯತೆಯನ್ನು ಹೊಂದಿವೆ, ಆದರೆ ಈ ಸಮಯದಲ್ಲಿ ಭಾರತಕ್ಕೆ ವಿಶ್ವಕಪ್ ಗೆಲ್ಲಬೇಕಾಗಿದೆ” ಎಂದು ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News