ODI World Cup 2023: ಭಾರತದ ಏಕದಿನ ವಿಶ್ವಕಪ್ ಸ್ಕ್ವಾಡ್ ಫೈನಲ್; ರಾಹುಲ್ ಇನ್, ಸ್ಯಾಮ್ಸನ್ ಔಟ್!

ODI World Cup 2023: ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗದ ಯುಜ್ವೇಂದ್ರ ಚಾಹಲ್‍ಗೆ ವಿಶ್ವಕಪ್ ತಂಡದಲ್ಲಿಯೂ ಸ್ಥಾನ ಸಿಕ್ಕಿಲ್ಲ. ಆದರೆ 50 ಓವರ್ ಮಾದರಿಯಲ್ಲಿ ರನ್ ಗಳಿಸಲು ಪರದಾಡುತ್ತಿರುವ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.

Written by - Puttaraj K Alur | Last Updated : Sep 3, 2023, 02:34 PM IST
  • ಏಕದಿನ ವಿಶ್ವಕಪ್ ಟೂರ್ನಿಗೆ ಇಂದು ಟೀಂ ಇಂಡಿಯಾ ತಂಡವನ್ನು ಪ್ರಕಟಿಸುವ ನಿರೀಕ್ಷೆಯಿದೆ
  • ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಭಾರತ ತಂಡವನ್ನು ಅಂತಿಮಗೊಳಿಸಿದ್ದಾರೆ
  • ಏಕದಿನ ವಿಶ್ವಕಪ್ ಟೂರ್ನಿಗೆ ಕೆ.ಎಲ್.ರಾಹುಲ್ ಇನ್ ಆದರೆ, ಸಂಜು ಸ್ಯಾಮ್ಸನ್ ಔಟ್ ಆಗುವ ಸಾಧ್ಯತೆ
ODI World Cup 2023: ಭಾರತದ ಏಕದಿನ ವಿಶ್ವಕಪ್ ಸ್ಕ್ವಾಡ್ ಫೈನಲ್; ರಾಹುಲ್ ಇನ್, ಸ್ಯಾಮ್ಸನ್ ಔಟ್! title=
ಏಕದಿನ ವಿಶ್ವಕಪ್ 2023

ನವದೆಹಲಿ: ಏಕದಿನ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾದ ತಂಡವನ್ನು ಇಂದು ಪ್ರಕಟಿಸುವ ನಿರೀಕ್ಷೆಯಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ಶ್ರೀಲಂಕಾಕ್ಕೆ ತೆರಳಿ ತಂಡದ ಆಡಳಿತದೊಂದಿಗೆ ಚರ್ಚೆ ನಡೆಸಿದ್ದು, ತಂಡವನ್ನು ಅಂತಿಮಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಸಿಸಿಐ ಇತ್ತೀಚೆಗೆ ಆಯ್ಕೆ ಮಾಡಿರುವ ಏಷ್ಯಾಕಪ್ ತಂಡವನ್ನೇ ಬಹುತೇಕ ಫೈನಲ್ ಮಾಡುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲವೆಂದು ಹೇಳಲಾಗುತ್ತಿದೆ. ಏಕದಿನ ವಿಶ್ವಕಪ್ ತಂಡವು 15 ಸದಸ್ಯರನ್ನು ಹೊಂದಿರುವ ಕಾರಣ ವಿಕೆಟ್-ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್‌ಗೆ ಸ್ಥಾನವಿಲ್ಲ. ಆದರೆ ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: “ಧೋನಿ ಅಲ್ಲ, ಈತನೇ ನನ್ನ ವೃತ್ತಿಜೀವನದ ಫೇವರಿಟ್ ಕ್ಯಾಪ್ಟನ್”: ವೇಗಿ ಇಶಾಂತ್ ಶರ್ಮಾ ‘ಶ್ರೇಷ್ಠ’ ಆಯ್ಕೆ

ಅಗರ್ಕರ್ ಅವರು ಏಷ್ಯಾಕಪ್‌ಗೆ ಭಾರತೀಯ ತಂಡವನ್ನು ಘೋಷಿಸಿದಾಗ, ಏಕದಿನ ವಿಶ್ವಕಪ್ ಟೂರ್ನಿಗೂ ಇದೇ ತಂಡವಿರಲಿ ಎಂದು ಸಲಹೆ ನೀಡಿದ್ದರು. ಆದರೆ ಏಷ್ಯಾಕಪ್ ತಂಡದಲ್ಲಿ 17-ಸದಸ್ಯರಿದ್ದು, ರಾಹುಲ್‌ಗೆ ಬ್ಯಾಕ್‌ಅಪ್‌ ಆಗಿ ಸ್ಯಾಮ್ಸನ್‌ನನ್ನು ಸೇರಿಸಲಾಗಿತ್ತು. ವಿಶ್ವಕಪ್ ತಂಡವು ಕೇವಲ 15 ಆಟಗಾರರನ್ನು ಒಳಗೊಂಡಿರುವುದರಿಂದ, ಮುಖ್ಯ ತಂಡದಿಂದ 2 ಸದಸ್ಯರನ್ನು ತೆಗೆದುಹಾಕಬೇಕಾಯಿತು.

ಈ ಪಟ್ಟಿಯಿಂದ ಹೊರಗುಳಿಯುವ ಇಬ್ಬರು ಆಟಗಾರರೆಂದರೆ ತಿಲಕ್ ವರ್ಮಾ ಮತ್ತು ಪ್ರಸಿದ್ಧ್ ಕೃಷ್ಣ ಎಂದು ತಿಳಿದು ಬಂದಿದೆ . ವರ್ಮಾ ಏಷ್ಯಾ ಕಪ್‌ ಟೂರ್ನಿಯ ಚೊಚ್ಚಲ ಪಂದ್ಯವನ್ನು ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ದರು. ಸುದೀರ್ಘ ಗಾಯದ ನಂತರ ಕೃಷ್ಣರನ್ನು ತಂಡಕ್ಕೆ ಸೇರಿಸಲಾಗಿತ್ತು. ಜಸ್ಪ್ರೀತ್ ಬುಮ್ರಾ , ಶ್ರೇಯಸ್ ಅಯ್ಯರ್ ಮತ್ತು ಕೆ.ಎಲ್.ರಾಹುಲ್ ಮೂವರೂ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾದಲ್ಲಿ ಅತೀ ಹೆಚ್ಚು ಸಂಬಳ ಪಡೆಯುವ ಆಟಗಾರ ಯಾರು ಗೊತ್ತಾ?

ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗದ ಯುಜ್ವೇಂದ್ರ ಚಾಹಲ್‍ಗೆ ವಿಶ್ವಕಪ್ ತಂಡದಲ್ಲಿಯೂ ಸ್ಥಾನ ಸಿಕ್ಕಿಲ್ಲ. ಆದರೆ 50 ಓವರ್ ಮಾದರಿಯಲ್ಲಿ ರನ್ ಗಳಿಸಲು ಪರದಾಡುತ್ತಿರುವ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.

2023ರ ವಿಶ್ವಕಪ್ ಟೂರ್ನಿಗೆ ಭಾರತದ ಸಂಭಾವ್ಯ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News