“ಇದೇ ಕಾರಣಕ್ಕೆ ರೋಹಿತ್ ಬದಲು ಹಾರ್ದಿಕ್’ಗೆ ಮುಂಬೈ ನಾಯಕತ್ವ ನೀಡಿದ್ದು”- ಕೊನೆಗೂ ಸತ್ಯ ಬಿಚ್ಚಿಟ್ಟ ಸುನಿಲ್ ಗವಾಸ್ಕರ್

Sunil Gavaskar Statement on Mumbai Indians Captaincy: ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಅನುಭವಿ ಟೆಸ್ಟ್ ಓಪನರ್ ಸುನಿಲ್ ಗವಾಸ್ಕರ್ ಅವರು ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ನಾಯಕನನ್ನಾಗಿ ಮಾಡಿರುವ ಬಗ್ಗೆ ಹೇಳಿಕೆ ನೀಡಿದ್ದಾರೆ.

Written by - Bhavishya Shetty | Last Updated : Feb 14, 2024, 12:42 PM IST
    • ಹಾರ್ದಿಕ್ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್ ನಾಯಕನನ್ನಾಗಿ ಮಾಡಿರುವ ಬಗ್ಗೆ ಹೇಳಿಕೆ
    • ಮುಂಬೈ ಇಂಡಿಯನ್ಸ್ ಅಭಿಮಾನಿಗಳಲ್ಲಿ ಭಾರೀ ಅಸಮಾಧಾನ ವ್ಯಕ್ತವಾಗಿತ್ತು
    • ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಮಹತ್ವದ ಹೇಳಿಕೆ
“ಇದೇ ಕಾರಣಕ್ಕೆ ರೋಹಿತ್ ಬದಲು ಹಾರ್ದಿಕ್’ಗೆ ಮುಂಬೈ ನಾಯಕತ್ವ ನೀಡಿದ್ದು”- ಕೊನೆಗೂ ಸತ್ಯ ಬಿಚ್ಚಿಟ್ಟ ಸುನಿಲ್ ಗವಾಸ್ಕರ್  title=
Sunil Gavaskar

Sunil Gavaskar Statement: ಕೆಲವು ದಿನಗಳ ಹಿಂದೆ ಮುಂಬೈ ಇಂಡಿಯನ್ಸ್ ಆಡಳಿತ ಮಂಡಳಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡು, ಈ ಬಾರಿಯ ಐಪಿಎಲ್ ಸೀಸನ್’ನಲ್ಲಿ ರೋಹಿತ್ ಶರ್ಮಾ ಅವರನ್ನು ನಾಯಕ ಸ್ಥಾನದಿಂದ ತೆಗೆದು ಹಾಕಿ ಹಾರ್ದಿಕ್ ಪಾಂಡ್ಯಗೆ ಆ ಸ್ಥಾನ ನೀಡಲಾಗಿತ್ತು. ಇದಾದ ಬಳಿಕ ಮುಂಬೈ ಇಂಡಿಯನ್ಸ್ ಅಭಿಮಾನಿಗಳಲ್ಲಿ ಭಾರೀ ಅಸಮಾಧಾನ ವ್ಯಕ್ತವಾಗಿತ್ತು. ಈ ನಡುವೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಮಹತ್ವದ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಅಬುಧಾಬಿಯ ಮೊದಲ ಹಿಂದೂ ದೇವಾಲಯಕ್ಕೆ ಗಂಗಾ-ಯಮುನೆಯ ಪವಿತ್ರ ನೀರು: ಈ ಮಂದಿರದ ವಿಶೇಷತೆ ಏನು ಗೊತ್ತಾ?

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಅನುಭವಿ ಟೆಸ್ಟ್ ಓಪನರ್ ಸುನಿಲ್ ಗವಾಸ್ಕರ್ ಅವರು ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ನಾಯಕನನ್ನಾಗಿ ಮಾಡಿರುವ ಬಗ್ಗೆ ಹೇಳಿಕೆ ನೀಡಿದ್ದಾರೆ. “ಹಾರ್ದಿಕ್ ಪಾಂಡ್ಯ ನಾಯಕರಾಗುವುದರಿಂದ ಮುಂಬೈ ಇಂಡಿಯನ್ಸ್‌’ಗೆ ಲಾಭವಾಗಲಿದೆ. ಈ ಬದಲಾವಣೆಯು ರೋಹಿತ್ ಶರ್ಮಾ ಅವರ ಹೆಗಲ ಮೇಲಿರುವ ನಾಯಕತ್ವದ ಭಾರವನ್ನು ಕಡಿಮೆ ಮಾಡುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:  Virat Kohli: ವಿರಾಟ್ ಕೊಹ್ಲಿಗೆ ಈ 3 ಹಾಡುಗಳೆಂದರೆ ಪಂಚಪ್ರಾಣ: ಕಿವಿಗೆ ಬಿದ್ದರೆ ಸಾಕು ನಿಂತಲ್ಲೇ ಕುಣಿತಾರಂತೆ…!

ಸುನಿಲ್ ಗವಾಸ್ಕರ್ ಹೇಳಿದ್ದೇನು?

“ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ನೇಮಿಸಿದ ನಂತರ ಮುಂಬೈ ಇಂಡಿಯನ್ಸ್ ಮಾತ್ರವಲ್ಲದೆ ರೋಹಿತ್ ಶರ್ಮಾ ಕೂಡ ಲಾಭ ಪಡೆಯುತ್ತಾರೆ. ಈ ಬಾರಿ ರೋಹಿತ್‌’ಗೆ ಅಗ್ರ ಕ್ರಮಾಂಕದಲ್ಲಿ ಟೆನ್ಷನ್ ಫ್ರೀ ಬ್ಯಾಟ್ ಮಾಡುವ ಸ್ವಾತಂತ್ರ್ಯ ಸಿಗಲಿದೆ. ಹಾರ್ದಿಕ್ ಮೂರು ಅಥವಾ ಐದನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಹುದು. ಮುಂಬೈ ಇಂಡಿಯನ್ಸ್ ಸತತವಾಗಿ 200ಕ್ಕೂ ಹೆಚ್ಚು ರನ್ ಗಳಿಸುವಲ್ಲಿ ಯಶಸ್ವಿಯಾಗಬಹುದು” ಎಂದು ಲಿಟಲ್ ಮಾಸ್ಟರ್ ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News