Team India: ಟಿ-20 ತಂಡದಿಂದ ರೋಹಿತ್-ವಿರಾಟ್ ಖಾಯಂ ಔಟ್? ಆಯ್ಕೆಗಾರರ ನಿರ್ಧಾರ ಏನು?

Indian Cricket Team: ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ಮುಂದಿನ ವಾರ ನಡೆಯಲಿರುವ ಸಭೆಯಲ್ಲಿ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯು ಟಿ20 ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ಮುಂದುವರಿಕೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು. ಟಿ20 ಕ್ರಿಕೆಟ್‌ನಲ್ಲಿ ಇಬ್ಬರೂ ಬ್ಯಾಟ್ಸ್‌ಮನ್‌ಗಳು ತಮ್ಮ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ

Written by - Bhavishya Shetty | Last Updated : Jan 10, 2023, 02:20 PM IST
    • ಆಯ್ಕೆಗಾರರು ನ್ಯೂಜಿಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ತಂಡವನ್ನು ಪ್ರಕಟಿಸಬೇಕಾಗಿದೆ
    • ಭಾರತ ತಂಡ ಪ್ರಸ್ತುತ ಶ್ರೀಲಂಕಾ ವಿರುದ್ಧ ಮೂರು ಏಕದಿನ ಸರಣಿಯನ್ನು ಆಡುತ್ತಿದೆ
    • ಟಿ20 ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ಮುಂದುವರಿಕೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು
Team India: ಟಿ-20 ತಂಡದಿಂದ ರೋಹಿತ್-ವಿರಾಟ್ ಖಾಯಂ ಔಟ್? ಆಯ್ಕೆಗಾರರ ನಿರ್ಧಾರ ಏನು? title=
Team India

Indian Cricket Team: ಭಾರತ ತಂಡ ಪ್ರಸ್ತುತ ಶ್ರೀಲಂಕಾ ವಿರುದ್ಧ ಮೂರು ಏಕದಿನ ಸರಣಿಯನ್ನು ಆಡುತ್ತಿದೆ. ಟೀಂ ಇಂಡಿಯಾಗೆ ಮುಂದಿನ ವಾರ ಅತ್ಯಂತ ಮಹತ್ವದ್ದಾಗಿದೆ. ಮುಂದಿನ ವಾರವೇ, ಆಯ್ಕೆಗಾರರು ನ್ಯೂಜಿಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ತಂಡವನ್ನು ಪ್ರಕಟಿಸಬೇಕಾಗಿದೆ. ಇದರಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಅನುಭವಿ ಆಟಗಾರರು ಟಿ 20 ತಂಡದಲ್ಲಿ ಉಳಿಯಬೇಕೇ ಅಥವಾ ಬೇಡವೇ ಎಂದು ನಿರ್ಧರಿಸಲಾಗುತ್ತದೆ.

ಇದನ್ನೂ ಓದಿ: Irfan Pathan: ಭಾರತದ ಗೆಲುವಿಗೆ ಈ ಆಟಗಾರ ಫಾರ್ಮ್ಗೆ ಬರುವುದು ಬಹಳ ಮುಖ್ಯ: ಇರ್ಫಾನ್ ಪಠಾಣ್ ಹೇಳಿದ್ದು ಯಾರಿಗೆ ಗೊತ್ತಾ?

ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ಮುಂದಿನ ವಾರ ನಡೆಯಲಿರುವ ಸಭೆಯಲ್ಲಿ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯು ಟಿ20 ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ಮುಂದುವರಿಕೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು. ಟಿ20 ಕ್ರಿಕೆಟ್‌ನಲ್ಲಿ ಇಬ್ಬರೂ ಬ್ಯಾಟ್ಸ್‌ಮನ್‌ಗಳು ತಮ್ಮ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ.

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ವಿಶ್ವದ ಅಪಾಯಕಾರಿ ಆಟಗಾರರೆಂದು ಪರಿಗಣಿಸಲ್ಪಟ್ಟಿದ್ದಾರೆ. ಇವರಿಬ್ಬರೂ ಭಾರತ ತಂಡಕ್ಕೆ ಹಲವು ಪಂದ್ಯಗಳನ್ನು ಸ್ವಂತ ಬಲದಿಂದ ಗೆದ್ದುಕೊಟ್ಟಿದ್ದಾರೆ. ಈ ಇಬ್ಬರೂ ಆಟಗಾರರು ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ವಿರಾಟ್ ಟಿ20 ಕ್ರಿಕೆಟ್‌ನ 115 ಪಂದ್ಯಗಳಲ್ಲಿ 52.73 ಸರಾಸರಿಯಲ್ಲಿ 4008 ರನ್ ಗಳಿಸಿದ್ದಾರೆ. ರೋಹಿತ್ 148 ಪಂದ್ಯಗಳಲ್ಲಿ 31.32 ಸರಾಸರಿಯಲ್ಲಿ 3853 ರನ್ ಗಳಿಸಿದ್ದಾರೆ.

ಹಾರ್ದಿಕ್ ನಾಯಕನಾಗಲು ದೊಡ್ಡ ಸ್ಪರ್ಧಿ:

ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು ಮುನ್ನಡೆಸಿದ್ದರು. ಅವರ ನಾಯಕತ್ವದಲ್ಲಿ ತಂಡ 2-1 ಅಂತರದಲ್ಲಿ ಸರಣಿ ಗೆದ್ದಿತ್ತು. ನಾಯಕನಾಗಿ ಮುನ್ನೆಲೆಗೆ ಬಂದಿದ್ದಾರೆ. ಅವರು ಟಿ20 ಕ್ರಿಕೆಟ್‌ನ ಖಾಯಂ ನಾಯಕರಾಗಿ ಕಾಣುತ್ತಿದ್ದಾರೆ. ಆದರೆ ಬಿಸಿಸಿಐ ಈ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ 2022 ರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ಗಳ ಹೀನಾಯ ಸೋಲನ್ನು ಎದುರಿಸಬೇಕಾಯಿತು.

ಇದನ್ನೂ ಓದಿ:  Rohit Sharma: ಮೈದಾನದಲ್ಲಿ ಅಳುತ್ತಿದ್ದ ಬಾಲಕನನ್ನು ಸಮಾಧಾನಗೊಳಿಸಿದ ರೋಹಿತ್ ಕೆನ್ನೆ ಮುಟ್ಟಿ ಹೇಳಿದ್ದೇನು ಗೊತ್ತಾ?

ಮುಂದಿನ ಟಿ20 ವಿಶ್ವಕಪ್ 2024ರಲ್ಲಿ ನಡೆಯಲಿದೆ. ಈ ಕಾರಣಕ್ಕಾಗಿ, ಬಿಸಿಸಿಐ ತಂಡದಲ್ಲಿ ಅನೇಕ ಯುವಕರಿಗೆ ಅವಕಾಶ ನೀಡಿದೆ. ಇದು ಮುಂದಿನ ವಿಶ್ವಕಪ್ ತಂಡವನ್ನು ಸಿದ್ಧ ಮಾಡಲು ಸಹಾಯ ಮಾಡಬಹುದು. ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಅವರು ಟಿ20 ಕ್ರಿಕೆಟ್ ತೊರೆಯುವ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News