"ಭಾರತ ಸೋತಿದ್ದರೆ ಕೊಹ್ಲಿ ವಿಲನ್‌ ಆಗುತ್ತಿದ್ದರು, ಪ್ರಶಸ್ತಿಗೆ ಆತ ಅನರ್ಹ...": ಸಂಜಯ್ ಮಂಜ್ರೇಕರ್..!

Sanjay Majrekar: ಟಿ20 ವಿಶ್ವಕಪ್ 2024ರ ಫೈನಲ್‌ನಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಟೀಕಿಸಿದ್ದಾರೆ. ಕೊಹ್ಲಿ ಈ ಪ್ರಶಸ್ತಿಗೆ ಅರ್ಹರಲ್ಲ ಎಂದು ಮಂಜ್ರೇಕರ್‌ ಅಭಿಪ್ರಾಯ ಪಟ್ಟಿದ್ದಾರೆ.   

Written by - Zee Kannada News Desk | Last Updated : Jul 2, 2024, 08:00 AM IST
  • ಕೊಹ್ಲಿ ಈ ಪ್ರಶಸ್ತಿಗೆ ಅರ್ಹರಲ್ಲ ಎಂದು ಮಂಜ್ರೇಕರ್‌ ಅಭಿಪ್ರಾಯ ಪಟ್ಟಿದ್ದಾರೆ.
  • ಒಂದು ವೇಳೆ ಟೀಂ ಇಂಡಿಯಾ ಫೈನಲ್‌ನಲ್ಲಿ ಸೋತಿದ್ದರೆ ವಿರಾಟ್ ಕೊಹ್ಲಿ ತೀವ್ರ ಟೀಕೆಗೆ ಗುರಿಯಾಗುತ್ತಿದ್ದರು ಮತ್ತು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದರು.
  • ಟೀಂ ಇಂಡಿಯಾದ ಬ್ಯಾಟಿಂಗ್ ಉತ್ತಮವಾಗಿದೆ. ಆದರೆ ಕೊಹ್ಲಿ ನಿಧಾನಗತಿಯ ಬ್ಯಾಟಿಂಗ್‌ನಿಂದಾಗಿ ಟೀಂ ಇಂಡಿಯಾ ಬಿಗುವಿನ ಸನ್ನಿವೇಶಗಳನ್ನು ಎದುರಿಸಬೇಕಾಯಿತು.
 "ಭಾರತ ಸೋತಿದ್ದರೆ ಕೊಹ್ಲಿ ವಿಲನ್‌ ಆಗುತ್ತಿದ್ದರು, ಪ್ರಶಸ್ತಿಗೆ ಆತ ಅನರ್ಹ...": ಸಂಜಯ್ ಮಂಜ್ರೇಕರ್..! title=

Sanjay Majrekar: ಟಿ20 ವಿಶ್ವಕಪ್ 2024ರ ಫೈನಲ್‌ನಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಟೀಕಿಸಿದ್ದಾರೆ. ಕೊಹ್ಲಿ ಈ ಪ್ರಶಸ್ತಿಗೆ ಅರ್ಹರಲ್ಲ ಎಂದು ಮಂಜ್ರೇಕರ್‌ ಅಭಿಪ್ರಾಯ ಪಟ್ಟಿದ್ದಾರೆ. 

ನಿಧಾನಗತಿಯ ಬ್ಯಾಟಿಂಗ್‌ ಸ್ಟೈಲ್‌ನಿಂದ ಫೇಮಸ್‌ ಆಗಿರುವ ಹಾರ್ದಿಕ್ ಪಾಂಡ್ಯ ಅವರಂತಹ ಬಿಗ್ ಹಿಟ್ಟರ್‌ಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಗಲಿಲ್ಲ ಎಂದು ಹೇಳಿರುವ ಸಂಜಯ್‌ ಮಂಜ್ರೇಕರ್‌. ಒಂದು ವೇಳೆ ಟೀಂ ಇಂಡಿಯಾ ಫೈನಲ್‌ನಲ್ಲಿ ಸೋತಿದ್ದರೆ ವಿರಾಟ್ ಕೊಹ್ಲಿ ತೀವ್ರ ಟೀಕೆಗೆ ಗುರಿಯಾಗುತ್ತಿದ್ದರು ಮತ್ತು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದರು. ಕೊಹ್ಲಿ ಬದಲು ಬೌಲರ್‌ಗಳಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಬೇಕಿತ್ತು ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ಶನಿವಾರ, ಜೂನ್ 29 ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 7 ರನ್ ಗಳ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಅಗ್ರ-3 ಬ್ಯಾಟ್ಸ್‌ಮನ್‌ಗಳು ವಿಫಲರಾದಾಗ ವಿರಾಟ್ ಕೊಹ್ಲಿ ಹಾಗೂ ಅಕ್ಷರ್ ಪಟೇಲ್ ಜೊತೆಯಾಟವಾಡಿ ತಂಡವನ್ನು ಬೆಂಬಲಿಸಿದರು. ಕೊಂಚ ನಿಧಾನವಾಗಿ ಆಡಿದ ಕೊಹ್ಲಿ ತಂಡಕ್ಕೆ 76 ರನ್ ಗಳ ಹೋರಾಟದ ಗುರಿ ನೀಡಿದರು.ಇನ್ನೂ ಈ ಪಂದ್ಯದಲ್ಲಿ ಅರ್ಧಶತಕದೊಂದಿಗೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇದನ್ನೂ ಓದಿ: T20 World Cup 2024: ಭಾರತದ ಗೆಲುವಿಗೆ ವಿಷ ಉಗುಳಿದ ಆಸೀಸ್‌ ಮಾಧ್ಯಮ..!

ಆದರೆ ಸಂಜಯ್ ಮಂಜ್ರೇಕರ್ ಈ ನಿರ್ಧಾರವನ್ನು ತಪ್ಪು ಎಂದು ಟೀಕಿಸಿದ್ದಾರೆ. 'ಟೀಂ ಇಂಡಿಯಾದ ಬ್ಯಾಟಿಂಗ್ ಉತ್ತಮವಾಗಿದೆ. ಆದರೆ ಕೊಹ್ಲಿ ನಿಧಾನಗತಿಯ ಬ್ಯಾಟಿಂಗ್‌ನಿಂದಾಗಿ ಟೀಂ ಇಂಡಿಯಾ ಬಿಗುವಿನ ಸನ್ನಿವೇಶಗಳನ್ನು ಎದುರಿಸಬೇಕಾಯಿತು. ಬೌಲರ್‌ಗಳು ಅವರನ್ನು ರಕ್ಷಿಸಿದರು. ನನ್ನ ಅಭಿಪ್ರಾಯದಲ್ಲಿ ಪಂದ್ಯದ ಆಟಗಾರ ಪ್ರಶಸ್ತಿ ಬೌಲರ್‌ಗಳಿಗೆ ಸಲ್ಲಬೇಕುʼ ಎಂದಿದ್ದಾರೆ. 

ಕೊಹ್ಲಿ ನಿಧಾನಗತಿಯ ಬ್ಯಾಟಿಂಗ್ ನಿಂದಾಗಿ ಬಿಗ್ ಹಿಟ್ಟರ್ ಹಾರ್ದಿಕ್ ಪಾಂಡ್ಯ ಎರಡು ಎಸೆತಗಳನ್ನು ಮಾತ್ರ ಆಡಬೇಕಾಯಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಸೋತರೆ ವಿರಾಟ್ ಕೊಹ್ಲಿ ತೀವ್ರ ಟೀಕೆ ಎದುರಿಸಬೇಕಾಗುತ್ತಿತ್ತು,'' ಎಂದು ಹೇಳಿದ್ದಾರೆ ಸಂಜಯ್‌. ಆದರೆ ಈ ಕಾಮೆಂಟ್‌ಗಳನ್ನು ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಆಂಡಿ ಫ್ಲವರ್ ನಿರಾಕರಿಸಿದ್ದು, ಟೀಂ ಇಂಡಿಯಾ ದಾಖಲಿಸಿರುವ 176 ರನ್‌ಗಳ ಗುರಿ ತುಂಬಾ ದೊಡ್ಡದು, ಕೊಹ್ಲಿ ಉತ್ತಮ ಪ್ರದರ್ಶನ ನೀಡದಿದ್ದರೆ ಟೀಂ ಇಂಡಿಯಾ ಈ ಸ್ಕೋರ್ ಮಾಡುತ್ತಿರಲಿಲ್ಲ ಎಂದಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News